ಬಾಲ್ಯವಿವಾಹವು ಅನಾದಿ ಕಾಲದಿಂದ ನಡೆದು ಬಂದ ಅನಿಷ್ಟ ಪದ್ಧತಿಯಾಗಿದ್ದು, ಇದು 21ನೇ ಶತಮಾನದಲ್ಲೂ ಆಚರಣೆಯಲ್ಲಿರುವುದು ಶೋಚನೀಯ ಸಂಗತಿ.
ಏಪ್ರಿಲ್ 30 ರಂದು ಬಸವ ಜಯಂತಿ ಮತ್ತು ಅಕ್ಷಯ ತೃತೀಯ ದಿನವಾಗಿದ್ದು, ಬಾಲ್ಯವಿವಾಹ ಪ್ರಕರಣಗಳು ಹೆಚ್ಚು ನಡೆಯುವ ಸಾಧ್ಯತೆ ಹೆಚ್ಚಿದ್ದು,ಎಲ್ಲಾ ಬಾಲ್ಯವಿವಾಹ ನಿಷೇಧಾಧಿಕಾರಿಗಳು ಕಟ್ಟುನಿಟ್ಟಿನ ಕ್ರಮವಹಿಸುವಂತೆ ಜಿಲ್ಲಾಧಿಕಾರಿಗಳು ಬಸವರಾಜು ಎ ಬಿ ತಿಳಿಸಿದ್ದಾರೆ.
ಬಾಲ್ಯ ವಿವಾಹವೆಂದರೆ 18 ವರ್ಷದೊಳಗಿನ ಹುಡುಗಿ ಹಾಗೂ 21 ವರ್ಷದೊಳಗಿನ ಹುಡುಗನ ನಡುವೆ ನಡೆಯುವ ಮದುವೆ ಅಥವಾ ಇಬ್ಬರಲ್ಲಿ ಒಬ್ಬರು ನಿಗದಿತ ವಯಸ್ಸಿನೊಳಗಿದ್ದರು ಇಂತಹ ಮದುವೆಯನ್ನು ಬಾಲ್ಯವಿವಾಹ ಎಂದು ಪರಿಗಣಿಸಿ.
ಬಾಲ್ಯವಿವಾಹ ನಿಷೇಧ (ಕರ್ನಾಟಕ ತಿದ್ದುಪಡಿ) ಅಧಿನಿಯಮ -2016 ಪ್ರಕಾರ ಈ ಮದುವೆಯನ್ನು ಏರ್ಪಡಿಸಿದ ಪೋಷಕರು ಅಥವಾ ಪಾಲಕರು, 18 ವರ್ಷದೊಳಗಿನ ಹುಡುಗಿಯನ್ನು ಮದುವೆಯಾಗುವ ವಯಸ್ಕ ವ್ಯಕ್ತಿ ಮತ್ತು ಮದುವೆಯಲ್ಲಿ ಭಾಗವಹಿಸುವ ಎಲ್ಲಾ ರೀತಿಯಲ್ಲಿ ಸಹಕರಿಸಿದ ಕುಟುಂಬಸ್ಥರನ್ನು ಸಹ ತಪ್ಪಿತಸ್ಥರು ಎಂದು ಇವರುಗಳಿಗೆ ಮೇಲೆ ತಿಳಿಸಿದ ಕಾಯ್ದೆಯ ಪ್ರಕಾರ ಒಂದು ವರ್ಷಕ್ಕೆ ಕಡಿಮೆಯಿಲ್ಲದ ಅಂದರೆ ಎರಡು ವರ್ಷಗಳ ಕಾಲ ವಿಸ್ತರಿಸಬಹುದಾದ ಕಠಿಣ ಜೈಲು ಶಿಕ್ಷೆ ಅಥವಾ ಒಂದು ಲಕ್ಷ ರೂಪಾಯಿಗಳವರೆಗೆ ವಿಸ್ತರಿಸಬಹುದಾದ ಜುಲ್ಮಾನೆಗೆ ಅಥವಾ ಇವರೆಡರಿಂದಲು ಶಿಕ್ಷೆಗೆ ಒಳಪಡುತ್ತಾರೆ. ಈ ಕಾಯ್ದೆಯಡಿ ಪ್ರತಿಯೊಬ್ಬ ಪೊಲೀಸ್ ಅಧಿಕಾರಿಯು ತನ್ನ ಅಧಿಕಾರ ವ್ಯಾಪ್ತಿಯಡಿ ಬಾಲ್ಯವಿವಾಹ ಜರುಗುತ್ತಿರುವ ಮಾಹಿತಿ ಬಂದಾಗ ಸ್ವಪ್ರೇರಿತವಾಗಿ ದೂರು ದಾಖಲು ಮಾಡಲು ಅವಕಾಶವಿರುತ್ತದೆ.ಅದೇ ರೀತಿ ಇದು ಕೇವಲ ಸರ್ಕಾರಿ ಅಧಿಕಾರಿಗಳ ಜವಾಬ್ದಾರಿಯಾಗದೇ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿರುತ್ತದೆ.
ಬಾಲ್ಯವಿವಾಹ ನಿಷೇಧಾಧಿಕಾರಿಗಳು ತಮ್ಮ ಕಾರ್ಯವ್ಯಾಪ್ತಿಗೆ ಬರುವ ಧಾರ್ಮಿಕ ಸ್ಥಳಗಳಲ್ಲಿ ಮತ್ತು ಕಲ್ಯಾಣ ಮಂಟಪಗಳಲ್ಲಿ ಸಾಮೂಹಿಕ ಅಥವಾ ವೈಯಕ್ತಿಕ ವಿವಾಹದಲ್ಲಿ ಯಾವುದೇ ಬಾಲ್ಯವಿವಾಹಗಳು ಜರುಗದಂತೆ ಕ್ರಮವಹಿಸಬೇಕು.
ಜಿಲ್ಲೆಯಲ್ಲಿ ಬಾಲ್ಯವಿವಾಹ ನಡೆಯುತ್ತಿರುವುದು ಗಮನಕ್ಕೆ ಬಂದರೆ ತುರ್ತಾಗಿ ಮಕ್ಕಳ ಸಹಾಯವಾಣಿ 1098, ಪೊಲೀಸ್ ಸಹಾಯವಾಣಿ 112 ಮತ್ತು ಮಕ್ಕಳ ರಕ್ಷಣಾ ಘಟಕ 080-29560034 ಹಾಗೂ ಸಂಬಂಧಪಟ್ಟ ಹತ್ತಿರದ ಪೊಲೀಸ್ ಠಾಣೆಗೆ ದೂರು ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…