Categories: ಕೋಲಾರ

ಅಕ್ರಮ ಸಾಗುವಳಿ ಚೀಟಿ ವಿತರಣೆ ತನಿಖೆಗೆ ರೈತ ಸಂಘದಿಂದ ಕಂದಾಯ ಸಚಿವ ಕೃಷ್ಣಬೈರೇಗೌಡಗೆ ಮನವಿ

ಕೋಲಾರ : ಜಿಲ್ಲೆಯಲ್ಲಿ ನಡೆದಿರುವ ಅಕ್ರಮ ಸಾಗುವಳಿ ಚೀಟಿ ಅವ್ಯವಹಾರ ತನಿಖೆಗೆ ವಿಶೇಷ ನ್ಯಾಯಾಲಯ ಸ್ಥಾಪಿಸಿ ಪಿ ನಂಬರ್ ದುರಸ್ಥಿಗೆ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ಕಂದಾಯ ಸಚಿವ ಸಿ.ಬಿ ಕೃಷ್ಣಬೈರೇಗೌಡ ಅವರಿಗೆ ರೈತ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು.

ನಗರದ ಹೊರವಲಯದಲ್ಲಿರುವ ಜಿಲ್ಲಾಧಿಕಾರಿ ಸಂಭಾಂಗಣದಲ್ಲಿ ಕಂದಾಯ ಪ್ರಗತಿ ಪರಿಶೀಲನಾ ಸಭೆಗೆ ಆಗಮಿಸಿದ ವೇಳೆ ಮನವಿ ಸಲ್ಲಿಸಿದ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಜಿಲ್ಲೆಯಲ್ಲಿ ಕಂದಾಯ ಇಲಾಖೆಯಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಸಕಾಲದಲ್ಲಿ ಸ್ಪಂದನೆ ದೊರೆಯುತ್ತಿಲ್ಲ. ಜಿಲ್ಲೆಯ ಆರು ತಾಲ್ಲೂಕಿನ ತಾಲ್ಲೂಕು ಕಛೇರಿಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ನಿತ್ಯ ರೈತರು ಕಛೇರಿಗೆ ಅಲೆಯುವ ದುಸ್ಥಿತಿ ಎದುರಾಗಿದೆ ಎಂದು ಆರೋಪಿಸಿದರು.

ಇತ್ತೀಚೆಗೆ ಕೋಲಾರ ಜಿಲ್ಲಾಧಿಕಾರಿ ಕಛೇರಿಯಲ್ಲಿ ಮಾಲೂರಿನ ಜಮೀನು ಒಂದರ ಭೂ ಪರಿವರ್ತನೆಗೆ ಲಂಚ ಪಡೆಯುವ ವೇಳೆ ಸಿಬ್ಬಂದಿಗಳು ಲೋಕಯುಕ್ತ ಬಲೆಗೆ ಬಿದ್ದಿದ್ದಾರೆ ಜಿಲ್ಲಾಧಿಕಾರಿಗಳ ಕಛೇರಿಯಲ್ಲೇ ಬ್ರಹ್ಮಾಂಡ ಭ್ರಷ್ಟಾಚಾರ ನಡೆಯುತ್ತಿದ್ದರೂ ಜಿಲ್ಲಾಧಿಕಾರಿ ಕ್ರಮ ಕೈಗೊಳ್ಳುವಲ್ಲಿ ವಿಫಲಾಗಿದ್ದಾರೆ ಎಂದು ಬೇಸರ ವ್ಯಕ್ತ ಪಡಿಸಿದರು.

ತಾಲ್ಲೂಕು ಕಛೇರಿಗಳಲ್ಲಿ ದಲ್ಲಾಳಿಗಳ ಮುಖಾಂತರ ಹೋದರೆ ಮಾತ್ರ ಕೆಲಸ ಆಗುತ್ತದೆ. ಅಧಿಕಾರಿಗಳು, ಸಿಬ್ಬಂದಿಗಳು ಉಳ್ಳವರಿಗೆ ಒಂದು ನ್ಯಾಯ, ಬಡವರಿಗೆ ಒಂದು ನ್ಯಾಯ ಮಾಡುತ್ತಾರೆ ಎಂದು ಗಂಭೀರವಾಗಿ ಆರೋಪಿಸಿದರು.

ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ್ ಮಾತನಾಡಿ ಶ್ರೀನಿವಾಸಪುರ ಸೇರಿದಂತೆ ಜಿಲ್ಲೆಯಾದ್ಯಂತ ಅರಣ್ಯ ಭೂಮಿಯನ್ನು ರೈತರಿಗೆ ಅಕ್ರಮವಾಗಿ ಮಂಜೂರು ಮಾಡಿದ್ದಾರೆ, ಇದೀಗ ಅರಣ್ಯ ಇಲಾಖೆಯಿಂದ ತೆರವು ಮಾಡುತ್ತಿದ್ದು ರೈತರೆಲ್ಲ ಬೀದಿಪಾಲಾಗುತ್ತಿದ್ದಾರೆ, ಜೀವನೋಪಾಯಕ್ಕಾಗಿ ಕಂದಾಯ ಇಲಾಖೆಯಿಂದ ದರಖಾಸ್ತು ಸಮಿತಿಂದ ಭೂ ಮಂಜೂರು ಮಾಡಬೇಕು. ಆ ಮೂಲಕ ಅವರ ಸಂಕಷ್ಟ ನಿವಾರಿಸಬೇಕು ಅಕ್ರಮ ಸಾಗುವಳಿ ಚೀಟಿ ಹಂಚಿಕೆ ಮಾಡಿರುವ ಪ್ರಕರಣಗಳು ಬೆಳಕಿಗೆ ಬಂದಿದೆ, ಇದಕ್ಕೆ ಕಾರಣವಾಗಿರುವ ತಹಶಿಲ್ದಾರ್, ರಾಜಸ್ವ ನೀರಿಕ್ಷಕರ, ಕಾರ್ಯದರ್ಶಿ, ದರಖಾಸ್ತು ಸಮಿತಿ ಅಧ್ಯಕ್ಷರು, ಸದಸ್ಯರ ವಿರುದ್ಧ ಯಾವುದೇ ರೀತಿ ಕ್ರಮಕೈಗೊಳ್ಳದೆ ಸರ್ಕಾರವು ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿದರು.

ಮುಳಬಾಗಿಲಿಗೆ ಖಾಯಂ ತಹಶಿಲ್ದಾರ್ ನೇಮಕ ಮಾಡಬೇಕು, ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಬೇಕು, ಒಂದೇ ಕಡೆ ೧೦ ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ, ಅಧಿಕಾರಿಗಳನ್ನು ಬೇರೆ ಜಿಲ್ಲೆಗೆ ವರ್ಗಾವಣೆ ಮಾಡಬೇಕು. ಆ ಮೂಲಕ ಇಲಾಖೆಯಲ್ಲಿ ಪಾರದರ್ಶಕ ಆಡಳಿತಕ್ಕೆ ಒತ್ತು ನೀಡಬೇಕು ಎಂದು ತಿಳಿಸಿದರು.

ವೇಮಗಲ್, ನರಸಾಪುರ, ಮಾಲೂರು ಭಾಗದಲ್ಲಿ ಕೈಗಾರಿಕೆಗಳು ಸ್ಥಾಪನೆ ಆಗಿವೆ, ಜಿಲ್ಲೆಯಲ್ಲಿ ಬೆಂಗಳೂರು-ಚೆನ್ನೈ ಎಕ್ಸ್ ಪ್ರೆಸ್ ಕಾರಿಡಾರ್ ರಸ್ತೆ ಹಾದು ಹೋಗಿದ್ದು ಭೂಮಿಗೆ ಬಂಗಾರದ ಬೆಲೆ ಬಂದಿದ್ದೆ, ಇದಕ್ಕೆ ಪೂರಕವಾಗಿ ಭೂಗಳ್ಳರ ಕಾಟವು ಹೆಚ್ಚಾಗಿದ್ದು ಸರ್ಕಾರಿ ಜಮೀನುಗಳಿಗೆ ದಾಖಲೆ ಸೃಷ್ಟಿಸಿ ಕಬಳಿಸುವ ಯತ್ನಗಳು ನಡೆಯುತ್ತಿವೆ, ಇದಕ್ಕೆ ಮುಳಬಾಗಿಲು ತಾಲೂಕಿನ ದೇವರಾಯ ಸಮುದ್ರದ ಬಳಿ ಜರುಗಿರುವ ಪ್ರಕರಣ ಹಾಗೂ ನಕಲಿ ಸಾಗುವಳಿ ಚೀಟಿ ನೀಡಿರುವುದೇ ಸಾಕ್ಷಿ ಆಗಿದೆ ಎಂದು ತಿಳಿಸಿದರು.

ಅಂಗನವಾಡಿ ಕೇಂದ್ರ, ಸರ್ಕಾರಿ ವಸತಿ ನಿಲಯಗಳಿಗೆ ಶೇ.೧೦೦ರಷ್ಟು ನಿವೇಶನ ಕಲ್ಪಿಸಿ ಸ್ವಂತ ಸೂರು ನಿರ್ಮಿಸಿಕೊಳ್ಳಲು ಅವಕಾಶ ಕಲ್ಪಿಸಿಕೊಡಬೇಕು. ಗ್ರಾಮ ಲೆಕ್ಕಿಗರು ಮೂಲ ಸ್ಥಾನ ಬಿಟ್ಟು ಅರ್ಹತೆಯಿಲ್ಲದೆ ಕೆಲ ಹುದ್ದೆಗಳಿಗೆ ನಿಯೋಜನೆಗೊಂಡಿದ್ದಾರೆ, ಇದು ಇಲಾಖೆಯ ಪ್ರಗತಿಯ ಮೇಲೂ ಪರಿಣಾಮ ಬೀರುತ್ತಿದ್ದು, ನಿಯೋಜನೆ ರದ್ದು ಮಾಡಿ ಮೂಲಸ್ಥಾನಕ್ಕೆ ವಾಪಸ್ ಹೋಗಲು ಸೂಚಿಸಬೇಕು.
ಉಪ ವಿಭಾಗಾಧಿಕಾರಿ ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣಗಳು ಸಕಾಲಕ್ಕೆ ಇತ್ಯರ್ಥವಾಗುತ್ತಿಲ್ಲ, ದಾಖಲೆಗಳು ಸಮಪರ್ಕವಾಗಿದ್ದರು ದಲ್ಲಾಳಿಗಳ ಅಣತಿಯಂತೆ ಆದೇಶವಾಗುತ್ತಿದೆ. ಇದು ಪಾದರ್ಶಕವಾಗಿ ನಡೆಯಬೇಕು. ಭೂ ಕಬಳಿಕೆ ನ್ಯಾಯಾಲಯವನ್ನು ರಾಜಕೀಯ ಪಕ್ಷಗಳು ಉದ್ದೇಶ ಪೂರ್ವಕವಾಗಿಯೇ ಸ್ಥಗತಿಗೊಳಿಸಿದ್ದು, ಇದನ್ನು ಯಾಥಾವತ್ಥಾಗಿ ಮುಂದು ವರೆಸಬೇಕು, ಇದರಿಂದಾಗಿ ಸರ್ಕಾರಿ ಜಮೀನುಗಳನ್ನು ಉಳಿಸಲು ಸಾಧ್ಯವಾಗುತ್ತದೆ ಎಂದರು.

ಸುಮಾರು ದಶಗಳಿಂದ ಪಿ ನಂಬರ್ ದುರಸ್ತಿ ಸಮಸ್ಯೆಯು ಶಾಶ್ವತವಾಗಿ ಉಳಿದಿದೆ, ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿರುವ ತಾಲೂಕು ವ್ಯಾಪ್ತಿಗಳಲ್ಲಿ ಪಿ ನಂಬರ್ ತೆರವು ನಡೆಯುತ್ತಿದೆ, ಇದು ಸಹ ಲಕ್ಷಾಂರ ರೂ ಹಣ ಕೊಟ್ಟರೆ ಮಾತ್ರ ಅಧಿಕಾರಿಗಳು ಮಾಡುತ್ತಾರೆ, ಆದರೆ ಜಿಲ್ಲೆಯಲ್ಲಿ ಈ ಸಮಸ್ಯೆಯು ಲಕ್ಷಾಂತರ ಮಂದಿಯದ್ದಾಗಿದ್ದು ಇದು ಅಂದೋಲನ ರೀತಿಯಲ್ಲಿ ಆಗಬೇಕಿದೆ. ಸರ್ಕಾರವು ವಿಶೇಷ ಗಮನ ಹರಿಸಿ ಜಿಲ್ಲಾಡಳಿತ ಹಂತದಲ್ಲಿ ನ್ಯಾಯಲಯ ತೆರೆಯಬೇಕು ಎಂದು ಸಚಿವರಲ್ಲಿ ಮನವಿ ಮಾಡಿದರು.
ಮನವಿ ನೀಡುವಾಗ ಮಂಗಸಂದ್ರ ತಿಮ್ಮಣ್ಣ, ಪುತ್ತೇರಿ ರಾಜು, ಗೀರೀಶ್, ಈಕಂಬಳ್ಳಿ ಮಂಜುನಾಥ್ ಮುಂತಾದವರಿದ್ದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

7 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

11 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

11 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

16 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago