ಮೇ 10 ರಂದು ಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ ವಿವಾಹಗಳು ನಡೆಯುವ ಸಾಧ್ಯತೆ ಹೆಚ್ಚಾಗಿದ್ದು, ಇಂತಹ ವಿವಾಹಗಳಲ್ಲಿ ಬಾಲ್ಯವಿವಾಹಗಳು ನಡೆಯುವ ಸಾಧ್ಯತೆಯೂ ಸಹ ಹೆಚ್ಚಿರುತ್ತದೆ. ಈಗಾಗಲೇ ಶಾಲೆ ಬಿಟ್ಟ ಮಕ್ಕಳ ಅನುಸರಣೆ ಮಾಡಿ ಬಾಲ್ಯವಿವಾಹಕ್ಕೆ ಒಳಗಾಗದಂತೆ ಸೂಕ್ತ ಕ್ರಮಕೈಗೊಳ್ಳುವುದು. ಈ ಸಮಯದಲ್ಲಿ ಯಾವುದೇ ಬಾಲ್ಯವಿವಾಹಗಳು ನಡೆಯದಂತೆ ಸೂಕ್ತ ಮುನ್ನೆಚ್ಚರಿಕೆ ಕ್ರಮವಹಿಸಬೇಕು.
ಜಿಲ್ಲೆಯ ಸಾಮೂಹಿಕ ವಿವಾಹಗಳು ನಡೆಯಲು ಸಾಧ್ಯತೆಗಳಿರುವಂತಹ ಪ್ರಸಿದ್ದ ದೇವಸ್ಥಾನಗಳಾದ ದೊಡ್ಡಬಳ್ಳಾಪುರ ತಾಲ್ಲೂಕಿನ ಘಾಟಿ ಸುಬ್ರಮಣ್ಯ, ಮಧುರೆ ದೇವಸ್ಥಾನ, ನೆಲಮಂಗಲ ತಾಲ್ಲೂಕಿನ ಶಿವಗಂಗೆ, ದೇವಹಳ್ಳಿ ತಾಲ್ಲೂಕಿನ ತಿಮ್ಮರಾಯಸ್ವಾಮಿ ಬೆಟ್ಟ(ಅವತಿ) ಹಾಗೂ ಹೊಸಕೋಟೆ ತಾಲ್ಲೂಕಿನ ಶ್ರೀ ಕಾಳಬೈರವ ದೇವಸ್ಥಾನ ಜಡಿಗೇನಹಳ್ಳಿ, ಅನುಗೊಂಡನಹಳ್ಳಿಯ ಮದ್ದೂರಮ್ಮ ದೇವಸ್ಥಾನದ ಮುಖ್ಯಸ್ಥರಿಗೆ ಸಾಮೂಹಿಕ ವಿವಾಹಗಳಲ್ಲಿ ಹಾಗೂ ಕಲ್ಯಾಣ ಮಂಟಪಗಳಲ್ಲಿ ಯಾವುದೇ ಬಾಲ್ಯವಿವಾಹಗಳಿಗೆ ಅವಕಾಶ ಮಾಡಿಕೊಡಬಾರದೆಂದು ಬಾಲ್ಯವಿವಾಹ ಕಾಯ್ದೆಯ ಕುರಿತು ಅವರಿಗೆ ತಿಳಿಸಿ, ಅರಿವು ಮೂಡಿಸಬೇಕು.
ಎಲ್ಲಾ ವೃತ್ತದ ಮೇಲ್ವಿಚಾರಿಕಿಯವರಿಗೆ, ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಗೆ, ಆಯಾ ಗ್ರಾಮಗಳಲ್ಲಿ ಬಾಲ್ಯವಿವಾಹ ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…