Categories: ಕೋಲಾರ

ಅಕ್ರಮ ಯೂರಿಯಾ ದಾಸ್ತಾನು ಮಾಲೀಕರ ವಿರುದ್ಧ ಕ್ರಮಕ್ಕೆ ರೈತ ಸಂಘ ಒತ್ತಾಯ

ಕೋಲಾರ: ಯೂರಿಯಾ ಅಕ್ರಮ ದಾಸ್ತಾನು ಮಾಡಿ ಕೃತಕ ಅಭಾವ ಸೃಷ್ಟಿ ಮಾಡಿ ದುಬಾರಿ ಬೆಲೆಗೆ ಮಾರಾಟ ಮಾಡುವ ರಸಗೊಬ್ಬರ ಅಂಗಡಿ ಮಾಲೀಕರ ವಿರುದ್ದ ಕ್ರಮ ಕೈಗೊಂಡು ರೈತರಿಗೆ ಅವಶ್ಯಕತೆ ಇರುವ ಯೂರಿಯಾವನ್ನು ಟಿಎಪಿಸಿಎಂಎಸ್ ವತಿಯಿಂದ ವಿತರಣೆ ಮಾಡಬೇಕೆಂದು ರೈತ ಸಂಘದಿಂದ ಯೂರಿಯಾ ಸಮೇತ ಸಹಾಯಕ ಕೃಷಿ ನಿರ್ದೇಶಕ ಮಹೇಶ್ ರವರಿಗೆ ಮನವಿ ನೀಡಿ, ಒತ್ತಾಯಿಸಲಾಯಿತು.

ರಸಗೊಬ್ಬರ ಮಾರಾಟಗಾರರು ಗೊಬ್ಬರ ಉತ್ಪಾದನಾ ಕಂಪನಿಗಳ ನಿಯಮಗಳನ್ನು ಪಾಲನೆ ಮಾಡುವಂತೆ ರೈತರಿಗೆ ಅವಶ್ಯಕತೆ ಇರುವ ಯೂರಿಯಾ ಬೇಕಾದರೆ ಅದಕ್ಕೆ ಸಂಬಂಧಪಟ್ಟ ಕಂಪನಿ ಬೇರೆ ಗೊಬ್ಬರ ಖರೀದಿ ಮಾಡಿದರೆ ಮಾತ್ರ ಯೂರಿಯಾ ನೀಡುತ್ತೇವೆಂದು ರೈತರ ಮೇಲೆ ಒತ್ತಡ ಹಾಕುತ್ತಿರುವುದು ಯಾವ ನ್ಯಾಯವಾಗಿದೆ ೩೦೦ ರೂ ಯೂರಿಯಾ ಮೂಟೆಗೆ ಬದಲಿಯಾಗಿ ೩ ಸಾವಿರ ರೂಪಾಯಿ ಗೊಬ್ಬರವನ್ನು ಖರೀದಿಸುವಂತೆ ಒತ್ತಡ ಹೇರುತ್ತಾರೆ ಯೂರಿಯವನ್ನು ಆಂದ್ರಕ್ಕೆ ಅಕ್ರಮವಾಗಿ ಮಾರಾಟಮಾಡುತ್ತಿದ್ದಾರೆಂದು ನೊಂದ ರೈತ ಮಂಗಸಂದ್ರ ತಿಮ್ಮಣ್ಣ ಅಸಮಾಧಾನ ವ್ಯಕ್ತಪಡಿಸಿದರು.

ಮುಂಗಾರು ಮಳೆ ಉತ್ತಮ ನಿರೀಕ್ಷೆಯಲ್ಲಿದ್ದ ರೈತರು ಕೃಷಿ ಚಟುವಟಗಳಿಗೆ ಅವಶ್ಯಕತೆ ಇರುವ ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು ಮಾಡಿಕೊಂಡು ಖಾತರದಿಂದ ಮುಂಗಾರು ಮಳೆಗೆ ಕಾಯುತ್ತಿದ್ದ ರೈತರಿಗೆ ಬರಸಿಡಿಲು ಬಂಡಿದಂತಾಗಿದೆ. ಯಾಕೋ ಮುಂಗಾರು ಮಳೆ ರೈತನ ಮೇಲೆ ಮುನಿಸಿಕೊಂಡು ವರ್ಷದ ಗಂಜಿಪಾತ್ರೆಯನ್ನು ಕಸಿದುಕೊಂಡಿರುವುದು ವಿಪರ್ಯಾಸ. ಜೊತೆಗೆ ಬಿತ್ತನೆಯಾಗಿರುವ ಶೇಕಡ ೧೦ ರಷ್ಟರ ಕೃಷಿ ರಾಗಿ ಮತ್ತಿತರ ಬೆಳೆಗಳಿಗೆ ಅವಶ್ಯಕತೆ ಇರುವ ಯೂರಿಯಾ ಕೃತಕ ಅಭಾವ ಸೃಷ್ಟಿಸಿ ದುಬಾರಿ ಬೆಲೆಗೆ ಮಾರಾಟ ಮಾಡುವ ಮುಖಾಂತರ ರೈತರನ್ನು ಗೊಬ್ಬರ ಅಂಗಡಿ ಮಾಲೀಕರು ವಂಚನೆ ಮಾಡುತ್ತಿದ್ದರೂ ಕ್ರಮ ಕೈಗೊಳ್ಳಬೇಕಾದ ಅಧಿಕಾರಿಗಳು ಮೌನವೇಕೆ ಎಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಪ್ರಶ್ನೆ ಮಾಡಿದರು.

ರಾಜ್ಯ ಸರ್ಕಾರ ಪ್ರತಿವರ್ಷ ಮುಂಗಾರು ಮಳೆ ಪ್ರಾರಂಭವಾದಾಗ ಕೃಷಿ ಮಂತ್ರಿಗಳು ಪತ್ರಿಕಾ ಮತ್ತು ಮಾದ್ಯಮಗಳ ಮುಖಾಂತರ ರಾಜ್ಯದಲ್ಲಿ ಮುಂಗಾರು ಮಳೆಯ ಕೃಷಿ ಬಿತ್ತನೆಗೆ ಅವಶ್ಯಕತೆ ಇರುವ ಬಿತ್ತನೆ ಬೀಜ, ರಸಗೊಬ್ಬರ ಕೊರತೆ ಇಲ್ಲ. ಆಯಾ ಜಿಲ್ಲೆಯ ಕೃಷಿ ಕೇಂದ್ರಗಳಲ್ಲಿ ದಾಸ್ತಾನುವಾಗಿದೆ ಎಂದು ಹೇಳುತ್ತಿರುತ್ತಾರೆ. ಮತೊಂದಡೆ ಕೃತಕ ಅಭಾವ ಸೃಷ್ಟಿ ಮಾಡಿ ಬಿತ್ತನೆ ಬೀಜ ರಸಗೊಬ್ಬರಕ್ಕಾಗಿ ರೈತರು ಅಲೆದಾಡುವ ಜೊತೆಗೆ ಗೋಲಿಬಾರ್ ಲಾಟಿಚಾರ್ಜ್ ಆಗುತ್ತಿರುವ ಪ್ರಕರಣಗಳು ಪ್ರತಿವರ್ಷ ನಡೆಯುತ್ತಿರುವುದು ಕಾರಣವಾದರೂ ಏನು. ಕೃಷಿ ಮಂತ್ರಿಗಳಿಗೆ ಕೃಷಿ ಅಧಿಕಾರಿಗಳು ತಪ್ಪು ಮಾಹಿತಿಯ ಕೊರತೆ ನೀಡುತ್ತಿದ್ದಾರೆಯೇ ಎಂದು ಅವ್ಯವಸ್ಥ ವಿರುದ್ದ ಅಸಮದಾನ ವ್ಯಕ್ತಪಡಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಸಹಾಯಕ ಕೃಷಿ ನಿರ್ದೇಶಕ ಮಹೇಶ್ ಯುರಿಯಾ ಖರೀದಿ ಮಾಡುವ ರೈತರಿಗೆ ಪರ್ಯಾಯ ಗೊಬ್ಬರ ಲಿಂಕ್ ಮಾಡಿ ಡಿ.ಎ.ಪಿ ಗೊಬ್ಬರ ತೆಗೆದುಕೊಂಡರೆ ಯೂರಿಯಾ ನೀಡುತ್ತೇವೆ ಎಂಬ ರೈತರ ದೂರುಗಳು ಇಲಾಖೆಗೆ ಬಂದಿವೆ. ಜೊತಗೆ ಪರವಾನಿಗೆ ಪಡೆದು ಯೂರಿಯಾವನ್ನು ಅಕ್ರಮ ದಾಸ್ತಾನು ಮಾಡಿ ದುಪಟ್ಟು ಬೆಲೆಗೆ ಮಾರಾಟ ಮಾಡುವ ಅಂಗಡಿಗಳ ವಿರುದ್ದ ಕ್ರಮಕೈಗೊಂಡು ರೈತರಿಗೆ ಸರ್ಕಾರ ನಿಗಧಿ ಮಾಡುವ ಬೆಲೆಗೆ ನೀಡುವಂತೆ ನೋಟಿಸ್ ಕೊಡಿಸಿ ಸಮಸ್ಯೆ ಬಗೆ ಹರಿಸುವ ಭರವಸೆಯನ್ನು ನೀಡಿದರು.

ಮನವಿ ನೀಡುವಾಗ ಮಹಿಳಾ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ, ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ, ವಕ್ಕಲೇರಿ ಹನುಮಯ್ಯ, ಯಾರಂಘಟ್ಟ ಗಿರೀಶ್, ನರಸಿಂಹಯ್ಯ, ಕುವಣ್ಣ, ವೆಂಕಟೇಶಪ್ಪ, ಮಾಸ್ತಿ ಯಲ್ಲಣ್ಣ, ಹರೀಶ್, ಮುಂತಾದವರು ಇದ್ದರು.

Ramesh Babu

Journalist

Recent Posts

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

2 days ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

2 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

3 days ago

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

3 days ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

3 days ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

4 days ago