ಬಾಲ್ಯವಿವಾಹವು ಅನಾದಿ ಕಾಲದಿಂದ ನಡೆದು ಬಂದ ಅನಿಷ್ಟ ಪದ್ಧತಿಯಾಗಿದ್ದು, ಇದು 21ನೇ ಶತಮಾನದಲ್ಲೂ ಆಚರಣೆಯಲ್ಲಿರುವುದು ಶೋಚನೀಯ ಸಂಗತಿ.
ಏಪ್ರಿಲ್ 30 ರಂದು ಬಸವ ಜಯಂತಿ ಮತ್ತು ಅಕ್ಷಯ ತೃತೀಯ ದಿನವಾಗಿದ್ದು, ಬಾಲ್ಯವಿವಾಹ ಪ್ರಕರಣಗಳು ಹೆಚ್ಚು ನಡೆಯುವ ಸಾಧ್ಯತೆ ಹೆಚ್ಚಿದ್ದು,ಎಲ್ಲಾ ಬಾಲ್ಯವಿವಾಹ ನಿಷೇಧಾಧಿಕಾರಿಗಳು ಕಟ್ಟುನಿಟ್ಟಿನ ಕ್ರಮವಹಿಸುವಂತೆ ಜಿಲ್ಲಾಧಿಕಾರಿಗಳು ಬಸವರಾಜು ಎ ಬಿ ತಿಳಿಸಿದ್ದಾರೆ.
ಬಾಲ್ಯ ವಿವಾಹವೆಂದರೆ 18 ವರ್ಷದೊಳಗಿನ ಹುಡುಗಿ ಹಾಗೂ 21 ವರ್ಷದೊಳಗಿನ ಹುಡುಗನ ನಡುವೆ ನಡೆಯುವ ಮದುವೆ ಅಥವಾ ಇಬ್ಬರಲ್ಲಿ ಒಬ್ಬರು ನಿಗದಿತ ವಯಸ್ಸಿನೊಳಗಿದ್ದರು ಇಂತಹ ಮದುವೆಯನ್ನು ಬಾಲ್ಯವಿವಾಹ ಎಂದು ಪರಿಗಣಿಸಿ.
ಬಾಲ್ಯವಿವಾಹ ನಿಷೇಧ (ಕರ್ನಾಟಕ ತಿದ್ದುಪಡಿ) ಅಧಿನಿಯಮ -2016 ಪ್ರಕಾರ ಈ ಮದುವೆಯನ್ನು ಏರ್ಪಡಿಸಿದ ಪೋಷಕರು ಅಥವಾ ಪಾಲಕರು, 18 ವರ್ಷದೊಳಗಿನ ಹುಡುಗಿಯನ್ನು ಮದುವೆಯಾಗುವ ವಯಸ್ಕ ವ್ಯಕ್ತಿ ಮತ್ತು ಮದುವೆಯಲ್ಲಿ ಭಾಗವಹಿಸುವ ಎಲ್ಲಾ ರೀತಿಯಲ್ಲಿ ಸಹಕರಿಸಿದ ಕುಟುಂಬಸ್ಥರನ್ನು ಸಹ ತಪ್ಪಿತಸ್ಥರು ಎಂದು ಇವರುಗಳಿಗೆ ಮೇಲೆ ತಿಳಿಸಿದ ಕಾಯ್ದೆಯ ಪ್ರಕಾರ ಒಂದು ವರ್ಷಕ್ಕೆ ಕಡಿಮೆಯಿಲ್ಲದ ಅಂದರೆ ಎರಡು ವರ್ಷಗಳ ಕಾಲ ವಿಸ್ತರಿಸಬಹುದಾದ ಕಠಿಣ ಜೈಲು ಶಿಕ್ಷೆ ಅಥವಾ ಒಂದು ಲಕ್ಷ ರೂಪಾಯಿಗಳವರೆಗೆ ವಿಸ್ತರಿಸಬಹುದಾದ ಜುಲ್ಮಾನೆಗೆ ಅಥವಾ ಇವರೆಡರಿಂದಲು ಶಿಕ್ಷೆಗೆ ಒಳಪಡುತ್ತಾರೆ. ಈ ಕಾಯ್ದೆಯಡಿ ಪ್ರತಿಯೊಬ್ಬ ಪೊಲೀಸ್ ಅಧಿಕಾರಿಯು ತನ್ನ ಅಧಿಕಾರ ವ್ಯಾಪ್ತಿಯಡಿ ಬಾಲ್ಯವಿವಾಹ ಜರುಗುತ್ತಿರುವ ಮಾಹಿತಿ ಬಂದಾಗ ಸ್ವಪ್ರೇರಿತವಾಗಿ ದೂರು ದಾಖಲು ಮಾಡಲು ಅವಕಾಶವಿರುತ್ತದೆ.ಅದೇ ರೀತಿ ಇದು ಕೇವಲ ಸರ್ಕಾರಿ ಅಧಿಕಾರಿಗಳ ಜವಾಬ್ದಾರಿಯಾಗದೇ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿರುತ್ತದೆ.
ಬಾಲ್ಯವಿವಾಹ ನಿಷೇಧಾಧಿಕಾರಿಗಳು ತಮ್ಮ ಕಾರ್ಯವ್ಯಾಪ್ತಿಗೆ ಬರುವ ಧಾರ್ಮಿಕ ಸ್ಥಳಗಳಲ್ಲಿ ಮತ್ತು ಕಲ್ಯಾಣ ಮಂಟಪಗಳಲ್ಲಿ ಸಾಮೂಹಿಕ ಅಥವಾ ವೈಯಕ್ತಿಕ ವಿವಾಹದಲ್ಲಿ ಯಾವುದೇ ಬಾಲ್ಯವಿವಾಹಗಳು ಜರುಗದಂತೆ ಕ್ರಮವಹಿಸಬೇಕು.
ಜಿಲ್ಲೆಯಲ್ಲಿ ಬಾಲ್ಯವಿವಾಹ ನಡೆಯುತ್ತಿರುವುದು ಗಮನಕ್ಕೆ ಬಂದರೆ ತುರ್ತಾಗಿ ಮಕ್ಕಳ ಸಹಾಯವಾಣಿ 1098, ಪೊಲೀಸ್ ಸಹಾಯವಾಣಿ 112 ಮತ್ತು ಮಕ್ಕಳ ರಕ್ಷಣಾ ಘಟಕ 080-29560034 ಹಾಗೂ ಸಂಬಂಧಪಟ್ಟ ಹತ್ತಿರದ ಪೊಲೀಸ್ ಠಾಣೆಗೆ ದೂರು ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…
ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…
ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…
ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…