Categories: ಕೋಲಾರ

ಅಕ್ರಮ ಯೂರಿಯಾ ದಾಸ್ತಾನು ಮಾಲೀಕರ ವಿರುದ್ಧ ಕ್ರಮಕ್ಕೆ ರೈತ ಸಂಘ ಒತ್ತಾಯ

ಕೋಲಾರ: ಯೂರಿಯಾ ಅಕ್ರಮ ದಾಸ್ತಾನು ಮಾಡಿ ಕೃತಕ ಅಭಾವ ಸೃಷ್ಟಿ ಮಾಡಿ ದುಬಾರಿ ಬೆಲೆಗೆ ಮಾರಾಟ ಮಾಡುವ ರಸಗೊಬ್ಬರ ಅಂಗಡಿ ಮಾಲೀಕರ ವಿರುದ್ದ ಕ್ರಮ ಕೈಗೊಂಡು ರೈತರಿಗೆ ಅವಶ್ಯಕತೆ ಇರುವ ಯೂರಿಯಾವನ್ನು ಟಿಎಪಿಸಿಎಂಎಸ್ ವತಿಯಿಂದ ವಿತರಣೆ ಮಾಡಬೇಕೆಂದು ರೈತ ಸಂಘದಿಂದ ಯೂರಿಯಾ ಸಮೇತ ಸಹಾಯಕ ಕೃಷಿ ನಿರ್ದೇಶಕ ಮಹೇಶ್ ರವರಿಗೆ ಮನವಿ ನೀಡಿ, ಒತ್ತಾಯಿಸಲಾಯಿತು.

ರಸಗೊಬ್ಬರ ಮಾರಾಟಗಾರರು ಗೊಬ್ಬರ ಉತ್ಪಾದನಾ ಕಂಪನಿಗಳ ನಿಯಮಗಳನ್ನು ಪಾಲನೆ ಮಾಡುವಂತೆ ರೈತರಿಗೆ ಅವಶ್ಯಕತೆ ಇರುವ ಯೂರಿಯಾ ಬೇಕಾದರೆ ಅದಕ್ಕೆ ಸಂಬಂಧಪಟ್ಟ ಕಂಪನಿ ಬೇರೆ ಗೊಬ್ಬರ ಖರೀದಿ ಮಾಡಿದರೆ ಮಾತ್ರ ಯೂರಿಯಾ ನೀಡುತ್ತೇವೆಂದು ರೈತರ ಮೇಲೆ ಒತ್ತಡ ಹಾಕುತ್ತಿರುವುದು ಯಾವ ನ್ಯಾಯವಾಗಿದೆ ೩೦೦ ರೂ ಯೂರಿಯಾ ಮೂಟೆಗೆ ಬದಲಿಯಾಗಿ ೩ ಸಾವಿರ ರೂಪಾಯಿ ಗೊಬ್ಬರವನ್ನು ಖರೀದಿಸುವಂತೆ ಒತ್ತಡ ಹೇರುತ್ತಾರೆ ಯೂರಿಯವನ್ನು ಆಂದ್ರಕ್ಕೆ ಅಕ್ರಮವಾಗಿ ಮಾರಾಟಮಾಡುತ್ತಿದ್ದಾರೆಂದು ನೊಂದ ರೈತ ಮಂಗಸಂದ್ರ ತಿಮ್ಮಣ್ಣ ಅಸಮಾಧಾನ ವ್ಯಕ್ತಪಡಿಸಿದರು.

ಮುಂಗಾರು ಮಳೆ ಉತ್ತಮ ನಿರೀಕ್ಷೆಯಲ್ಲಿದ್ದ ರೈತರು ಕೃಷಿ ಚಟುವಟಗಳಿಗೆ ಅವಶ್ಯಕತೆ ಇರುವ ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು ಮಾಡಿಕೊಂಡು ಖಾತರದಿಂದ ಮುಂಗಾರು ಮಳೆಗೆ ಕಾಯುತ್ತಿದ್ದ ರೈತರಿಗೆ ಬರಸಿಡಿಲು ಬಂಡಿದಂತಾಗಿದೆ. ಯಾಕೋ ಮುಂಗಾರು ಮಳೆ ರೈತನ ಮೇಲೆ ಮುನಿಸಿಕೊಂಡು ವರ್ಷದ ಗಂಜಿಪಾತ್ರೆಯನ್ನು ಕಸಿದುಕೊಂಡಿರುವುದು ವಿಪರ್ಯಾಸ. ಜೊತೆಗೆ ಬಿತ್ತನೆಯಾಗಿರುವ ಶೇಕಡ ೧೦ ರಷ್ಟರ ಕೃಷಿ ರಾಗಿ ಮತ್ತಿತರ ಬೆಳೆಗಳಿಗೆ ಅವಶ್ಯಕತೆ ಇರುವ ಯೂರಿಯಾ ಕೃತಕ ಅಭಾವ ಸೃಷ್ಟಿಸಿ ದುಬಾರಿ ಬೆಲೆಗೆ ಮಾರಾಟ ಮಾಡುವ ಮುಖಾಂತರ ರೈತರನ್ನು ಗೊಬ್ಬರ ಅಂಗಡಿ ಮಾಲೀಕರು ವಂಚನೆ ಮಾಡುತ್ತಿದ್ದರೂ ಕ್ರಮ ಕೈಗೊಳ್ಳಬೇಕಾದ ಅಧಿಕಾರಿಗಳು ಮೌನವೇಕೆ ಎಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಪ್ರಶ್ನೆ ಮಾಡಿದರು.

ರಾಜ್ಯ ಸರ್ಕಾರ ಪ್ರತಿವರ್ಷ ಮುಂಗಾರು ಮಳೆ ಪ್ರಾರಂಭವಾದಾಗ ಕೃಷಿ ಮಂತ್ರಿಗಳು ಪತ್ರಿಕಾ ಮತ್ತು ಮಾದ್ಯಮಗಳ ಮುಖಾಂತರ ರಾಜ್ಯದಲ್ಲಿ ಮುಂಗಾರು ಮಳೆಯ ಕೃಷಿ ಬಿತ್ತನೆಗೆ ಅವಶ್ಯಕತೆ ಇರುವ ಬಿತ್ತನೆ ಬೀಜ, ರಸಗೊಬ್ಬರ ಕೊರತೆ ಇಲ್ಲ. ಆಯಾ ಜಿಲ್ಲೆಯ ಕೃಷಿ ಕೇಂದ್ರಗಳಲ್ಲಿ ದಾಸ್ತಾನುವಾಗಿದೆ ಎಂದು ಹೇಳುತ್ತಿರುತ್ತಾರೆ. ಮತೊಂದಡೆ ಕೃತಕ ಅಭಾವ ಸೃಷ್ಟಿ ಮಾಡಿ ಬಿತ್ತನೆ ಬೀಜ ರಸಗೊಬ್ಬರಕ್ಕಾಗಿ ರೈತರು ಅಲೆದಾಡುವ ಜೊತೆಗೆ ಗೋಲಿಬಾರ್ ಲಾಟಿಚಾರ್ಜ್ ಆಗುತ್ತಿರುವ ಪ್ರಕರಣಗಳು ಪ್ರತಿವರ್ಷ ನಡೆಯುತ್ತಿರುವುದು ಕಾರಣವಾದರೂ ಏನು. ಕೃಷಿ ಮಂತ್ರಿಗಳಿಗೆ ಕೃಷಿ ಅಧಿಕಾರಿಗಳು ತಪ್ಪು ಮಾಹಿತಿಯ ಕೊರತೆ ನೀಡುತ್ತಿದ್ದಾರೆಯೇ ಎಂದು ಅವ್ಯವಸ್ಥ ವಿರುದ್ದ ಅಸಮದಾನ ವ್ಯಕ್ತಪಡಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಸಹಾಯಕ ಕೃಷಿ ನಿರ್ದೇಶಕ ಮಹೇಶ್ ಯುರಿಯಾ ಖರೀದಿ ಮಾಡುವ ರೈತರಿಗೆ ಪರ್ಯಾಯ ಗೊಬ್ಬರ ಲಿಂಕ್ ಮಾಡಿ ಡಿ.ಎ.ಪಿ ಗೊಬ್ಬರ ತೆಗೆದುಕೊಂಡರೆ ಯೂರಿಯಾ ನೀಡುತ್ತೇವೆ ಎಂಬ ರೈತರ ದೂರುಗಳು ಇಲಾಖೆಗೆ ಬಂದಿವೆ. ಜೊತಗೆ ಪರವಾನಿಗೆ ಪಡೆದು ಯೂರಿಯಾವನ್ನು ಅಕ್ರಮ ದಾಸ್ತಾನು ಮಾಡಿ ದುಪಟ್ಟು ಬೆಲೆಗೆ ಮಾರಾಟ ಮಾಡುವ ಅಂಗಡಿಗಳ ವಿರುದ್ದ ಕ್ರಮಕೈಗೊಂಡು ರೈತರಿಗೆ ಸರ್ಕಾರ ನಿಗಧಿ ಮಾಡುವ ಬೆಲೆಗೆ ನೀಡುವಂತೆ ನೋಟಿಸ್ ಕೊಡಿಸಿ ಸಮಸ್ಯೆ ಬಗೆ ಹರಿಸುವ ಭರವಸೆಯನ್ನು ನೀಡಿದರು.

ಮನವಿ ನೀಡುವಾಗ ಮಹಿಳಾ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ, ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ, ವಕ್ಕಲೇರಿ ಹನುಮಯ್ಯ, ಯಾರಂಘಟ್ಟ ಗಿರೀಶ್, ನರಸಿಂಹಯ್ಯ, ಕುವಣ್ಣ, ವೆಂಕಟೇಶಪ್ಪ, ಮಾಸ್ತಿ ಯಲ್ಲಣ್ಣ, ಹರೀಶ್, ಮುಂತಾದವರು ಇದ್ದರು.

Ramesh Babu

Journalist

Recent Posts

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

8 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

21 hours ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

22 hours ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

23 hours ago

ಪುರುಷಾಧಿಪತ್ಯಕ್ಕೆ ಸೆಡ್ಡು ಹೊಡೆದು, ತಂದೆ ಅಂತ್ಯಸಂಸ್ಕಾರ ಮಾಡಿದ ಹೆಣ್ಣುಮಕ್ಕಳು

ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…

1 day ago

ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ.!

ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್‌ನ ಮೆಡ್ಚಲ್ ಪ್ರದೇಶದಲ್ಲಿ…

1 day ago