Categories: ಕೋಲಾರ

ಅಕ್ರಮ ಯೂರಿಯಾ ದಾಸ್ತಾನು ಮಾಲೀಕರ ವಿರುದ್ಧ ಕ್ರಮಕ್ಕೆ ರೈತ ಸಂಘ ಒತ್ತಾಯ

ಕೋಲಾರ: ಯೂರಿಯಾ ಅಕ್ರಮ ದಾಸ್ತಾನು ಮಾಡಿ ಕೃತಕ ಅಭಾವ ಸೃಷ್ಟಿ ಮಾಡಿ ದುಬಾರಿ ಬೆಲೆಗೆ ಮಾರಾಟ ಮಾಡುವ ರಸಗೊಬ್ಬರ ಅಂಗಡಿ ಮಾಲೀಕರ ವಿರುದ್ದ ಕ್ರಮ ಕೈಗೊಂಡು ರೈತರಿಗೆ ಅವಶ್ಯಕತೆ ಇರುವ ಯೂರಿಯಾವನ್ನು ಟಿಎಪಿಸಿಎಂಎಸ್ ವತಿಯಿಂದ ವಿತರಣೆ ಮಾಡಬೇಕೆಂದು ರೈತ ಸಂಘದಿಂದ ಯೂರಿಯಾ ಸಮೇತ ಸಹಾಯಕ ಕೃಷಿ ನಿರ್ದೇಶಕ ಮಹೇಶ್ ರವರಿಗೆ ಮನವಿ ನೀಡಿ, ಒತ್ತಾಯಿಸಲಾಯಿತು.

ರಸಗೊಬ್ಬರ ಮಾರಾಟಗಾರರು ಗೊಬ್ಬರ ಉತ್ಪಾದನಾ ಕಂಪನಿಗಳ ನಿಯಮಗಳನ್ನು ಪಾಲನೆ ಮಾಡುವಂತೆ ರೈತರಿಗೆ ಅವಶ್ಯಕತೆ ಇರುವ ಯೂರಿಯಾ ಬೇಕಾದರೆ ಅದಕ್ಕೆ ಸಂಬಂಧಪಟ್ಟ ಕಂಪನಿ ಬೇರೆ ಗೊಬ್ಬರ ಖರೀದಿ ಮಾಡಿದರೆ ಮಾತ್ರ ಯೂರಿಯಾ ನೀಡುತ್ತೇವೆಂದು ರೈತರ ಮೇಲೆ ಒತ್ತಡ ಹಾಕುತ್ತಿರುವುದು ಯಾವ ನ್ಯಾಯವಾಗಿದೆ ೩೦೦ ರೂ ಯೂರಿಯಾ ಮೂಟೆಗೆ ಬದಲಿಯಾಗಿ ೩ ಸಾವಿರ ರೂಪಾಯಿ ಗೊಬ್ಬರವನ್ನು ಖರೀದಿಸುವಂತೆ ಒತ್ತಡ ಹೇರುತ್ತಾರೆ ಯೂರಿಯವನ್ನು ಆಂದ್ರಕ್ಕೆ ಅಕ್ರಮವಾಗಿ ಮಾರಾಟಮಾಡುತ್ತಿದ್ದಾರೆಂದು ನೊಂದ ರೈತ ಮಂಗಸಂದ್ರ ತಿಮ್ಮಣ್ಣ ಅಸಮಾಧಾನ ವ್ಯಕ್ತಪಡಿಸಿದರು.

ಮುಂಗಾರು ಮಳೆ ಉತ್ತಮ ನಿರೀಕ್ಷೆಯಲ್ಲಿದ್ದ ರೈತರು ಕೃಷಿ ಚಟುವಟಗಳಿಗೆ ಅವಶ್ಯಕತೆ ಇರುವ ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು ಮಾಡಿಕೊಂಡು ಖಾತರದಿಂದ ಮುಂಗಾರು ಮಳೆಗೆ ಕಾಯುತ್ತಿದ್ದ ರೈತರಿಗೆ ಬರಸಿಡಿಲು ಬಂಡಿದಂತಾಗಿದೆ. ಯಾಕೋ ಮುಂಗಾರು ಮಳೆ ರೈತನ ಮೇಲೆ ಮುನಿಸಿಕೊಂಡು ವರ್ಷದ ಗಂಜಿಪಾತ್ರೆಯನ್ನು ಕಸಿದುಕೊಂಡಿರುವುದು ವಿಪರ್ಯಾಸ. ಜೊತೆಗೆ ಬಿತ್ತನೆಯಾಗಿರುವ ಶೇಕಡ ೧೦ ರಷ್ಟರ ಕೃಷಿ ರಾಗಿ ಮತ್ತಿತರ ಬೆಳೆಗಳಿಗೆ ಅವಶ್ಯಕತೆ ಇರುವ ಯೂರಿಯಾ ಕೃತಕ ಅಭಾವ ಸೃಷ್ಟಿಸಿ ದುಬಾರಿ ಬೆಲೆಗೆ ಮಾರಾಟ ಮಾಡುವ ಮುಖಾಂತರ ರೈತರನ್ನು ಗೊಬ್ಬರ ಅಂಗಡಿ ಮಾಲೀಕರು ವಂಚನೆ ಮಾಡುತ್ತಿದ್ದರೂ ಕ್ರಮ ಕೈಗೊಳ್ಳಬೇಕಾದ ಅಧಿಕಾರಿಗಳು ಮೌನವೇಕೆ ಎಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಪ್ರಶ್ನೆ ಮಾಡಿದರು.

ರಾಜ್ಯ ಸರ್ಕಾರ ಪ್ರತಿವರ್ಷ ಮುಂಗಾರು ಮಳೆ ಪ್ರಾರಂಭವಾದಾಗ ಕೃಷಿ ಮಂತ್ರಿಗಳು ಪತ್ರಿಕಾ ಮತ್ತು ಮಾದ್ಯಮಗಳ ಮುಖಾಂತರ ರಾಜ್ಯದಲ್ಲಿ ಮುಂಗಾರು ಮಳೆಯ ಕೃಷಿ ಬಿತ್ತನೆಗೆ ಅವಶ್ಯಕತೆ ಇರುವ ಬಿತ್ತನೆ ಬೀಜ, ರಸಗೊಬ್ಬರ ಕೊರತೆ ಇಲ್ಲ. ಆಯಾ ಜಿಲ್ಲೆಯ ಕೃಷಿ ಕೇಂದ್ರಗಳಲ್ಲಿ ದಾಸ್ತಾನುವಾಗಿದೆ ಎಂದು ಹೇಳುತ್ತಿರುತ್ತಾರೆ. ಮತೊಂದಡೆ ಕೃತಕ ಅಭಾವ ಸೃಷ್ಟಿ ಮಾಡಿ ಬಿತ್ತನೆ ಬೀಜ ರಸಗೊಬ್ಬರಕ್ಕಾಗಿ ರೈತರು ಅಲೆದಾಡುವ ಜೊತೆಗೆ ಗೋಲಿಬಾರ್ ಲಾಟಿಚಾರ್ಜ್ ಆಗುತ್ತಿರುವ ಪ್ರಕರಣಗಳು ಪ್ರತಿವರ್ಷ ನಡೆಯುತ್ತಿರುವುದು ಕಾರಣವಾದರೂ ಏನು. ಕೃಷಿ ಮಂತ್ರಿಗಳಿಗೆ ಕೃಷಿ ಅಧಿಕಾರಿಗಳು ತಪ್ಪು ಮಾಹಿತಿಯ ಕೊರತೆ ನೀಡುತ್ತಿದ್ದಾರೆಯೇ ಎಂದು ಅವ್ಯವಸ್ಥ ವಿರುದ್ದ ಅಸಮದಾನ ವ್ಯಕ್ತಪಡಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಸಹಾಯಕ ಕೃಷಿ ನಿರ್ದೇಶಕ ಮಹೇಶ್ ಯುರಿಯಾ ಖರೀದಿ ಮಾಡುವ ರೈತರಿಗೆ ಪರ್ಯಾಯ ಗೊಬ್ಬರ ಲಿಂಕ್ ಮಾಡಿ ಡಿ.ಎ.ಪಿ ಗೊಬ್ಬರ ತೆಗೆದುಕೊಂಡರೆ ಯೂರಿಯಾ ನೀಡುತ್ತೇವೆ ಎಂಬ ರೈತರ ದೂರುಗಳು ಇಲಾಖೆಗೆ ಬಂದಿವೆ. ಜೊತಗೆ ಪರವಾನಿಗೆ ಪಡೆದು ಯೂರಿಯಾವನ್ನು ಅಕ್ರಮ ದಾಸ್ತಾನು ಮಾಡಿ ದುಪಟ್ಟು ಬೆಲೆಗೆ ಮಾರಾಟ ಮಾಡುವ ಅಂಗಡಿಗಳ ವಿರುದ್ದ ಕ್ರಮಕೈಗೊಂಡು ರೈತರಿಗೆ ಸರ್ಕಾರ ನಿಗಧಿ ಮಾಡುವ ಬೆಲೆಗೆ ನೀಡುವಂತೆ ನೋಟಿಸ್ ಕೊಡಿಸಿ ಸಮಸ್ಯೆ ಬಗೆ ಹರಿಸುವ ಭರವಸೆಯನ್ನು ನೀಡಿದರು.

ಮನವಿ ನೀಡುವಾಗ ಮಹಿಳಾ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ, ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ, ವಕ್ಕಲೇರಿ ಹನುಮಯ್ಯ, ಯಾರಂಘಟ್ಟ ಗಿರೀಶ್, ನರಸಿಂಹಯ್ಯ, ಕುವಣ್ಣ, ವೆಂಕಟೇಶಪ್ಪ, ಮಾಸ್ತಿ ಯಲ್ಲಣ್ಣ, ಹರೀಶ್, ಮುಂತಾದವರು ಇದ್ದರು.

Ramesh Babu

Journalist

Recent Posts

KSRTC ಬಸ್-ಕಂಟೇನರ್ ಲಾರಿ ನಡುವೆ ಅಪಘಾತ; ಕೆಲವರಿಗೆ ಗಾಯ

ಹೊಸಕೋಟೆ: ಕೋಲಾರ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ KSRTC ಬಸ್ ಹಾಗೂ ಕಂಟೇನರ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ಹೊಸಕೋಟೆ ಸಮೀಪದ…

2 hours ago

ರಾಜ್ಯಸಭೆ, ಪರಿಷತ್ ಚುನಾವಣೆ: ಬಿಜೆಪಿ ಅಚ್ಚರಿ ನಿರ್ಧಾರ, ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ನಿರಾಕರಣೆ

ಬೆಂಗಳೂರು: 2026ರ ರಾಜ್ಯಸಭೆ ಹಾಗೂ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಪ್ರಕಟಿಸಿದ್ದು, ಕರ್ನಾಟಕದಿಂದ ರಾಜ್ಯಸಭೆಗೆ…

5 hours ago

ಅಳಬೇಡಿ ಸ್ವಾಮಿ ಅಳಬೇಡಿ, ದಯವಿಟ್ಟು ಅಳಬೇಡಿ, ಸ್ವಲ್ಪ ನಕ್ಕು ಬಿಡಿ…..

ನಾನು ವಿದ್ಯಾವಂತನಾಗಿರಲಿಲ್ಲ, ಅದರಿಂದಾಗಿ ಯಶಸ್ವಿಯಾಗಲಿಲ್ಲ. ನಾನು ಬುದ್ದಿವಂತನಾಗಿರಲಿಲ್ಲ, ಅದರಿಂದಾಗಿ ಜನಪ್ರಿಯನಾಗಲಿಲ್ಲ. ನಾನು ಪ್ರತಿಭಾವಂತನಾಗಿರಲಿಲ್ಲ, ಅದರಿಂದಾಗಿ ಪ್ರಖ್ಯಾತನಾಗಲಿಲ್ಲ. ನಾನು ಶ್ರೀಮಂತನಾಗಿರಲಿಲ್ಲ, ಅದರಿಂದಾಗಿ…

7 hours ago

ದೊಡ್ಡಬಳ್ಳಾಪುರ ಯೋಗಾ ಪ್ರತಿಭೆ, ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಪುರಸ್ಕೃತೆ ಜಾಹ್ನವಿ ಎಂ.ಆರ್ ಗೆ ಸನ್ಮಾನ

ಕರ್ನಾಟಕ ಸ್ಟೇಟ್ ಅಮೆಚೂರು ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಜೂ.6, 7ರಂದು ನಡೆದ ರಾಜ್ಯಮಟ್ಟದ…

19 hours ago

ತಡರಾತ್ರಿ ರೌಡಿ ಶೀಟರ್‌ ಬರ್ಬರ ಹತ್ಯೆ: ಸೂಲಿಬೆಲೆಯಲ್ಲಿ ಭೀಕರ ಘಟನೆ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ತಡರಾತ್ರಿ ರೌಡಿ ಶೀಟರ್‌ನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ…

1 day ago

ಕಾಕ್ರೋಚ್ ಜನತಾ ಪಾರ್ಟಿ……

ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…

1 day ago