ಬಾಲ್ಯವಿವಾಹವು ಅನಾದಿ ಕಾಲದಿಂದ ನಡೆದು ಬಂದ ಅನಿಷ್ಟ ಪದ್ಧತಿಯಾಗಿದ್ದು, ಇದು 21ನೇ ಶತಮಾನದಲ್ಲೂ ಆಚರಣೆಯಲ್ಲಿರುವುದು ಶೋಚನೀಯ ಸಂಗತಿ.
ಏಪ್ರಿಲ್ 30 ರಂದು ಬಸವ ಜಯಂತಿ ಮತ್ತು ಅಕ್ಷಯ ತೃತೀಯ ದಿನವಾಗಿದ್ದು, ಬಾಲ್ಯವಿವಾಹ ಪ್ರಕರಣಗಳು ಹೆಚ್ಚು ನಡೆಯುವ ಸಾಧ್ಯತೆ ಹೆಚ್ಚಿದ್ದು,ಎಲ್ಲಾ ಬಾಲ್ಯವಿವಾಹ ನಿಷೇಧಾಧಿಕಾರಿಗಳು ಕಟ್ಟುನಿಟ್ಟಿನ ಕ್ರಮವಹಿಸುವಂತೆ ಜಿಲ್ಲಾಧಿಕಾರಿಗಳು ಬಸವರಾಜು ಎ ಬಿ ತಿಳಿಸಿದ್ದಾರೆ.
ಬಾಲ್ಯ ವಿವಾಹವೆಂದರೆ 18 ವರ್ಷದೊಳಗಿನ ಹುಡುಗಿ ಹಾಗೂ 21 ವರ್ಷದೊಳಗಿನ ಹುಡುಗನ ನಡುವೆ ನಡೆಯುವ ಮದುವೆ ಅಥವಾ ಇಬ್ಬರಲ್ಲಿ ಒಬ್ಬರು ನಿಗದಿತ ವಯಸ್ಸಿನೊಳಗಿದ್ದರು ಇಂತಹ ಮದುವೆಯನ್ನು ಬಾಲ್ಯವಿವಾಹ ಎಂದು ಪರಿಗಣಿಸಿ.
ಬಾಲ್ಯವಿವಾಹ ನಿಷೇಧ (ಕರ್ನಾಟಕ ತಿದ್ದುಪಡಿ) ಅಧಿನಿಯಮ -2016 ಪ್ರಕಾರ ಈ ಮದುವೆಯನ್ನು ಏರ್ಪಡಿಸಿದ ಪೋಷಕರು ಅಥವಾ ಪಾಲಕರು, 18 ವರ್ಷದೊಳಗಿನ ಹುಡುಗಿಯನ್ನು ಮದುವೆಯಾಗುವ ವಯಸ್ಕ ವ್ಯಕ್ತಿ ಮತ್ತು ಮದುವೆಯಲ್ಲಿ ಭಾಗವಹಿಸುವ ಎಲ್ಲಾ ರೀತಿಯಲ್ಲಿ ಸಹಕರಿಸಿದ ಕುಟುಂಬಸ್ಥರನ್ನು ಸಹ ತಪ್ಪಿತಸ್ಥರು ಎಂದು ಇವರುಗಳಿಗೆ ಮೇಲೆ ತಿಳಿಸಿದ ಕಾಯ್ದೆಯ ಪ್ರಕಾರ ಒಂದು ವರ್ಷಕ್ಕೆ ಕಡಿಮೆಯಿಲ್ಲದ ಅಂದರೆ ಎರಡು ವರ್ಷಗಳ ಕಾಲ ವಿಸ್ತರಿಸಬಹುದಾದ ಕಠಿಣ ಜೈಲು ಶಿಕ್ಷೆ ಅಥವಾ ಒಂದು ಲಕ್ಷ ರೂಪಾಯಿಗಳವರೆಗೆ ವಿಸ್ತರಿಸಬಹುದಾದ ಜುಲ್ಮಾನೆಗೆ ಅಥವಾ ಇವರೆಡರಿಂದಲು ಶಿಕ್ಷೆಗೆ ಒಳಪಡುತ್ತಾರೆ. ಈ ಕಾಯ್ದೆಯಡಿ ಪ್ರತಿಯೊಬ್ಬ ಪೊಲೀಸ್ ಅಧಿಕಾರಿಯು ತನ್ನ ಅಧಿಕಾರ ವ್ಯಾಪ್ತಿಯಡಿ ಬಾಲ್ಯವಿವಾಹ ಜರುಗುತ್ತಿರುವ ಮಾಹಿತಿ ಬಂದಾಗ ಸ್ವಪ್ರೇರಿತವಾಗಿ ದೂರು ದಾಖಲು ಮಾಡಲು ಅವಕಾಶವಿರುತ್ತದೆ.ಅದೇ ರೀತಿ ಇದು ಕೇವಲ ಸರ್ಕಾರಿ ಅಧಿಕಾರಿಗಳ ಜವಾಬ್ದಾರಿಯಾಗದೇ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿರುತ್ತದೆ.
ಬಾಲ್ಯವಿವಾಹ ನಿಷೇಧಾಧಿಕಾರಿಗಳು ತಮ್ಮ ಕಾರ್ಯವ್ಯಾಪ್ತಿಗೆ ಬರುವ ಧಾರ್ಮಿಕ ಸ್ಥಳಗಳಲ್ಲಿ ಮತ್ತು ಕಲ್ಯಾಣ ಮಂಟಪಗಳಲ್ಲಿ ಸಾಮೂಹಿಕ ಅಥವಾ ವೈಯಕ್ತಿಕ ವಿವಾಹದಲ್ಲಿ ಯಾವುದೇ ಬಾಲ್ಯವಿವಾಹಗಳು ಜರುಗದಂತೆ ಕ್ರಮವಹಿಸಬೇಕು.
ಜಿಲ್ಲೆಯಲ್ಲಿ ಬಾಲ್ಯವಿವಾಹ ನಡೆಯುತ್ತಿರುವುದು ಗಮನಕ್ಕೆ ಬಂದರೆ ತುರ್ತಾಗಿ ಮಕ್ಕಳ ಸಹಾಯವಾಣಿ 1098, ಪೊಲೀಸ್ ಸಹಾಯವಾಣಿ 112 ಮತ್ತು ಮಕ್ಕಳ ರಕ್ಷಣಾ ಘಟಕ 080-29560034 ಹಾಗೂ ಸಂಬಂಧಪಟ್ಟ ಹತ್ತಿರದ ಪೊಲೀಸ್ ಠಾಣೆಗೆ ದೂರು ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಅಂಗವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಲಕ್ಕೇನಹಳ್ಳಿ ಬಳಿ ಡ್ಯಾಂ ನಿರ್ಮಿಸಲು ಉದ್ದೇಶಿಸಿರುವ ಕ್ರಮಕ್ಕೆ…
ನ್ಯೂಯಾರ್ಕ್–ನ್ಯೂಜೆರ್ಸಿ: ತೀವ್ರ ಕುತೂಹಲ ಕೆರಳಿಸಿದ್ದ ಫಿಫಾ ವಿಶ್ವಕಪ್-2026ರ ಫೈನಲ್ನಲ್ಲಿ ಯುರೋಪಿಯನ್ ಚಾಂಪಿಯನ್ ಸ್ಪೇನ್, ಹಾಲಿ ವಿಶ್ವ ಚಾಂಪಿಯನ್ ಅರ್ಜೆಂಟೀನಾವನ್ನು 1-0…
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬರ ಪರಿಸ್ಥಿತಿ ಕುರಿತು ಜಿಲ್ಲಾಧಿಕಾರಿಗಳು ಮತ್ತು ಸಿಇಒಗಳ ಜೊತೆ ಸನ್ಮಾನ್ಯ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಡಿಯೋ…
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರಾಜ್ಯದ ಬರ ಪರಿಸ್ಥಿತಿ, ಮಳೆಗಾಲ, ಕುಡಿಯುವ ನೀರು ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ಹಾಗೂ ನವೋದಯ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯ ಆಸರೆ–ಸನ್ಮಿತ್ರ ಯೋಜನೆಯಡಿ…
ಕನ್ನಡಿಗರಿಗೆ ಉದ್ಯೋಗ ಮೀಸಲಾತಿ...... ಸರಳವಾಗಿ ಬಹು ಆಯಾಮಗಳ ಒಂದು ಚಿಂತನ ಮಂಥನ........ ಕರ್ನಾಟಕದ ಖಾಸಗಿ ಉದ್ದಿಮೆಗಳಲ್ಲಿ ಸ್ಥಳೀಯ ಕನ್ನಡಿಗರಿಗೆ ಮೀಸಲಾತಿಯ…