ಅಕ್ರಮ ಸಂಬಂಧಕ್ಕೆ ಒಪ್ಪದ ಮಹಿಳೆಯ ಖಾಸಗಿ ಅಂಗವನ್ನು ತುಳಿದು ದೌರ್ಜನ್ಯ ನಡೆಸಿ ಮಹಿಳೆಯ ಸಾವಿಗೆ ಕಾರಣನಾದ ಕಾಮುಕನನ್ನು ಪೊಲೀಸರು ಬಂಧಿಸಿರುವ ಘಟನೆ ಹಾಸನದ ಯಸಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ..
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಅತ್ತಿಹಳ್ಳಿ ಗ್ರಾಮದಲ್ಲಿ ಏಪ್ರಿಲ್ 29 ರಂದು ಅಕ್ರಮ ಸಂಬಂಧಕ್ಕೆ ಒಪ್ಪದ ಮಹಿಳೆಯ ಖಾಸಗಿ ಅಂಗವನ್ನು ಚಂದ್ರ ಎಂಬಾತ ತುಳಿದು ದೌರ್ಜನ್ಯ ನಡೆಸಿದ್ದನು. ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಸಾವನ್ನಪ್ಪಿದ್ದರು.
ಹಾಸನ ಜಿಲ್ಲಾಸ್ಪತ್ರೆಯಲ್ಲಿ ಮಹಿಳೆ ರಮ್ಯಾ(34) ಮಹಿಳೆ ಸಾವು.
ಎರಡು ವರ್ಷಗಳ ಹಿಂದೆ ಪತಿ ಮೃತಪಟ್ಟ ಹಿನ್ನೆಲೆಯಲ್ಲಿ ರಮ್ಯಾ ಎಂಬಾಕೆ ಚಂದ್ರ ಎಂಬುವವನ ಗೆಳೆತನ ಹೊಂದಿದ್ದಳು.
ಏಪ್ರಿಲ್ 27 ರಂದು ಅತ್ತೆ ಮೃತಪಟ್ಟ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಹೋಂ ನರ್ಸಿಂಗ್ ಸೇವೆ ಮಾಡಿಕೊಂಡಿದ್ದ ರಮ್ಯಾ ಗ್ರಾಮಕ್ಕೆ ಬಂದಿದ್ದಳು. ರಮ್ಯಾ ಊರಿಗೆ ಬಂದಿದ್ದರಿಂದ ತನ್ನೊಟ್ಟಿಗೆ ಬರುವಂತೆ ಚಂದ್ರ ಪಟ್ಟು ಹಿಡಿದಿದ್ದ. ಆದರೆ, ಚಂದ್ರನ ಆಸೆಗೆ ಒಪ್ಪದ ಕಾರಣದಿಂದ ಮನಸೊ ಇಚ್ಚೆ ಹಲ್ಲೆ ನಡೆಸಿದ್ದ.
ರಮ್ಯಾ ಊರಿಗೆ ಬಂದಾಗ ಖಾಸಗಿ ಬೇಟಿಗೆ ಕರೆದಿದ್ದ ಚಂದ್ರ. ಈ ವೇಳೆ ರಮ್ಯಾ ಒಪ್ಪಲಿಲ್ಲ. ಆಗ ಕೋಪಗೊಂಡ ಚಂದ್ರ ಮಹಿಳೆಯ ಖಾಸಗಿ ಅಂಗಕ್ಕೆ ಕಾಲಿನಿಂದ ಒದ್ದು ಕ್ರೌರ್ಯ ಮೆರೆದಿದ್ದ.
ಸದ್ಯ ಆರೋಪಿ ಚಂದ್ರನನ್ನ ಪೊಲೀಸರು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.
ಯಸಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…