ಅಕ್ರಮ ಸಂಬಂಧಕ್ಕೆ ಬಲಿಯಾಯ್ತಾ ಒಂದು ತುಂಬು ಜೀವ..!? ನಮ್ಮ ಅತ್ತಿಗೆಗೆ ಕಾಲ್ ಮಾಡ್ತೀಯಾ ಎಂದು ತಲೆಗೆ ರಾಡ್ ನಲ್ಲಿ ಹೊಡೆದ ಮೈದುನಾ..

ಆಕೆಗೆ ಅಪರಿಚಿತನೊಬ್ಬ ಚಿರಪರಿಚಿತನಾದ… ಪರಿಚಯ ಹಣಕಾಸಿನ ವ್ಯವಹಾರದವರೆಗೂ ಸಾಗಿತು. ಸ್ನೇಹದಲ್ಲೇ ಇದ್ದ ಇಬ್ಬರ ಪರಿಚಯ ಮತ್ತೊಂದು ಘಟ್ಟದವರೆಗೆ ಸಾಗಿತು. ಆಕೆಯ ಮನೆ ಬಾಗಿಲಿಗೆ ಬಂದು ರಾದ್ದಾಂತ ಮಾಡಿದ್ದೇ ತಡ.. ಘೋರ ಕೃತ್ಯ ನಡೆದು ಹೋಗಿದೆ.

ಬರ್ಬರವಾಗಿ ಹೆಣವಾಗಿ ಬಿದ್ದಿರುವ ಯುವಕನ ಹೆಸರು ಆಂಜಿನಪ್ಪ@ಆಂಜಿರೆಡ್ಡಿ. ಚಿಕ್ಕಬಳ್ಳಾಪುರ ನಗರದ ಇಂದಿರಾನಗರದ ಆಶಾ ಎಂಬುವರ ಮನೆಗೆ ಬಂದು ರಾದ್ದಾಂತ ಮಾಡಿದ ಎಂಬ ಕಾರಣಕ್ಕೆ ಕೊಲೆಯಾಗಿ ಹೋಗಿದ್ದಾನೆ.

ಇನ್ನೂ ಕೊಲೆಯಾದ ಆಂಜಿನಪ್ಪ ಪೆಯಿಂಟ್ ಕೆಲಸ ಮಾಡಿಕೊಂಡು ತಂದೆ ತಾಯಿ ಜೊತೆಗೆ ನೆಮ್ಮದಿಯ ಜೀವನ ಸಾಗಿಸುತ್ತಿದ್ದ. ಆಂಜಿನಪ್ಪ, ಶಿಡ್ಲಘಟ್ಟ ತಾಲೂಕಿನ ನೆಂಟರ ಮನೆಗೆ ಹೋದಾಗ ಚಿಕ್ಕಬಳ್ಳಾಪುರ ನಗರದ ಆಶಾ ಪರಿಚಯವಾಗಿ ಪರಿಚಯ ಸ್ನೇಹಕ್ಕೆ ತಿರುಗಿ ಹಣದ ವ್ಯವಹಾರದವರೆಗೂ ಸಾಗಿದೆ. ಬಳಿಕ ಲವ್.. ಪವ್ ಅಂತ ಆಶಾಗೆ ಪೀಡಿಸಿದ್ನಂತೆ. ಇವರಿಬ್ಬರಿಗೆ ಅಕ್ರಮ ಸಂಬಂಧ ಕೂಡ ಇತ್ತು ಎನ್ನಲಾಗುತ್ತಿದೆ. ಮೂರು ದಿನಗಳ ಹಿಂದೆ ಅಂದರೆ ಫೆ. 21 ರಂದು ಸಂಜೆ 5:30ಕ್ಕೆ ಮನೆ ಒಳಗೆ ಆಂಜನಪ್ಪ ಬಂದು ಆಶಾ ಮೇಲೆ ಬಲತ್ಕಾರ ಮಾಡಲು ಪ್ರಯತ್ನ ಪಟ್ಟ ಎಂದು ಆರೋಪಿಸಲಾಗಿದೆ. ಆಂಜಿನಪ್ಪನನ್ನ ರೂಂ ನಲ್ಲಿ ಕೂಡಿ ಹಾಕಿ, ಆಶಾ ರೂಂ ನಿಂದ ತಪ್ಪಿಸಿಕೊಂಡು ಕೆಳಗೆ ಬಂದು ಪಕ್ಕದ ಮನೆಯವರ ಫೋನ್ ನಿಂದ ಮೊದಲು ಗಂಡನಿಗೆ ಕರೆ ಮಾಡಿದ್ದಾಳೆ, ಆಗ ಕಾಲ್ ತೆಗೆಯದೆ ಇದ್ದದ್ದಕ್ಕೆ ಮೈದುನ ರಾಘವೇಂದ್ರಗೆ ಕರೆ ಮಾಡಿದ್ದಾಳೆ. ತಕ್ಷಣವೇ ಮನೆಗೆ ಬಂದಾಗ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ. ಇದು ಅತಿರೇಕಕ್ಕೆ ತಿರುಗಿ ಬುಧವಾರ ಆಶಾ ಮನೆಗೆ ಬಂದ ಆಂಜಿನಪ್ಪ ಬಲತ್ಕಾರ ಮಾಡಿದ್ದನೆಂಬ ಕಾರಣಕ್ಕೆ ರಾಘವೇಂದ್ರ@ರಘು ಬೆಡ್ ರೂಂನಲ್ಲಿದ್ದ ಅಂಜಿನಪ್ಪಗೆ ಮಾರಕಾಸ್ತ್ರದಿಂದ ಬಲವಾಗಿ ಹೊಡೆದ ಪರಿಣಾಮ ಆಂಜಿನಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕೃತ್ಯ ಎಸೆಗಿದಂತೆ ಆಶಾ ಮತ್ತಿತರು ಹೇಳಿದರೂ ಕೇಳದ ರಘು ಕೊಲೆ ಮಾಡಿ ಪೊಲೀಸರ ಅತಿಥಿಯಾಗಿದ್ದಾನೆ…

ಗಂಡ ಅಮಾಯಕನಾಗಿದ್ದರಿಂದ ಆಶಾ ಮೈದುನ ರಾಘವೇಂದ್ರನ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದಳಂತೆ. ಈ ಕಾರಣಕ್ಕೆ ಆಂಜಿನಪ್ಪ ಅತ್ತಿಗೆಯನ್ನ ಪೀಡಿಸುತ್ತಿದ್ದಾನಂತಾ.. ಪಿತ್ತ ನೆತ್ತಿಗೆರಿಸಿಕೊಂಡು ಕೊಲೆ ಮಾಡಿ ಜೈಲು ಸೇರಿದ್ದಾನೆ. ಇನ್ನೂ ಆಶಾ ಹಾಗೂ ಆಂಜಿನಪ್ಪ ನಡುವೆ ಹಣದ ವ್ಯವಹಾರದ ಜೊತೆಗೆ ಅಕ್ರಮ ಸಂಬಂಧವೂ ಇತ್ತು ಎಂಬ ಶಂಕೆ ಕೂಡ ಇದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಯುವಕ ಕೊಲೆಯಾಗಿದೆ ಎಂದು ಹೇಳಲಾಗ್ತಿದೆ…

ಒಟ್ಟಿನಲ್ಲಿ ಪ್ರೀತಿ, ಪ್ರೇಮ, ಮೋಹದ ಬಲೆಗೆ ಸಿಕ್ಕ ದುರಂತವೋ ಏನೋ ವೈಯಕ್ತಿಕ ಕೊಲೆಯಲ್ಲಿ ಅಂತ್ಯವಾಗಿದೆ. ಇತ್ತ ಹೆಂಡತಿ ಹಾಗೂ ತಮ್ಮನ ವಿಚಾರ ತಿಳಿದು ಆಶಾಳ ಗಂಡ ಧರ್ಮ ಸಂಕಟಕ್ಕೆ ಸಿಲುಕಿದ್ದಾನೆ.

Ramesh Babu

Journalist

Recent Posts

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

1 hour ago

ಅರಸೇಶ್ವರಿ ದೇವಿಯ ಜಾಗ ಖಾಸಗಿ ವ್ಯಕ್ತಿಗೆ ಖಾತೆ:ಸರ್ಕಾರಿ ಜಮೀನು ಒತ್ತುವರಿ ತೆರವು ಸೇರಿದಂತೆ ಇತರೆ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಪ್ರತಿಭಟ‌ನೆ

ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…

2 hours ago

ಕೇಬಲ್ ಕಾರ್ಖಾನೆಗೆ ಬೆಂಕಿ: ಧಗಧಗ ಉರಿಯುತ್ತಿರುವ ಕಾರ್ಖಾನೆ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…

14 hours ago

ಮೆಳೇಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟ ಕದ್ದೊಯ್ದ ಐನಾತಿಗಳು

ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…

17 hours ago

ಮಾರಮ್ಮ ದೇವಿಯ ಮೂರು ಚಿನ್ನದ ತಾಳಿ, ನಾಲ್ಕು ಗುಂಡುಗಳನ್ನ ಕದ್ದ ಖದೀಮರು

ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ‌ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…

18 hours ago