ಆಕೆಗೆ ಅಪರಿಚಿತನೊಬ್ಬ ಚಿರಪರಿಚಿತನಾದ… ಪರಿಚಯ ಹಣಕಾಸಿನ ವ್ಯವಹಾರದವರೆಗೂ ಸಾಗಿತು. ಸ್ನೇಹದಲ್ಲೇ ಇದ್ದ ಇಬ್ಬರ ಪರಿಚಯ ಮತ್ತೊಂದು ಘಟ್ಟದವರೆಗೆ ಸಾಗಿತು. ಆಕೆಯ ಮನೆ ಬಾಗಿಲಿಗೆ ಬಂದು ರಾದ್ದಾಂತ ಮಾಡಿದ್ದೇ ತಡ.. ಘೋರ ಕೃತ್ಯ ನಡೆದು ಹೋಗಿದೆ.
ಬರ್ಬರವಾಗಿ ಹೆಣವಾಗಿ ಬಿದ್ದಿರುವ ಯುವಕನ ಹೆಸರು ಆಂಜಿನಪ್ಪ@ಆಂಜಿರೆಡ್ಡಿ. ಚಿಕ್ಕಬಳ್ಳಾಪುರ ನಗರದ ಇಂದಿರಾನಗರದ ಆಶಾ ಎಂಬುವರ ಮನೆಗೆ ಬಂದು ರಾದ್ದಾಂತ ಮಾಡಿದ ಎಂಬ ಕಾರಣಕ್ಕೆ ಕೊಲೆಯಾಗಿ ಹೋಗಿದ್ದಾನೆ.
ಇನ್ನೂ ಕೊಲೆಯಾದ ಆಂಜಿನಪ್ಪ ಪೆಯಿಂಟ್ ಕೆಲಸ ಮಾಡಿಕೊಂಡು ತಂದೆ ತಾಯಿ ಜೊತೆಗೆ ನೆಮ್ಮದಿಯ ಜೀವನ ಸಾಗಿಸುತ್ತಿದ್ದ. ಆಂಜಿನಪ್ಪ, ಶಿಡ್ಲಘಟ್ಟ ತಾಲೂಕಿನ ನೆಂಟರ ಮನೆಗೆ ಹೋದಾಗ ಚಿಕ್ಕಬಳ್ಳಾಪುರ ನಗರದ ಆಶಾ ಪರಿಚಯವಾಗಿ ಪರಿಚಯ ಸ್ನೇಹಕ್ಕೆ ತಿರುಗಿ ಹಣದ ವ್ಯವಹಾರದವರೆಗೂ ಸಾಗಿದೆ. ಬಳಿಕ ಲವ್.. ಪವ್ ಅಂತ ಆಶಾಗೆ ಪೀಡಿಸಿದ್ನಂತೆ. ಇವರಿಬ್ಬರಿಗೆ ಅಕ್ರಮ ಸಂಬಂಧ ಕೂಡ ಇತ್ತು ಎನ್ನಲಾಗುತ್ತಿದೆ. ಮೂರು ದಿನಗಳ ಹಿಂದೆ ಅಂದರೆ ಫೆ. 21 ರಂದು ಸಂಜೆ 5:30ಕ್ಕೆ ಮನೆ ಒಳಗೆ ಆಂಜನಪ್ಪ ಬಂದು ಆಶಾ ಮೇಲೆ ಬಲತ್ಕಾರ ಮಾಡಲು ಪ್ರಯತ್ನ ಪಟ್ಟ ಎಂದು ಆರೋಪಿಸಲಾಗಿದೆ. ಆಂಜಿನಪ್ಪನನ್ನ ರೂಂ ನಲ್ಲಿ ಕೂಡಿ ಹಾಕಿ, ಆಶಾ ರೂಂ ನಿಂದ ತಪ್ಪಿಸಿಕೊಂಡು ಕೆಳಗೆ ಬಂದು ಪಕ್ಕದ ಮನೆಯವರ ಫೋನ್ ನಿಂದ ಮೊದಲು ಗಂಡನಿಗೆ ಕರೆ ಮಾಡಿದ್ದಾಳೆ, ಆಗ ಕಾಲ್ ತೆಗೆಯದೆ ಇದ್ದದ್ದಕ್ಕೆ ಮೈದುನ ರಾಘವೇಂದ್ರಗೆ ಕರೆ ಮಾಡಿದ್ದಾಳೆ. ತಕ್ಷಣವೇ ಮನೆಗೆ ಬಂದಾಗ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ. ಇದು ಅತಿರೇಕಕ್ಕೆ ತಿರುಗಿ ಬುಧವಾರ ಆಶಾ ಮನೆಗೆ ಬಂದ ಆಂಜಿನಪ್ಪ ಬಲತ್ಕಾರ ಮಾಡಿದ್ದನೆಂಬ ಕಾರಣಕ್ಕೆ ರಾಘವೇಂದ್ರ@ರಘು ಬೆಡ್ ರೂಂನಲ್ಲಿದ್ದ ಅಂಜಿನಪ್ಪಗೆ ಮಾರಕಾಸ್ತ್ರದಿಂದ ಬಲವಾಗಿ ಹೊಡೆದ ಪರಿಣಾಮ ಆಂಜಿನಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕೃತ್ಯ ಎಸೆಗಿದಂತೆ ಆಶಾ ಮತ್ತಿತರು ಹೇಳಿದರೂ ಕೇಳದ ರಘು ಕೊಲೆ ಮಾಡಿ ಪೊಲೀಸರ ಅತಿಥಿಯಾಗಿದ್ದಾನೆ…
ಗಂಡ ಅಮಾಯಕನಾಗಿದ್ದರಿಂದ ಆಶಾ ಮೈದುನ ರಾಘವೇಂದ್ರನ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದಳಂತೆ. ಈ ಕಾರಣಕ್ಕೆ ಆಂಜಿನಪ್ಪ ಅತ್ತಿಗೆಯನ್ನ ಪೀಡಿಸುತ್ತಿದ್ದಾನಂತಾ.. ಪಿತ್ತ ನೆತ್ತಿಗೆರಿಸಿಕೊಂಡು ಕೊಲೆ ಮಾಡಿ ಜೈಲು ಸೇರಿದ್ದಾನೆ. ಇನ್ನೂ ಆಶಾ ಹಾಗೂ ಆಂಜಿನಪ್ಪ ನಡುವೆ ಹಣದ ವ್ಯವಹಾರದ ಜೊತೆಗೆ ಅಕ್ರಮ ಸಂಬಂಧವೂ ಇತ್ತು ಎಂಬ ಶಂಕೆ ಕೂಡ ಇದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಯುವಕ ಕೊಲೆಯಾಗಿದೆ ಎಂದು ಹೇಳಲಾಗ್ತಿದೆ…
ಒಟ್ಟಿನಲ್ಲಿ ಪ್ರೀತಿ, ಪ್ರೇಮ, ಮೋಹದ ಬಲೆಗೆ ಸಿಕ್ಕ ದುರಂತವೋ ಏನೋ ವೈಯಕ್ತಿಕ ಕೊಲೆಯಲ್ಲಿ ಅಂತ್ಯವಾಗಿದೆ. ಇತ್ತ ಹೆಂಡತಿ ಹಾಗೂ ತಮ್ಮನ ವಿಚಾರ ತಿಳಿದು ಆಶಾಳ ಗಂಡ ಧರ್ಮ ಸಂಕಟಕ್ಕೆ ಸಿಲುಕಿದ್ದಾನೆ.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…