Categories: ಕೋಲಾರ

ಅಕ್ರಮ ಯೂರಿಯಾ ದಾಸ್ತಾನು ಮಾಲೀಕರ ವಿರುದ್ಧ ಕ್ರಮಕ್ಕೆ ರೈತ ಸಂಘ ಒತ್ತಾಯ

ಕೋಲಾರ: ಯೂರಿಯಾ ಅಕ್ರಮ ದಾಸ್ತಾನು ಮಾಡಿ ಕೃತಕ ಅಭಾವ ಸೃಷ್ಟಿ ಮಾಡಿ ದುಬಾರಿ ಬೆಲೆಗೆ ಮಾರಾಟ ಮಾಡುವ ರಸಗೊಬ್ಬರ ಅಂಗಡಿ ಮಾಲೀಕರ ವಿರುದ್ದ ಕ್ರಮ ಕೈಗೊಂಡು ರೈತರಿಗೆ ಅವಶ್ಯಕತೆ ಇರುವ ಯೂರಿಯಾವನ್ನು ಟಿಎಪಿಸಿಎಂಎಸ್ ವತಿಯಿಂದ ವಿತರಣೆ ಮಾಡಬೇಕೆಂದು ರೈತ ಸಂಘದಿಂದ ಯೂರಿಯಾ ಸಮೇತ ಸಹಾಯಕ ಕೃಷಿ ನಿರ್ದೇಶಕ ಮಹೇಶ್ ರವರಿಗೆ ಮನವಿ ನೀಡಿ, ಒತ್ತಾಯಿಸಲಾಯಿತು.

ರಸಗೊಬ್ಬರ ಮಾರಾಟಗಾರರು ಗೊಬ್ಬರ ಉತ್ಪಾದನಾ ಕಂಪನಿಗಳ ನಿಯಮಗಳನ್ನು ಪಾಲನೆ ಮಾಡುವಂತೆ ರೈತರಿಗೆ ಅವಶ್ಯಕತೆ ಇರುವ ಯೂರಿಯಾ ಬೇಕಾದರೆ ಅದಕ್ಕೆ ಸಂಬಂಧಪಟ್ಟ ಕಂಪನಿ ಬೇರೆ ಗೊಬ್ಬರ ಖರೀದಿ ಮಾಡಿದರೆ ಮಾತ್ರ ಯೂರಿಯಾ ನೀಡುತ್ತೇವೆಂದು ರೈತರ ಮೇಲೆ ಒತ್ತಡ ಹಾಕುತ್ತಿರುವುದು ಯಾವ ನ್ಯಾಯವಾಗಿದೆ ೩೦೦ ರೂ ಯೂರಿಯಾ ಮೂಟೆಗೆ ಬದಲಿಯಾಗಿ ೩ ಸಾವಿರ ರೂಪಾಯಿ ಗೊಬ್ಬರವನ್ನು ಖರೀದಿಸುವಂತೆ ಒತ್ತಡ ಹೇರುತ್ತಾರೆ ಯೂರಿಯವನ್ನು ಆಂದ್ರಕ್ಕೆ ಅಕ್ರಮವಾಗಿ ಮಾರಾಟಮಾಡುತ್ತಿದ್ದಾರೆಂದು ನೊಂದ ರೈತ ಮಂಗಸಂದ್ರ ತಿಮ್ಮಣ್ಣ ಅಸಮಾಧಾನ ವ್ಯಕ್ತಪಡಿಸಿದರು.

ಮುಂಗಾರು ಮಳೆ ಉತ್ತಮ ನಿರೀಕ್ಷೆಯಲ್ಲಿದ್ದ ರೈತರು ಕೃಷಿ ಚಟುವಟಗಳಿಗೆ ಅವಶ್ಯಕತೆ ಇರುವ ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು ಮಾಡಿಕೊಂಡು ಖಾತರದಿಂದ ಮುಂಗಾರು ಮಳೆಗೆ ಕಾಯುತ್ತಿದ್ದ ರೈತರಿಗೆ ಬರಸಿಡಿಲು ಬಂಡಿದಂತಾಗಿದೆ. ಯಾಕೋ ಮುಂಗಾರು ಮಳೆ ರೈತನ ಮೇಲೆ ಮುನಿಸಿಕೊಂಡು ವರ್ಷದ ಗಂಜಿಪಾತ್ರೆಯನ್ನು ಕಸಿದುಕೊಂಡಿರುವುದು ವಿಪರ್ಯಾಸ. ಜೊತೆಗೆ ಬಿತ್ತನೆಯಾಗಿರುವ ಶೇಕಡ ೧೦ ರಷ್ಟರ ಕೃಷಿ ರಾಗಿ ಮತ್ತಿತರ ಬೆಳೆಗಳಿಗೆ ಅವಶ್ಯಕತೆ ಇರುವ ಯೂರಿಯಾ ಕೃತಕ ಅಭಾವ ಸೃಷ್ಟಿಸಿ ದುಬಾರಿ ಬೆಲೆಗೆ ಮಾರಾಟ ಮಾಡುವ ಮುಖಾಂತರ ರೈತರನ್ನು ಗೊಬ್ಬರ ಅಂಗಡಿ ಮಾಲೀಕರು ವಂಚನೆ ಮಾಡುತ್ತಿದ್ದರೂ ಕ್ರಮ ಕೈಗೊಳ್ಳಬೇಕಾದ ಅಧಿಕಾರಿಗಳು ಮೌನವೇಕೆ ಎಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಪ್ರಶ್ನೆ ಮಾಡಿದರು.

ರಾಜ್ಯ ಸರ್ಕಾರ ಪ್ರತಿವರ್ಷ ಮುಂಗಾರು ಮಳೆ ಪ್ರಾರಂಭವಾದಾಗ ಕೃಷಿ ಮಂತ್ರಿಗಳು ಪತ್ರಿಕಾ ಮತ್ತು ಮಾದ್ಯಮಗಳ ಮುಖಾಂತರ ರಾಜ್ಯದಲ್ಲಿ ಮುಂಗಾರು ಮಳೆಯ ಕೃಷಿ ಬಿತ್ತನೆಗೆ ಅವಶ್ಯಕತೆ ಇರುವ ಬಿತ್ತನೆ ಬೀಜ, ರಸಗೊಬ್ಬರ ಕೊರತೆ ಇಲ್ಲ. ಆಯಾ ಜಿಲ್ಲೆಯ ಕೃಷಿ ಕೇಂದ್ರಗಳಲ್ಲಿ ದಾಸ್ತಾನುವಾಗಿದೆ ಎಂದು ಹೇಳುತ್ತಿರುತ್ತಾರೆ. ಮತೊಂದಡೆ ಕೃತಕ ಅಭಾವ ಸೃಷ್ಟಿ ಮಾಡಿ ಬಿತ್ತನೆ ಬೀಜ ರಸಗೊಬ್ಬರಕ್ಕಾಗಿ ರೈತರು ಅಲೆದಾಡುವ ಜೊತೆಗೆ ಗೋಲಿಬಾರ್ ಲಾಟಿಚಾರ್ಜ್ ಆಗುತ್ತಿರುವ ಪ್ರಕರಣಗಳು ಪ್ರತಿವರ್ಷ ನಡೆಯುತ್ತಿರುವುದು ಕಾರಣವಾದರೂ ಏನು. ಕೃಷಿ ಮಂತ್ರಿಗಳಿಗೆ ಕೃಷಿ ಅಧಿಕಾರಿಗಳು ತಪ್ಪು ಮಾಹಿತಿಯ ಕೊರತೆ ನೀಡುತ್ತಿದ್ದಾರೆಯೇ ಎಂದು ಅವ್ಯವಸ್ಥ ವಿರುದ್ದ ಅಸಮದಾನ ವ್ಯಕ್ತಪಡಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಸಹಾಯಕ ಕೃಷಿ ನಿರ್ದೇಶಕ ಮಹೇಶ್ ಯುರಿಯಾ ಖರೀದಿ ಮಾಡುವ ರೈತರಿಗೆ ಪರ್ಯಾಯ ಗೊಬ್ಬರ ಲಿಂಕ್ ಮಾಡಿ ಡಿ.ಎ.ಪಿ ಗೊಬ್ಬರ ತೆಗೆದುಕೊಂಡರೆ ಯೂರಿಯಾ ನೀಡುತ್ತೇವೆ ಎಂಬ ರೈತರ ದೂರುಗಳು ಇಲಾಖೆಗೆ ಬಂದಿವೆ. ಜೊತಗೆ ಪರವಾನಿಗೆ ಪಡೆದು ಯೂರಿಯಾವನ್ನು ಅಕ್ರಮ ದಾಸ್ತಾನು ಮಾಡಿ ದುಪಟ್ಟು ಬೆಲೆಗೆ ಮಾರಾಟ ಮಾಡುವ ಅಂಗಡಿಗಳ ವಿರುದ್ದ ಕ್ರಮಕೈಗೊಂಡು ರೈತರಿಗೆ ಸರ್ಕಾರ ನಿಗಧಿ ಮಾಡುವ ಬೆಲೆಗೆ ನೀಡುವಂತೆ ನೋಟಿಸ್ ಕೊಡಿಸಿ ಸಮಸ್ಯೆ ಬಗೆ ಹರಿಸುವ ಭರವಸೆಯನ್ನು ನೀಡಿದರು.

ಮನವಿ ನೀಡುವಾಗ ಮಹಿಳಾ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ, ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ, ವಕ್ಕಲೇರಿ ಹನುಮಯ್ಯ, ಯಾರಂಘಟ್ಟ ಗಿರೀಶ್, ನರಸಿಂಹಯ್ಯ, ಕುವಣ್ಣ, ವೆಂಕಟೇಶಪ್ಪ, ಮಾಸ್ತಿ ಯಲ್ಲಣ್ಣ, ಹರೀಶ್, ಮುಂತಾದವರು ಇದ್ದರು.

Ramesh Babu

Journalist

Recent Posts

ಅನಾಥರು, ಅಶಕ್ತ ಹೆಣ್ಣು ಮಕ್ಕಳಿಗೆ ಯುವಿಕಾ ವರದಾನ

ಸಮಾಜದ ಭವಿಷ್ಯವನ್ನು ರೂಪಿಸುವಲ್ಲಿ ಮಕ್ಕಳ ರಕ್ಷಣೆ ಮತ್ತು ಶಿಕ್ಷಣದ ಪಾತ್ರ ಅತೀವ ಮಹತ್ವದ್ದಾಗಿದೆ. ಕಳೆದ ಇಪ್ಪತ್ತು ವರ್ಷಗಳಿಂದ ಈ ದಾರಿಯಲ್ಲಿ…

7 hours ago

ಮೇ.8ರಂದು ಜೆಡಿಎಸ್ ರಜತ ಮಹೋತ್ಸವ: ನಿಖಿಲ್ ಕುಮಾರಸ್ವಾಮಿ ಭಾಗಿ- ಜೆಡಿಎಸ್ ತಾಲೂಕು ಅಧ್ಯಕ್ಷ ಹರೀಶ್ ಗೌಡ

ದೊಡ್ಡಬಳ್ಳಾಪುರ: ನಾಡಿನ ಜನರ ನಾಡಿ ಮಿಡಿತವನ್ನು ಅರಿತು ಪ್ರಾದೇಶಿಕವಾಗಿ ಅಭಿವೃದ್ಧಿ ಹೊಂದಲು ಜೆಡಿಎಸ್ ಪಕ್ಷ ಸ್ಥಾಪನೆಯಾಗಿದೆ. ಮೇ.8ಕ್ಕೆ 25 ವರ್ಷಗಳನ್ನು…

8 hours ago

ಹನ್ನೊಂದು ಮಂದಿ ಬಾಲ ಕಾರ್ಮಿಕರ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಹೋಬಳಿ ವ್ಯಾಪ್ತಿಯಲ್ಲಿ ಖಾಸಗಿ ಕಂಪನಿಗೆ ಸೇರಿದ ಗೋಡೌನ್ ಒಂದರಲ್ಲಿ ರಾತ್ರಿ ಪಾಳಿಯಲ್ಲಿ…

9 hours ago

ತಾಲ್ಲೂಕಿನಲ್ಲಿ ಜೆಡಿಎಸ್ ತನ್ನ ಶಕ್ತಿ ಕಳೆದುಕೊಳ್ಳಲು ಪಕ್ಷ ವಿರೋಧಿ ಚಟುವಟಿಕೆಗಳೇ ಕಾರಣ- ಜೆಡಿಎಸ್ ಮುಖಂಡ ಹುಸ್ಕೂರ್ ಆನಂದ್

ದೊಡ್ಡಬಳ್ಳಾಪುರದ ಜೆಡಿಎಸ್ ನಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡುವ ಬಣ, ಪಕ್ಷಕ್ಕೆ ನಿಷ್ಠಾವಂತರಾಗಿ ದುಡಿಯುವ ಕಾರ್ಯಕರ್ತರ ಬಣ ಎಂಬ ಎರಡು…

9 hours ago

ಖಾಸಗಿ ಟೆಂಡರ್ ದಾರರ ಬೇಜವಾಬ್ದಾರಿ: ಕುಡಿಯಲು ನೀರಿಲ್ಲದೇ ಜನ ಪರದಾಟ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯತಿ ಬಿಸವನಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಪಂಚಾಯಿತಿಯಿಂದ ನಿರ್ವಹಣೆ ಮಾಡದೇ ಖಾಸಗಿ…

10 hours ago

ಅಕ್ರಮ ಪಡಿತರ ಅಕ್ಕಿ, ರಾಗಿ ವಶಕ್ಕೆ, ಪ್ರಕರಣ ದಾಖಲು

ಆಹಾರ ಸಚಿವ ಹಾಗೂ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪನವರ ಜಿಲ್ಲೆಯಲ್ಲಿ ಬಡವರಿಗೆ ನೀಡಬೇಕಿದ್ದ ಪಡಿತರ ಅಕ್ಕಿ, ರಾಗಿಯನ್ನು ಕಾಳ ಸಂತೆಯಲ್ಲಿ…

18 hours ago