ಅಕ್ರಮ ಹಣ ವರ್ಗಾವಣೆ ಆರೋಪ: ನಟ ಮಹೇಶ್ ಬಾಬುಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ಜಾರಿ

ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ನೋಟಿಸ್ ಜಾರಿ ಮಾಡಿದೆ. ಸಾಯಿಸೂರ್ಯ ಡೆವಲಪರ್ಸ್ ಮತ್ತು ಸುರಾನ ಪ್ರಾಜೆಕ್ಟ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಇಡಿ ನಟನಿಗೆ ನೋಟಿಸ್ ಜಾರಿ ಮಾಡಿದ್ದು, ಏ. 27ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ಮಹೇಶ್ ಬಾಬು ಈ ಎರಡೂ ಸಂಸ್ಥೆಗಳ ಪ್ರಚಾರಕರಾಗಿದ್ದಾರೆ. ಹೂಡಿಕೆ ಮಾಡುವಂತೆ ಪ್ರಭಾವ ಬೀರಿದ ಆರೋಪದ ಮೇಲೆ ಇಡಿ ಈ ನೋಟಿಸ್‌ಗಳನ್ನು ನೀಡಿದೆ. ಆಯಾ ಕಂಪನಿಗಳು ಮಹೇಶ್ ಬಾಬುಗೆ ನೀಡಿದ ಸಂಭಾವನೆಯ ಬಗ್ಗೆ ಸಂಸ್ಥೆ ತನಿಖೆ ನಡೆಸುತ್ತಿದೆ ಎಂದು ವರದಿಯಾಗಿದೆ.

ವರದಿಗಳ ಪ್ರಕಾರ, ಸಾಯಿ ಸೂರ್ಯ ಡೆವಲಪರ್ಸ್ ಮತ್ತು ಸುರಾನಾ ಗ್ರೂಪ್ ಪ್ರಾರಂಭಿಸಿದ ರಿಯಲ್ ಎಸ್ಟೇಟ್ ಪ್ರಾಜೆಕ್ಟ್​ಗಳನ್ನು ಮಹೇಶ್ ಬಾಬು ಬೆಂಬಲಿಸಿದ್ದರು. ಆದರೆ ಈ ಗ್ರೂಪ್ಸ್​​ ಗ್ರಾಹಕರನ್ನು ವಂಚಿಸಿದೆಯೆಂಬ ಆರೋಪವಿದೆ. ಹಾಗಾಗಿ, ನಟನ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿಗೆ ನೋಟಿಸ್ ನೀಡಲಾಗಿದೆ.

ವರದಿಗಳ ಪ್ರಕಾರ, ಮಹೇಶ್ ಬಾಬು ಈ ಅನುಮೋದನೆಗಳಿಗಾಗಿ 5.9 ಕೋಟಿ ರೂ.ಗಳನ್ನು ಪಡೆದುಕೊಂಡಿದ್ದಾರೆ. ಚೆಕ್ ಮೂಲಕ 3.4 ಕೋಟಿ ರೂಪಾಯಿ ಮತ್ತು ನಗದು ಮೂಲಕ 2.5 ಕೋಟಿ ರೂಪಾಯಿ ಸ್ವೀಕರಿಸಿದ್ದಾರೆ. ಇದೀಗ, ನಗದು ಪಾವತಿಗಳು ಪರಿಶೀಲನೆಗೆ ಒಳಪಟ್ಟಿವೆ.

Leave a Reply

Your email address will not be published. Required fields are marked *