ಆಕೆಗೆ ಅಪರಿಚಿತನೊಬ್ಬ ಚಿರಪರಿಚಿತನಾದ… ಪರಿಚಯ ಹಣಕಾಸಿನ ವ್ಯವಹಾರದವರೆಗೂ ಸಾಗಿತು. ಸ್ನೇಹದಲ್ಲೇ ಇದ್ದ ಇಬ್ಬರ ಪರಿಚಯ ಮತ್ತೊಂದು ಘಟ್ಟದವರೆಗೆ ಸಾಗಿತು. ಆಕೆಯ ಮನೆ ಬಾಗಿಲಿಗೆ ಬಂದು ರಾದ್ದಾಂತ ಮಾಡಿದ್ದೇ ತಡ.. ಘೋರ ಕೃತ್ಯ ನಡೆದು ಹೋಗಿದೆ.
ಬರ್ಬರವಾಗಿ ಹೆಣವಾಗಿ ಬಿದ್ದಿರುವ ಯುವಕನ ಹೆಸರು ಆಂಜಿನಪ್ಪ@ಆಂಜಿರೆಡ್ಡಿ. ಚಿಕ್ಕಬಳ್ಳಾಪುರ ನಗರದ ಇಂದಿರಾನಗರದ ಆಶಾ ಎಂಬುವರ ಮನೆಗೆ ಬಂದು ರಾದ್ದಾಂತ ಮಾಡಿದ ಎಂಬ ಕಾರಣಕ್ಕೆ ಕೊಲೆಯಾಗಿ ಹೋಗಿದ್ದಾನೆ.
ಇನ್ನೂ ಕೊಲೆಯಾದ ಆಂಜಿನಪ್ಪ ಪೆಯಿಂಟ್ ಕೆಲಸ ಮಾಡಿಕೊಂಡು ತಂದೆ ತಾಯಿ ಜೊತೆಗೆ ನೆಮ್ಮದಿಯ ಜೀವನ ಸಾಗಿಸುತ್ತಿದ್ದ. ಆಂಜಿನಪ್ಪ, ಶಿಡ್ಲಘಟ್ಟ ತಾಲೂಕಿನ ನೆಂಟರ ಮನೆಗೆ ಹೋದಾಗ ಚಿಕ್ಕಬಳ್ಳಾಪುರ ನಗರದ ಆಶಾ ಪರಿಚಯವಾಗಿ ಪರಿಚಯ ಸ್ನೇಹಕ್ಕೆ ತಿರುಗಿ ಹಣದ ವ್ಯವಹಾರದವರೆಗೂ ಸಾಗಿದೆ. ಬಳಿಕ ಲವ್.. ಪವ್ ಅಂತ ಆಶಾಗೆ ಪೀಡಿಸಿದ್ನಂತೆ. ಇವರಿಬ್ಬರಿಗೆ ಅಕ್ರಮ ಸಂಬಂಧ ಕೂಡ ಇತ್ತು ಎನ್ನಲಾಗುತ್ತಿದೆ. ಮೂರು ದಿನಗಳ ಹಿಂದೆ ಅಂದರೆ ಫೆ. 21 ರಂದು ಸಂಜೆ 5:30ಕ್ಕೆ ಮನೆ ಒಳಗೆ ಆಂಜನಪ್ಪ ಬಂದು ಆಶಾ ಮೇಲೆ ಬಲತ್ಕಾರ ಮಾಡಲು ಪ್ರಯತ್ನ ಪಟ್ಟ ಎಂದು ಆರೋಪಿಸಲಾಗಿದೆ. ಆಂಜಿನಪ್ಪನನ್ನ ರೂಂ ನಲ್ಲಿ ಕೂಡಿ ಹಾಕಿ, ಆಶಾ ರೂಂ ನಿಂದ ತಪ್ಪಿಸಿಕೊಂಡು ಕೆಳಗೆ ಬಂದು ಪಕ್ಕದ ಮನೆಯವರ ಫೋನ್ ನಿಂದ ಮೊದಲು ಗಂಡನಿಗೆ ಕರೆ ಮಾಡಿದ್ದಾಳೆ, ಆಗ ಕಾಲ್ ತೆಗೆಯದೆ ಇದ್ದದ್ದಕ್ಕೆ ಮೈದುನ ರಾಘವೇಂದ್ರಗೆ ಕರೆ ಮಾಡಿದ್ದಾಳೆ. ತಕ್ಷಣವೇ ಮನೆಗೆ ಬಂದಾಗ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ. ಇದು ಅತಿರೇಕಕ್ಕೆ ತಿರುಗಿ ಬುಧವಾರ ಆಶಾ ಮನೆಗೆ ಬಂದ ಆಂಜಿನಪ್ಪ ಬಲತ್ಕಾರ ಮಾಡಿದ್ದನೆಂಬ ಕಾರಣಕ್ಕೆ ರಾಘವೇಂದ್ರ@ರಘು ಬೆಡ್ ರೂಂನಲ್ಲಿದ್ದ ಅಂಜಿನಪ್ಪಗೆ ಮಾರಕಾಸ್ತ್ರದಿಂದ ಬಲವಾಗಿ ಹೊಡೆದ ಪರಿಣಾಮ ಆಂಜಿನಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕೃತ್ಯ ಎಸೆಗಿದಂತೆ ಆಶಾ ಮತ್ತಿತರು ಹೇಳಿದರೂ ಕೇಳದ ರಘು ಕೊಲೆ ಮಾಡಿ ಪೊಲೀಸರ ಅತಿಥಿಯಾಗಿದ್ದಾನೆ…
ಗಂಡ ಅಮಾಯಕನಾಗಿದ್ದರಿಂದ ಆಶಾ ಮೈದುನ ರಾಘವೇಂದ್ರನ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದಳಂತೆ. ಈ ಕಾರಣಕ್ಕೆ ಆಂಜಿನಪ್ಪ ಅತ್ತಿಗೆಯನ್ನ ಪೀಡಿಸುತ್ತಿದ್ದಾನಂತಾ.. ಪಿತ್ತ ನೆತ್ತಿಗೆರಿಸಿಕೊಂಡು ಕೊಲೆ ಮಾಡಿ ಜೈಲು ಸೇರಿದ್ದಾನೆ. ಇನ್ನೂ ಆಶಾ ಹಾಗೂ ಆಂಜಿನಪ್ಪ ನಡುವೆ ಹಣದ ವ್ಯವಹಾರದ ಜೊತೆಗೆ ಅಕ್ರಮ ಸಂಬಂಧವೂ ಇತ್ತು ಎಂಬ ಶಂಕೆ ಕೂಡ ಇದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಯುವಕ ಕೊಲೆಯಾಗಿದೆ ಎಂದು ಹೇಳಲಾಗ್ತಿದೆ…
ಒಟ್ಟಿನಲ್ಲಿ ಪ್ರೀತಿ, ಪ್ರೇಮ, ಮೋಹದ ಬಲೆಗೆ ಸಿಕ್ಕ ದುರಂತವೋ ಏನೋ ವೈಯಕ್ತಿಕ ಕೊಲೆಯಲ್ಲಿ ಅಂತ್ಯವಾಗಿದೆ. ಇತ್ತ ಹೆಂಡತಿ ಹಾಗೂ ತಮ್ಮನ ವಿಚಾರ ತಿಳಿದು ಆಶಾಳ ಗಂಡ ಧರ್ಮ ಸಂಕಟಕ್ಕೆ ಸಿಲುಕಿದ್ದಾನೆ.
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…