ಬಾಲ್ಯವಿವಾಹವು ಅನಾದಿ ಕಾಲದಿಂದ ನಡೆದು ಬಂದ ಅನಿಷ್ಟ ಪದ್ಧತಿಯಾಗಿದ್ದು, ಇದು 21ನೇ ಶತಮಾನದಲ್ಲೂ ಆಚರಣೆಯಲ್ಲಿರುವುದು ಶೋಚನೀಯ ಸಂಗತಿ.
ಏಪ್ರಿಲ್ 30 ರಂದು ಬಸವ ಜಯಂತಿ ಮತ್ತು ಅಕ್ಷಯ ತೃತೀಯ ದಿನವಾಗಿದ್ದು, ಬಾಲ್ಯವಿವಾಹ ಪ್ರಕರಣಗಳು ಹೆಚ್ಚು ನಡೆಯುವ ಸಾಧ್ಯತೆ ಹೆಚ್ಚಿದ್ದು,ಎಲ್ಲಾ ಬಾಲ್ಯವಿವಾಹ ನಿಷೇಧಾಧಿಕಾರಿಗಳು ಕಟ್ಟುನಿಟ್ಟಿನ ಕ್ರಮವಹಿಸುವಂತೆ ಜಿಲ್ಲಾಧಿಕಾರಿಗಳು ಬಸವರಾಜು ಎ ಬಿ ತಿಳಿಸಿದ್ದಾರೆ.
ಬಾಲ್ಯ ವಿವಾಹವೆಂದರೆ 18 ವರ್ಷದೊಳಗಿನ ಹುಡುಗಿ ಹಾಗೂ 21 ವರ್ಷದೊಳಗಿನ ಹುಡುಗನ ನಡುವೆ ನಡೆಯುವ ಮದುವೆ ಅಥವಾ ಇಬ್ಬರಲ್ಲಿ ಒಬ್ಬರು ನಿಗದಿತ ವಯಸ್ಸಿನೊಳಗಿದ್ದರು ಇಂತಹ ಮದುವೆಯನ್ನು ಬಾಲ್ಯವಿವಾಹ ಎಂದು ಪರಿಗಣಿಸಿ.
ಬಾಲ್ಯವಿವಾಹ ನಿಷೇಧ (ಕರ್ನಾಟಕ ತಿದ್ದುಪಡಿ) ಅಧಿನಿಯಮ -2016 ಪ್ರಕಾರ ಈ ಮದುವೆಯನ್ನು ಏರ್ಪಡಿಸಿದ ಪೋಷಕರು ಅಥವಾ ಪಾಲಕರು, 18 ವರ್ಷದೊಳಗಿನ ಹುಡುಗಿಯನ್ನು ಮದುವೆಯಾಗುವ ವಯಸ್ಕ ವ್ಯಕ್ತಿ ಮತ್ತು ಮದುವೆಯಲ್ಲಿ ಭಾಗವಹಿಸುವ ಎಲ್ಲಾ ರೀತಿಯಲ್ಲಿ ಸಹಕರಿಸಿದ ಕುಟುಂಬಸ್ಥರನ್ನು ಸಹ ತಪ್ಪಿತಸ್ಥರು ಎಂದು ಇವರುಗಳಿಗೆ ಮೇಲೆ ತಿಳಿಸಿದ ಕಾಯ್ದೆಯ ಪ್ರಕಾರ ಒಂದು ವರ್ಷಕ್ಕೆ ಕಡಿಮೆಯಿಲ್ಲದ ಅಂದರೆ ಎರಡು ವರ್ಷಗಳ ಕಾಲ ವಿಸ್ತರಿಸಬಹುದಾದ ಕಠಿಣ ಜೈಲು ಶಿಕ್ಷೆ ಅಥವಾ ಒಂದು ಲಕ್ಷ ರೂಪಾಯಿಗಳವರೆಗೆ ವಿಸ್ತರಿಸಬಹುದಾದ ಜುಲ್ಮಾನೆಗೆ ಅಥವಾ ಇವರೆಡರಿಂದಲು ಶಿಕ್ಷೆಗೆ ಒಳಪಡುತ್ತಾರೆ. ಈ ಕಾಯ್ದೆಯಡಿ ಪ್ರತಿಯೊಬ್ಬ ಪೊಲೀಸ್ ಅಧಿಕಾರಿಯು ತನ್ನ ಅಧಿಕಾರ ವ್ಯಾಪ್ತಿಯಡಿ ಬಾಲ್ಯವಿವಾಹ ಜರುಗುತ್ತಿರುವ ಮಾಹಿತಿ ಬಂದಾಗ ಸ್ವಪ್ರೇರಿತವಾಗಿ ದೂರು ದಾಖಲು ಮಾಡಲು ಅವಕಾಶವಿರುತ್ತದೆ.ಅದೇ ರೀತಿ ಇದು ಕೇವಲ ಸರ್ಕಾರಿ ಅಧಿಕಾರಿಗಳ ಜವಾಬ್ದಾರಿಯಾಗದೇ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿರುತ್ತದೆ.
ಬಾಲ್ಯವಿವಾಹ ನಿಷೇಧಾಧಿಕಾರಿಗಳು ತಮ್ಮ ಕಾರ್ಯವ್ಯಾಪ್ತಿಗೆ ಬರುವ ಧಾರ್ಮಿಕ ಸ್ಥಳಗಳಲ್ಲಿ ಮತ್ತು ಕಲ್ಯಾಣ ಮಂಟಪಗಳಲ್ಲಿ ಸಾಮೂಹಿಕ ಅಥವಾ ವೈಯಕ್ತಿಕ ವಿವಾಹದಲ್ಲಿ ಯಾವುದೇ ಬಾಲ್ಯವಿವಾಹಗಳು ಜರುಗದಂತೆ ಕ್ರಮವಹಿಸಬೇಕು.
ಜಿಲ್ಲೆಯಲ್ಲಿ ಬಾಲ್ಯವಿವಾಹ ನಡೆಯುತ್ತಿರುವುದು ಗಮನಕ್ಕೆ ಬಂದರೆ ತುರ್ತಾಗಿ ಮಕ್ಕಳ ಸಹಾಯವಾಣಿ 1098, ಪೊಲೀಸ್ ಸಹಾಯವಾಣಿ 112 ಮತ್ತು ಮಕ್ಕಳ ರಕ್ಷಣಾ ಘಟಕ 080-29560034 ಹಾಗೂ ಸಂಬಂಧಪಟ್ಟ ಹತ್ತಿರದ ಪೊಲೀಸ್ ಠಾಣೆಗೆ ದೂರು ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…