Categories: ಕೋಲಾರ

ಅಕ್ರಮ ಯೂರಿಯಾ ದಾಸ್ತಾನು ಮಾಲೀಕರ ವಿರುದ್ಧ ಕ್ರಮಕ್ಕೆ ರೈತ ಸಂಘ ಒತ್ತಾಯ

ಕೋಲಾರ: ಯೂರಿಯಾ ಅಕ್ರಮ ದಾಸ್ತಾನು ಮಾಡಿ ಕೃತಕ ಅಭಾವ ಸೃಷ್ಟಿ ಮಾಡಿ ದುಬಾರಿ ಬೆಲೆಗೆ ಮಾರಾಟ ಮಾಡುವ ರಸಗೊಬ್ಬರ ಅಂಗಡಿ ಮಾಲೀಕರ ವಿರುದ್ದ ಕ್ರಮ ಕೈಗೊಂಡು ರೈತರಿಗೆ ಅವಶ್ಯಕತೆ ಇರುವ ಯೂರಿಯಾವನ್ನು ಟಿಎಪಿಸಿಎಂಎಸ್ ವತಿಯಿಂದ ವಿತರಣೆ ಮಾಡಬೇಕೆಂದು ರೈತ ಸಂಘದಿಂದ ಯೂರಿಯಾ ಸಮೇತ ಸಹಾಯಕ ಕೃಷಿ ನಿರ್ದೇಶಕ ಮಹೇಶ್ ರವರಿಗೆ ಮನವಿ ನೀಡಿ, ಒತ್ತಾಯಿಸಲಾಯಿತು.

ರಸಗೊಬ್ಬರ ಮಾರಾಟಗಾರರು ಗೊಬ್ಬರ ಉತ್ಪಾದನಾ ಕಂಪನಿಗಳ ನಿಯಮಗಳನ್ನು ಪಾಲನೆ ಮಾಡುವಂತೆ ರೈತರಿಗೆ ಅವಶ್ಯಕತೆ ಇರುವ ಯೂರಿಯಾ ಬೇಕಾದರೆ ಅದಕ್ಕೆ ಸಂಬಂಧಪಟ್ಟ ಕಂಪನಿ ಬೇರೆ ಗೊಬ್ಬರ ಖರೀದಿ ಮಾಡಿದರೆ ಮಾತ್ರ ಯೂರಿಯಾ ನೀಡುತ್ತೇವೆಂದು ರೈತರ ಮೇಲೆ ಒತ್ತಡ ಹಾಕುತ್ತಿರುವುದು ಯಾವ ನ್ಯಾಯವಾಗಿದೆ ೩೦೦ ರೂ ಯೂರಿಯಾ ಮೂಟೆಗೆ ಬದಲಿಯಾಗಿ ೩ ಸಾವಿರ ರೂಪಾಯಿ ಗೊಬ್ಬರವನ್ನು ಖರೀದಿಸುವಂತೆ ಒತ್ತಡ ಹೇರುತ್ತಾರೆ ಯೂರಿಯವನ್ನು ಆಂದ್ರಕ್ಕೆ ಅಕ್ರಮವಾಗಿ ಮಾರಾಟಮಾಡುತ್ತಿದ್ದಾರೆಂದು ನೊಂದ ರೈತ ಮಂಗಸಂದ್ರ ತಿಮ್ಮಣ್ಣ ಅಸಮಾಧಾನ ವ್ಯಕ್ತಪಡಿಸಿದರು.

ಮುಂಗಾರು ಮಳೆ ಉತ್ತಮ ನಿರೀಕ್ಷೆಯಲ್ಲಿದ್ದ ರೈತರು ಕೃಷಿ ಚಟುವಟಗಳಿಗೆ ಅವಶ್ಯಕತೆ ಇರುವ ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು ಮಾಡಿಕೊಂಡು ಖಾತರದಿಂದ ಮುಂಗಾರು ಮಳೆಗೆ ಕಾಯುತ್ತಿದ್ದ ರೈತರಿಗೆ ಬರಸಿಡಿಲು ಬಂಡಿದಂತಾಗಿದೆ. ಯಾಕೋ ಮುಂಗಾರು ಮಳೆ ರೈತನ ಮೇಲೆ ಮುನಿಸಿಕೊಂಡು ವರ್ಷದ ಗಂಜಿಪಾತ್ರೆಯನ್ನು ಕಸಿದುಕೊಂಡಿರುವುದು ವಿಪರ್ಯಾಸ. ಜೊತೆಗೆ ಬಿತ್ತನೆಯಾಗಿರುವ ಶೇಕಡ ೧೦ ರಷ್ಟರ ಕೃಷಿ ರಾಗಿ ಮತ್ತಿತರ ಬೆಳೆಗಳಿಗೆ ಅವಶ್ಯಕತೆ ಇರುವ ಯೂರಿಯಾ ಕೃತಕ ಅಭಾವ ಸೃಷ್ಟಿಸಿ ದುಬಾರಿ ಬೆಲೆಗೆ ಮಾರಾಟ ಮಾಡುವ ಮುಖಾಂತರ ರೈತರನ್ನು ಗೊಬ್ಬರ ಅಂಗಡಿ ಮಾಲೀಕರು ವಂಚನೆ ಮಾಡುತ್ತಿದ್ದರೂ ಕ್ರಮ ಕೈಗೊಳ್ಳಬೇಕಾದ ಅಧಿಕಾರಿಗಳು ಮೌನವೇಕೆ ಎಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಪ್ರಶ್ನೆ ಮಾಡಿದರು.

ರಾಜ್ಯ ಸರ್ಕಾರ ಪ್ರತಿವರ್ಷ ಮುಂಗಾರು ಮಳೆ ಪ್ರಾರಂಭವಾದಾಗ ಕೃಷಿ ಮಂತ್ರಿಗಳು ಪತ್ರಿಕಾ ಮತ್ತು ಮಾದ್ಯಮಗಳ ಮುಖಾಂತರ ರಾಜ್ಯದಲ್ಲಿ ಮುಂಗಾರು ಮಳೆಯ ಕೃಷಿ ಬಿತ್ತನೆಗೆ ಅವಶ್ಯಕತೆ ಇರುವ ಬಿತ್ತನೆ ಬೀಜ, ರಸಗೊಬ್ಬರ ಕೊರತೆ ಇಲ್ಲ. ಆಯಾ ಜಿಲ್ಲೆಯ ಕೃಷಿ ಕೇಂದ್ರಗಳಲ್ಲಿ ದಾಸ್ತಾನುವಾಗಿದೆ ಎಂದು ಹೇಳುತ್ತಿರುತ್ತಾರೆ. ಮತೊಂದಡೆ ಕೃತಕ ಅಭಾವ ಸೃಷ್ಟಿ ಮಾಡಿ ಬಿತ್ತನೆ ಬೀಜ ರಸಗೊಬ್ಬರಕ್ಕಾಗಿ ರೈತರು ಅಲೆದಾಡುವ ಜೊತೆಗೆ ಗೋಲಿಬಾರ್ ಲಾಟಿಚಾರ್ಜ್ ಆಗುತ್ತಿರುವ ಪ್ರಕರಣಗಳು ಪ್ರತಿವರ್ಷ ನಡೆಯುತ್ತಿರುವುದು ಕಾರಣವಾದರೂ ಏನು. ಕೃಷಿ ಮಂತ್ರಿಗಳಿಗೆ ಕೃಷಿ ಅಧಿಕಾರಿಗಳು ತಪ್ಪು ಮಾಹಿತಿಯ ಕೊರತೆ ನೀಡುತ್ತಿದ್ದಾರೆಯೇ ಎಂದು ಅವ್ಯವಸ್ಥ ವಿರುದ್ದ ಅಸಮದಾನ ವ್ಯಕ್ತಪಡಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಸಹಾಯಕ ಕೃಷಿ ನಿರ್ದೇಶಕ ಮಹೇಶ್ ಯುರಿಯಾ ಖರೀದಿ ಮಾಡುವ ರೈತರಿಗೆ ಪರ್ಯಾಯ ಗೊಬ್ಬರ ಲಿಂಕ್ ಮಾಡಿ ಡಿ.ಎ.ಪಿ ಗೊಬ್ಬರ ತೆಗೆದುಕೊಂಡರೆ ಯೂರಿಯಾ ನೀಡುತ್ತೇವೆ ಎಂಬ ರೈತರ ದೂರುಗಳು ಇಲಾಖೆಗೆ ಬಂದಿವೆ. ಜೊತಗೆ ಪರವಾನಿಗೆ ಪಡೆದು ಯೂರಿಯಾವನ್ನು ಅಕ್ರಮ ದಾಸ್ತಾನು ಮಾಡಿ ದುಪಟ್ಟು ಬೆಲೆಗೆ ಮಾರಾಟ ಮಾಡುವ ಅಂಗಡಿಗಳ ವಿರುದ್ದ ಕ್ರಮಕೈಗೊಂಡು ರೈತರಿಗೆ ಸರ್ಕಾರ ನಿಗಧಿ ಮಾಡುವ ಬೆಲೆಗೆ ನೀಡುವಂತೆ ನೋಟಿಸ್ ಕೊಡಿಸಿ ಸಮಸ್ಯೆ ಬಗೆ ಹರಿಸುವ ಭರವಸೆಯನ್ನು ನೀಡಿದರು.

ಮನವಿ ನೀಡುವಾಗ ಮಹಿಳಾ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ, ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ, ವಕ್ಕಲೇರಿ ಹನುಮಯ್ಯ, ಯಾರಂಘಟ್ಟ ಗಿರೀಶ್, ನರಸಿಂಹಯ್ಯ, ಕುವಣ್ಣ, ವೆಂಕಟೇಶಪ್ಪ, ಮಾಸ್ತಿ ಯಲ್ಲಣ್ಣ, ಹರೀಶ್, ಮುಂತಾದವರು ಇದ್ದರು.

Ramesh Babu

Journalist

Recent Posts

ಕಸ್ತೂರಿ ರಂಗನ್ ವರದಿ; ‘ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ’- ಸಿಎಂ ಡಿ.ಕೆ ಶಿವಕುಮಾರ್ ಹೇಳಿಕೆ

ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ಇಂದು ನಡೆದ ಕಸ್ತೂರಿ ರಂಗನ್ ವರದಿ ಕುರಿತ ಸಾರ್ವಜನಿಕ ಸಭೆಯಲ್ಲಿ  ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು…

9 hours ago

ಜಿಲ್ಲಾಸ್ಪತ್ರೆಯ ಅವ್ಯವಸ್ಥೆ ಸರಿಪಡಿಸಲು ರೈತ ಸಂಘ ಆಗ್ರಹ

ಕೋಲಾರ : ನಗರದ ಶ್ರೀ ನರಸಿಂಹರಾಜ ಜಿಲ್ಲಾ ಆಸ್ಪತ್ರೆಯಲ್ಲಿ ಬಡ ರೋಗಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವುದು, ಖಾಸಗಿ…

10 hours ago

ಶಿಷ್ಟಾಚಾರ ವಿವಾದಕ್ಕೆ ಮತ್ತಷ್ಟು ಕಾವು: ಶಾಸಕರಿಗೆ ಕಾನೂನು, ಶಿಷ್ಟಾಚಾರದ ಅರಿವಿಲ್ಲ- ಶಾಸಕ ಧೀರಜ್ ಮುನಿರಾಜ್ ವಿರುದ್ಧ ಮಾಜಿ ಶಾಸಕ ವೆಂಕಟರಮಣಯ್ಯ ವಾಗ್ದಾಳಿ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಕ್ಷೇತ್ರದ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ (ಡಿಪಿಎ) ಅಧ್ಯಕ್ಷ…

11 hours ago

ಕುಡಿಯುವ ನೀರು, ಮೇವಿಗೆ ಮುಂಜಾಗ್ರತೆ ವಹಿಸಿ: ನಿಗದಿತ ಅವಧಿಯೊಳಗೆ ಬಡವರಿಗೆ ಸೂರು, ಸೈಟ್ ವಿತರಿಸಲು ಸಿದ್ಧತೆ ಮಾಡಿಕೊಳ್ಳಿ- ಸಚಿವ ಕೆ.ಎಚ್ ಮುನಿಯಪ್ಪ

ಎಲ್ಲಾ ವರ್ಗದ ಬಡವರಿಗೆ ಸೂರು, ಸೈಟ್ ನೀಡುವುದು ನಮ್ಮ ಸರ್ಕಾರದ ಗುರಿಯಾಗಿದ್ದು ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ,…

13 hours ago

ಶಿಷ್ಟಾಚಾರದ ಹೆಸರಲ್ಲಿ ವಾಗ್ಯುದ್ಧ: ಹಾಲಿ ಶಾಸಕ ಧೀರಜ್ ಮುನಿರಾಜು–ಮಾಜಿ ಶಾಸಕ ವೆಂಕಟರಮಣಯ್ಯ ನಡುವೆ ಬಹಿರಂಗ ಕಿತ್ತಾಟ

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ರಾಜಕೀಯದಲ್ಲಿ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ…

19 hours ago

ನಿಷೇಧದ ನಡುವೆಯೂ ಡಿಜೆ ಬಳಕೆ: ವಾಹನ ವಶ, ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ಜಿಲ್ಲೆಯಲ್ಲಿ ಡಿಜೆ ಬಳಕೆಗೆ ನಿಷೇಧವಿದ್ದರೂ ಗಣೇಶೋತ್ಸವ ಮೆರವಣಿಗೆಯಲ್ಲಿ ಡಿಜೆ ಬಳಸಿದ ಆರೋಪದ ಮೇರೆಗೆ ಡಿಜೆ ವಾಹನವನ್ನು ಜಪ್ತಿ ಮಾಡಿರುವ…

1 day ago