ಅಕ್ಷಯ ತೃತೀಯ ದಿನದಂದು ಬಾಲ್ಯ ವಿವಾಹ ನಡೆಯದಂತೆ ಕ್ರಮ ವಹಿಸಿ- ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಬಾಲ್ಯವಿವಾಹವು ಅನಾದಿ ಕಾಲದಿಂದ ನಡೆದು ಬಂದ ಅನಿಷ್ಟ ಪದ್ಧತಿಯಾಗಿದ್ದು, ಇದು 21ನೇ ಶತಮಾನದಲ್ಲೂ ಆಚರಣೆಯಲ್ಲಿರುವುದು ಶೋಚನೀಯ ಸಂಗತಿ.

ಏಪ್ರಿಲ್ 30 ರಂದು ಬಸವ ಜಯಂತಿ ಮತ್ತು ಅಕ್ಷಯ ತೃತೀಯ ದಿನವಾಗಿದ್ದು, ಬಾಲ್ಯವಿವಾಹ ಪ್ರಕರಣಗಳು ಹೆಚ್ಚು ನಡೆಯುವ ಸಾಧ್ಯತೆ ಹೆಚ್ಚಿದ್ದು,ಎಲ್ಲಾ ಬಾಲ್ಯವಿವಾಹ ನಿಷೇಧಾಧಿಕಾರಿಗಳು ಕಟ್ಟುನಿಟ್ಟಿನ ಕ್ರಮವಹಿಸುವಂತೆ ಜಿಲ್ಲಾಧಿಕಾರಿಗಳು ಬಸವರಾಜು ಎ ಬಿ ತಿಳಿಸಿದ್ದಾರೆ.

ಬಾಲ್ಯ ವಿವಾಹವೆಂದರೆ 18 ವರ್ಷದೊಳಗಿನ ಹುಡುಗಿ ಹಾಗೂ 21 ವರ್ಷದೊಳಗಿನ ಹುಡುಗನ ನಡುವೆ ನಡೆಯುವ ಮದುವೆ ಅಥವಾ ಇಬ್ಬರಲ್ಲಿ ಒಬ್ಬರು ನಿಗದಿತ ವಯಸ್ಸಿನೊಳಗಿದ್ದರು ಇಂತಹ ಮದುವೆಯನ್ನು ಬಾಲ್ಯವಿವಾಹ ಎಂದು ಪರಿಗಣಿಸಿ.

ಬಾಲ್ಯವಿವಾಹ ನಿಷೇಧ (ಕರ್ನಾಟಕ ತಿದ್ದುಪಡಿ) ಅಧಿನಿಯಮ -2016 ಪ್ರಕಾರ ಈ ಮದುವೆಯನ್ನು ಏರ್ಪಡಿಸಿದ ಪೋಷಕರು ಅಥವಾ ಪಾಲಕರು, 18 ವರ್ಷದೊಳಗಿನ ಹುಡುಗಿಯನ್ನು ಮದುವೆಯಾಗುವ ವಯಸ್ಕ ವ್ಯಕ್ತಿ ಮತ್ತು ಮದುವೆಯಲ್ಲಿ ಭಾಗವಹಿಸುವ ಎಲ್ಲಾ ರೀತಿಯಲ್ಲಿ ಸಹಕರಿಸಿದ ಕುಟುಂಬಸ್ಥರನ್ನು ಸಹ ತಪ್ಪಿತಸ್ಥರು ಎಂದು ಇವರುಗಳಿಗೆ ಮೇಲೆ ತಿಳಿಸಿದ ಕಾಯ್ದೆಯ ಪ್ರಕಾರ ಒಂದು ವರ್ಷಕ್ಕೆ ಕಡಿಮೆಯಿಲ್ಲದ ಅಂದರೆ ಎರಡು ವರ್ಷಗಳ ಕಾಲ ವಿಸ್ತರಿಸಬಹುದಾದ ಕಠಿಣ ಜೈಲು ಶಿಕ್ಷೆ ಅಥವಾ ಒಂದು ಲಕ್ಷ ರೂಪಾಯಿಗಳವರೆಗೆ ವಿಸ್ತರಿಸಬಹುದಾದ ಜುಲ್ಮಾನೆಗೆ ಅಥವಾ ಇವರೆಡರಿಂದಲು ಶಿಕ್ಷೆಗೆ ಒಳಪಡುತ್ತಾರೆ. ಈ ಕಾಯ್ದೆಯಡಿ ಪ್ರತಿಯೊಬ್ಬ ಪೊಲೀಸ್ ಅಧಿಕಾರಿಯು ತನ್ನ ಅಧಿಕಾರ ವ್ಯಾಪ್ತಿಯಡಿ ಬಾಲ್ಯವಿವಾಹ ಜರುಗುತ್ತಿರುವ ಮಾಹಿತಿ ಬಂದಾಗ ಸ್ವಪ್ರೇರಿತವಾಗಿ ದೂರು ದಾಖಲು ಮಾಡಲು ಅವಕಾಶವಿರುತ್ತದೆ.ಅದೇ ರೀತಿ ಇದು ಕೇವಲ ಸರ್ಕಾರಿ ಅಧಿಕಾರಿಗಳ ಜವಾಬ್ದಾರಿಯಾಗದೇ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿರುತ್ತದೆ.

ಬಾಲ್ಯವಿವಾಹ ನಿಷೇಧಾಧಿಕಾರಿಗಳು ತಮ್ಮ ಕಾರ್ಯವ್ಯಾಪ್ತಿಗೆ ಬರುವ ಧಾರ್ಮಿಕ ಸ್ಥಳಗಳಲ್ಲಿ ಮತ್ತು ಕಲ್ಯಾಣ ಮಂಟಪಗಳಲ್ಲಿ ಸಾಮೂಹಿಕ ಅಥವಾ ವೈಯಕ್ತಿಕ ವಿವಾಹದಲ್ಲಿ ಯಾವುದೇ ಬಾಲ್ಯವಿವಾಹಗಳು ಜರುಗದಂತೆ ಕ್ರಮವಹಿಸಬೇಕು.

ಜಿಲ್ಲೆಯಲ್ಲಿ ಬಾಲ್ಯವಿವಾಹ ನಡೆಯುತ್ತಿರುವುದು ಗಮನಕ್ಕೆ ಬಂದರೆ ತುರ್ತಾಗಿ ಮಕ್ಕಳ ಸಹಾಯವಾಣಿ 1098, ಪೊಲೀಸ್ ಸಹಾಯವಾಣಿ 112 ಮತ್ತು ಮಕ್ಕಳ ರಕ್ಷಣಾ ಘಟಕ 080-29560034 ಹಾಗೂ ಸಂಬಂಧಪಟ್ಟ ಹತ್ತಿರದ ಪೊಲೀಸ್ ಠಾಣೆಗೆ ದೂರು ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Ramesh Babu

Journalist

Recent Posts

ಪ್ರಧಾನಿ ನರೇಂದ್ರ ಮೋದಿಯನ್ನ ಭೇಟಿಯಾದ ಸಿಎಂ ಸಿದ್ದರಾಮಯ್ಯ:ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ: ಬೇಡಿಕೆ ಯಾವುದು….?

ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…

5 hours ago

ಕಡೇ ಕಾರ್ತೀಕ ಸೋಮವಾರ: ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ

ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…

7 hours ago

ನಾಳೆ (ನ.18) ತಾಲೂಕಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ ನೋಡಿ….

ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್‌…

7 hours ago

18 ದೇವಸ್ಥಾನಗಳಿಗೆ ಕನ್ನ ಹಾಕಿದ್ದ ಖದೀಮರ ಬಂಧನ: ಲಕ್ಷಾಂತರ ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು ವಶ

  18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು‌ ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…

14 hours ago

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಎಂಬಿಎ ವಿದ್ಯಾರ್ಥಿ ಸಾವು

ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…

14 hours ago

ಮೊಬೈಲ್ ನೋಡುತ್ತಾ ಕುಳಿತಿದ್ದ 21 ವರ್ಷದ ಯುವಕನಿಗೆ ಚಾಕು ಇರಿತ: ಚಾಕು ಇರಿತ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…

17 hours ago