ಮೇ 10 ರಂದು ಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ ವಿವಾಹಗಳು ನಡೆಯುವ ಸಾಧ್ಯತೆ ಹೆಚ್ಚಾಗಿದ್ದು, ಇಂತಹ ವಿವಾಹಗಳಲ್ಲಿ ಬಾಲ್ಯವಿವಾಹಗಳು ನಡೆಯುವ ಸಾಧ್ಯತೆಯೂ ಸಹ ಹೆಚ್ಚಿರುತ್ತದೆ. ಈಗಾಗಲೇ ಶಾಲೆ ಬಿಟ್ಟ ಮಕ್ಕಳ ಅನುಸರಣೆ ಮಾಡಿ ಬಾಲ್ಯವಿವಾಹಕ್ಕೆ ಒಳಗಾಗದಂತೆ ಸೂಕ್ತ ಕ್ರಮಕೈಗೊಳ್ಳುವುದು. ಈ ಸಮಯದಲ್ಲಿ ಯಾವುದೇ ಬಾಲ್ಯವಿವಾಹಗಳು ನಡೆಯದಂತೆ ಸೂಕ್ತ ಮುನ್ನೆಚ್ಚರಿಕೆ ಕ್ರಮವಹಿಸಬೇಕು.
ಜಿಲ್ಲೆಯ ಸಾಮೂಹಿಕ ವಿವಾಹಗಳು ನಡೆಯಲು ಸಾಧ್ಯತೆಗಳಿರುವಂತಹ ಪ್ರಸಿದ್ದ ದೇವಸ್ಥಾನಗಳಾದ ದೊಡ್ಡಬಳ್ಳಾಪುರ ತಾಲ್ಲೂಕಿನ ಘಾಟಿ ಸುಬ್ರಮಣ್ಯ, ಮಧುರೆ ದೇವಸ್ಥಾನ, ನೆಲಮಂಗಲ ತಾಲ್ಲೂಕಿನ ಶಿವಗಂಗೆ, ದೇವಹಳ್ಳಿ ತಾಲ್ಲೂಕಿನ ತಿಮ್ಮರಾಯಸ್ವಾಮಿ ಬೆಟ್ಟ(ಅವತಿ) ಹಾಗೂ ಹೊಸಕೋಟೆ ತಾಲ್ಲೂಕಿನ ಶ್ರೀ ಕಾಳಬೈರವ ದೇವಸ್ಥಾನ ಜಡಿಗೇನಹಳ್ಳಿ, ಅನುಗೊಂಡನಹಳ್ಳಿಯ ಮದ್ದೂರಮ್ಮ ದೇವಸ್ಥಾನದ ಮುಖ್ಯಸ್ಥರಿಗೆ ಸಾಮೂಹಿಕ ವಿವಾಹಗಳಲ್ಲಿ ಹಾಗೂ ಕಲ್ಯಾಣ ಮಂಟಪಗಳಲ್ಲಿ ಯಾವುದೇ ಬಾಲ್ಯವಿವಾಹಗಳಿಗೆ ಅವಕಾಶ ಮಾಡಿಕೊಡಬಾರದೆಂದು ಬಾಲ್ಯವಿವಾಹ ಕಾಯ್ದೆಯ ಕುರಿತು ಅವರಿಗೆ ತಿಳಿಸಿ, ಅರಿವು ಮೂಡಿಸಬೇಕು.
ಎಲ್ಲಾ ವೃತ್ತದ ಮೇಲ್ವಿಚಾರಿಕಿಯವರಿಗೆ, ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಗೆ, ಆಯಾ ಗ್ರಾಮಗಳಲ್ಲಿ ಬಾಲ್ಯವಿವಾಹ ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…
ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…