ಅಕ್ಷಯ ತೃತೀಯ ದಿನ ಬಾಲ್ಯವಿವಾಹ ನಡೆಯದಂತೆ ಮುಂಜಾಗ್ರತೆ ಕ್ರಮ ಕೈಗೊಳ್ಳಿ

ಮೇ 10 ರಂದು ಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ ವಿವಾಹಗಳು ನಡೆಯುವ ಸಾಧ್ಯತೆ ಹೆಚ್ಚಾಗಿದ್ದು, ಇಂತಹ ವಿವಾಹಗಳಲ್ಲಿ ಬಾಲ್ಯವಿವಾಹಗಳು ನಡೆಯುವ ಸಾಧ್ಯತೆಯೂ ಸಹ ಹೆಚ್ಚಿರುತ್ತದೆ. ಈಗಾಗಲೇ ಶಾಲೆ ಬಿಟ್ಟ ಮಕ್ಕಳ ಅನುಸರಣೆ ಮಾಡಿ ಬಾಲ್ಯವಿವಾಹಕ್ಕೆ ಒಳಗಾಗದಂತೆ ಸೂಕ್ತ ಕ್ರಮಕೈಗೊಳ್ಳುವುದು. ಈ ಸಮಯದಲ್ಲಿ ಯಾವುದೇ ಬಾಲ್ಯವಿವಾಹಗಳು ನಡೆಯದಂತೆ ಸೂಕ್ತ ಮುನ್ನೆಚ್ಚರಿಕೆ ಕ್ರಮವಹಿಸಬೇಕು.

ಜಿಲ್ಲೆಯ ಸಾಮೂಹಿಕ ವಿವಾಹಗಳು ನಡೆಯಲು ಸಾಧ್ಯತೆಗಳಿರುವಂತಹ ಪ್ರಸಿದ್ದ ದೇವಸ್ಥಾನಗಳಾದ ದೊಡ್ಡಬಳ್ಳಾಪುರ ತಾಲ್ಲೂಕಿನ ಘಾಟಿ ಸುಬ್ರಮಣ್ಯ, ಮಧುರೆ ದೇವಸ್ಥಾನ, ನೆಲಮಂಗಲ ತಾಲ್ಲೂಕಿನ ಶಿವಗಂಗೆ, ದೇವಹಳ್ಳಿ ತಾಲ್ಲೂಕಿನ ತಿಮ್ಮರಾಯಸ್ವಾಮಿ ಬೆಟ್ಟ(ಅವತಿ) ಹಾಗೂ ಹೊಸಕೋಟೆ ತಾಲ್ಲೂಕಿನ ಶ್ರೀ ಕಾಳಬೈರವ ದೇವಸ್ಥಾನ ಜಡಿಗೇನಹಳ್ಳಿ, ಅನುಗೊಂಡನಹಳ್ಳಿಯ ಮದ್ದೂರಮ್ಮ ದೇವಸ್ಥಾನದ ಮುಖ್ಯಸ್ಥರಿಗೆ ಸಾಮೂಹಿಕ ವಿವಾಹಗಳಲ್ಲಿ ಹಾಗೂ ಕಲ್ಯಾಣ ಮಂಟಪಗಳಲ್ಲಿ ಯಾವುದೇ ಬಾಲ್ಯವಿವಾಹಗಳಿಗೆ ಅವಕಾಶ ಮಾಡಿಕೊಡಬಾರದೆಂದು ಬಾಲ್ಯವಿವಾಹ ಕಾಯ್ದೆಯ ಕುರಿತು ಅವರಿಗೆ ತಿಳಿಸಿ, ಅರಿವು ಮೂಡಿಸಬೇಕು.

ಎಲ್ಲಾ ವೃತ್ತದ ಮೇಲ್ವಿಚಾರಿಕಿಯವರಿಗೆ, ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಗೆ, ಆಯಾ ಗ್ರಾಮಗಳಲ್ಲಿ ಬಾಲ್ಯವಿವಾಹ ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

‘ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು’

ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…

17 minutes ago

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

1 hour ago

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

7 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

19 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

19 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

20 hours ago