ಮೇ 10 ರಂದು ಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ ವಿವಾಹಗಳು ನಡೆಯುವ ಸಾಧ್ಯತೆ ಹೆಚ್ಚಾಗಿದ್ದು, ಇಂತಹ ವಿವಾಹಗಳಲ್ಲಿ ಬಾಲ್ಯವಿವಾಹಗಳು ನಡೆಯುವ ಸಾಧ್ಯತೆಯೂ ಸಹ ಹೆಚ್ಚಿರುತ್ತದೆ. ಈಗಾಗಲೇ ಶಾಲೆ ಬಿಟ್ಟ ಮಕ್ಕಳ ಅನುಸರಣೆ ಮಾಡಿ ಬಾಲ್ಯವಿವಾಹಕ್ಕೆ ಒಳಗಾಗದಂತೆ ಸೂಕ್ತ ಕ್ರಮಕೈಗೊಳ್ಳುವುದು. ಈ ಸಮಯದಲ್ಲಿ ಯಾವುದೇ ಬಾಲ್ಯವಿವಾಹಗಳು ನಡೆಯದಂತೆ ಸೂಕ್ತ ಮುನ್ನೆಚ್ಚರಿಕೆ ಕ್ರಮವಹಿಸಬೇಕು.
ಜಿಲ್ಲೆಯ ಸಾಮೂಹಿಕ ವಿವಾಹಗಳು ನಡೆಯಲು ಸಾಧ್ಯತೆಗಳಿರುವಂತಹ ಪ್ರಸಿದ್ದ ದೇವಸ್ಥಾನಗಳಾದ ದೊಡ್ಡಬಳ್ಳಾಪುರ ತಾಲ್ಲೂಕಿನ ಘಾಟಿ ಸುಬ್ರಮಣ್ಯ, ಮಧುರೆ ದೇವಸ್ಥಾನ, ನೆಲಮಂಗಲ ತಾಲ್ಲೂಕಿನ ಶಿವಗಂಗೆ, ದೇವಹಳ್ಳಿ ತಾಲ್ಲೂಕಿನ ತಿಮ್ಮರಾಯಸ್ವಾಮಿ ಬೆಟ್ಟ(ಅವತಿ) ಹಾಗೂ ಹೊಸಕೋಟೆ ತಾಲ್ಲೂಕಿನ ಶ್ರೀ ಕಾಳಬೈರವ ದೇವಸ್ಥಾನ ಜಡಿಗೇನಹಳ್ಳಿ, ಅನುಗೊಂಡನಹಳ್ಳಿಯ ಮದ್ದೂರಮ್ಮ ದೇವಸ್ಥಾನದ ಮುಖ್ಯಸ್ಥರಿಗೆ ಸಾಮೂಹಿಕ ವಿವಾಹಗಳಲ್ಲಿ ಹಾಗೂ ಕಲ್ಯಾಣ ಮಂಟಪಗಳಲ್ಲಿ ಯಾವುದೇ ಬಾಲ್ಯವಿವಾಹಗಳಿಗೆ ಅವಕಾಶ ಮಾಡಿಕೊಡಬಾರದೆಂದು ಬಾಲ್ಯವಿವಾಹ ಕಾಯ್ದೆಯ ಕುರಿತು ಅವರಿಗೆ ತಿಳಿಸಿ, ಅರಿವು ಮೂಡಿಸಬೇಕು.
ಎಲ್ಲಾ ವೃತ್ತದ ಮೇಲ್ವಿಚಾರಿಕಿಯವರಿಗೆ, ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಗೆ, ಆಯಾ ಗ್ರಾಮಗಳಲ್ಲಿ ಬಾಲ್ಯವಿವಾಹ ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…