ಅಕ್ರಮ ಸಂಬಂಧಕ್ಕೆ ಬಲಿಯಾಯ್ತಾ ಒಂದು ತುಂಬು ಜೀವ..!? ನಮ್ಮ ಅತ್ತಿಗೆಗೆ ಕಾಲ್ ಮಾಡ್ತೀಯಾ ಎಂದು ತಲೆಗೆ ರಾಡ್ ನಲ್ಲಿ ಹೊಡೆದ ಮೈದುನಾ..

ಆಕೆಗೆ ಅಪರಿಚಿತನೊಬ್ಬ ಚಿರಪರಿಚಿತನಾದ… ಪರಿಚಯ ಹಣಕಾಸಿನ ವ್ಯವಹಾರದವರೆಗೂ ಸಾಗಿತು. ಸ್ನೇಹದಲ್ಲೇ ಇದ್ದ ಇಬ್ಬರ ಪರಿಚಯ ಮತ್ತೊಂದು ಘಟ್ಟದವರೆಗೆ ಸಾಗಿತು. ಆಕೆಯ ಮನೆ ಬಾಗಿಲಿಗೆ ಬಂದು ರಾದ್ದಾಂತ ಮಾಡಿದ್ದೇ ತಡ.. ಘೋರ ಕೃತ್ಯ ನಡೆದು ಹೋಗಿದೆ.

ಬರ್ಬರವಾಗಿ ಹೆಣವಾಗಿ ಬಿದ್ದಿರುವ ಯುವಕನ ಹೆಸರು ಆಂಜಿನಪ್ಪ@ಆಂಜಿರೆಡ್ಡಿ. ಚಿಕ್ಕಬಳ್ಳಾಪುರ ನಗರದ ಇಂದಿರಾನಗರದ ಆಶಾ ಎಂಬುವರ ಮನೆಗೆ ಬಂದು ರಾದ್ದಾಂತ ಮಾಡಿದ ಎಂಬ ಕಾರಣಕ್ಕೆ ಕೊಲೆಯಾಗಿ ಹೋಗಿದ್ದಾನೆ.

ಇನ್ನೂ ಕೊಲೆಯಾದ ಆಂಜಿನಪ್ಪ ಪೆಯಿಂಟ್ ಕೆಲಸ ಮಾಡಿಕೊಂಡು ತಂದೆ ತಾಯಿ ಜೊತೆಗೆ ನೆಮ್ಮದಿಯ ಜೀವನ ಸಾಗಿಸುತ್ತಿದ್ದ. ಆಂಜಿನಪ್ಪ, ಶಿಡ್ಲಘಟ್ಟ ತಾಲೂಕಿನ ನೆಂಟರ ಮನೆಗೆ ಹೋದಾಗ ಚಿಕ್ಕಬಳ್ಳಾಪುರ ನಗರದ ಆಶಾ ಪರಿಚಯವಾಗಿ ಪರಿಚಯ ಸ್ನೇಹಕ್ಕೆ ತಿರುಗಿ ಹಣದ ವ್ಯವಹಾರದವರೆಗೂ ಸಾಗಿದೆ. ಬಳಿಕ ಲವ್.. ಪವ್ ಅಂತ ಆಶಾಗೆ ಪೀಡಿಸಿದ್ನಂತೆ. ಇವರಿಬ್ಬರಿಗೆ ಅಕ್ರಮ ಸಂಬಂಧ ಕೂಡ ಇತ್ತು ಎನ್ನಲಾಗುತ್ತಿದೆ. ಮೂರು ದಿನಗಳ ಹಿಂದೆ ಅಂದರೆ ಫೆ. 21 ರಂದು ಸಂಜೆ 5:30ಕ್ಕೆ ಮನೆ ಒಳಗೆ ಆಂಜನಪ್ಪ ಬಂದು ಆಶಾ ಮೇಲೆ ಬಲತ್ಕಾರ ಮಾಡಲು ಪ್ರಯತ್ನ ಪಟ್ಟ ಎಂದು ಆರೋಪಿಸಲಾಗಿದೆ. ಆಂಜಿನಪ್ಪನನ್ನ ರೂಂ ನಲ್ಲಿ ಕೂಡಿ ಹಾಕಿ, ಆಶಾ ರೂಂ ನಿಂದ ತಪ್ಪಿಸಿಕೊಂಡು ಕೆಳಗೆ ಬಂದು ಪಕ್ಕದ ಮನೆಯವರ ಫೋನ್ ನಿಂದ ಮೊದಲು ಗಂಡನಿಗೆ ಕರೆ ಮಾಡಿದ್ದಾಳೆ, ಆಗ ಕಾಲ್ ತೆಗೆಯದೆ ಇದ್ದದ್ದಕ್ಕೆ ಮೈದುನ ರಾಘವೇಂದ್ರಗೆ ಕರೆ ಮಾಡಿದ್ದಾಳೆ. ತಕ್ಷಣವೇ ಮನೆಗೆ ಬಂದಾಗ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ. ಇದು ಅತಿರೇಕಕ್ಕೆ ತಿರುಗಿ ಬುಧವಾರ ಆಶಾ ಮನೆಗೆ ಬಂದ ಆಂಜಿನಪ್ಪ ಬಲತ್ಕಾರ ಮಾಡಿದ್ದನೆಂಬ ಕಾರಣಕ್ಕೆ ರಾಘವೇಂದ್ರ@ರಘು ಬೆಡ್ ರೂಂನಲ್ಲಿದ್ದ ಅಂಜಿನಪ್ಪಗೆ ಮಾರಕಾಸ್ತ್ರದಿಂದ ಬಲವಾಗಿ ಹೊಡೆದ ಪರಿಣಾಮ ಆಂಜಿನಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕೃತ್ಯ ಎಸೆಗಿದಂತೆ ಆಶಾ ಮತ್ತಿತರು ಹೇಳಿದರೂ ಕೇಳದ ರಘು ಕೊಲೆ ಮಾಡಿ ಪೊಲೀಸರ ಅತಿಥಿಯಾಗಿದ್ದಾನೆ…

ಗಂಡ ಅಮಾಯಕನಾಗಿದ್ದರಿಂದ ಆಶಾ ಮೈದುನ ರಾಘವೇಂದ್ರನ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದಳಂತೆ. ಈ ಕಾರಣಕ್ಕೆ ಆಂಜಿನಪ್ಪ ಅತ್ತಿಗೆಯನ್ನ ಪೀಡಿಸುತ್ತಿದ್ದಾನಂತಾ.. ಪಿತ್ತ ನೆತ್ತಿಗೆರಿಸಿಕೊಂಡು ಕೊಲೆ ಮಾಡಿ ಜೈಲು ಸೇರಿದ್ದಾನೆ. ಇನ್ನೂ ಆಶಾ ಹಾಗೂ ಆಂಜಿನಪ್ಪ ನಡುವೆ ಹಣದ ವ್ಯವಹಾರದ ಜೊತೆಗೆ ಅಕ್ರಮ ಸಂಬಂಧವೂ ಇತ್ತು ಎಂಬ ಶಂಕೆ ಕೂಡ ಇದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಯುವಕ ಕೊಲೆಯಾಗಿದೆ ಎಂದು ಹೇಳಲಾಗ್ತಿದೆ…

ಒಟ್ಟಿನಲ್ಲಿ ಪ್ರೀತಿ, ಪ್ರೇಮ, ಮೋಹದ ಬಲೆಗೆ ಸಿಕ್ಕ ದುರಂತವೋ ಏನೋ ವೈಯಕ್ತಿಕ ಕೊಲೆಯಲ್ಲಿ ಅಂತ್ಯವಾಗಿದೆ. ಇತ್ತ ಹೆಂಡತಿ ಹಾಗೂ ತಮ್ಮನ ವಿಚಾರ ತಿಳಿದು ಆಶಾಳ ಗಂಡ ಧರ್ಮ ಸಂಕಟಕ್ಕೆ ಸಿಲುಕಿದ್ದಾನೆ.

Ramesh Babu

Journalist

Recent Posts

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…

4 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ,…

4 hours ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

8 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

10 hours ago

ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…

13 hours ago

ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ……

ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…

17 hours ago