ಅಕ್ಷಯ ತೃತೀಯ ದಿನ ಬಾಲ್ಯವಿವಾಹ ನಡೆಯದಂತೆ ಮುಂಜಾಗ್ರತೆ ಕ್ರಮ ಕೈಗೊಳ್ಳಿ

ಮೇ 10 ರಂದು ಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ ವಿವಾಹಗಳು ನಡೆಯುವ ಸಾಧ್ಯತೆ ಹೆಚ್ಚಾಗಿದ್ದು, ಇಂತಹ ವಿವಾಹಗಳಲ್ಲಿ ಬಾಲ್ಯವಿವಾಹಗಳು ನಡೆಯುವ ಸಾಧ್ಯತೆಯೂ ಸಹ ಹೆಚ್ಚಿರುತ್ತದೆ. ಈಗಾಗಲೇ ಶಾಲೆ ಬಿಟ್ಟ ಮಕ್ಕಳ ಅನುಸರಣೆ ಮಾಡಿ ಬಾಲ್ಯವಿವಾಹಕ್ಕೆ ಒಳಗಾಗದಂತೆ ಸೂಕ್ತ ಕ್ರಮಕೈಗೊಳ್ಳುವುದು. ಈ ಸಮಯದಲ್ಲಿ ಯಾವುದೇ ಬಾಲ್ಯವಿವಾಹಗಳು ನಡೆಯದಂತೆ ಸೂಕ್ತ ಮುನ್ನೆಚ್ಚರಿಕೆ ಕ್ರಮವಹಿಸಬೇಕು.

ಜಿಲ್ಲೆಯ ಸಾಮೂಹಿಕ ವಿವಾಹಗಳು ನಡೆಯಲು ಸಾಧ್ಯತೆಗಳಿರುವಂತಹ ಪ್ರಸಿದ್ದ ದೇವಸ್ಥಾನಗಳಾದ ದೊಡ್ಡಬಳ್ಳಾಪುರ ತಾಲ್ಲೂಕಿನ ಘಾಟಿ ಸುಬ್ರಮಣ್ಯ, ಮಧುರೆ ದೇವಸ್ಥಾನ, ನೆಲಮಂಗಲ ತಾಲ್ಲೂಕಿನ ಶಿವಗಂಗೆ, ದೇವಹಳ್ಳಿ ತಾಲ್ಲೂಕಿನ ತಿಮ್ಮರಾಯಸ್ವಾಮಿ ಬೆಟ್ಟ(ಅವತಿ) ಹಾಗೂ ಹೊಸಕೋಟೆ ತಾಲ್ಲೂಕಿನ ಶ್ರೀ ಕಾಳಬೈರವ ದೇವಸ್ಥಾನ ಜಡಿಗೇನಹಳ್ಳಿ, ಅನುಗೊಂಡನಹಳ್ಳಿಯ ಮದ್ದೂರಮ್ಮ ದೇವಸ್ಥಾನದ ಮುಖ್ಯಸ್ಥರಿಗೆ ಸಾಮೂಹಿಕ ವಿವಾಹಗಳಲ್ಲಿ ಹಾಗೂ ಕಲ್ಯಾಣ ಮಂಟಪಗಳಲ್ಲಿ ಯಾವುದೇ ಬಾಲ್ಯವಿವಾಹಗಳಿಗೆ ಅವಕಾಶ ಮಾಡಿಕೊಡಬಾರದೆಂದು ಬಾಲ್ಯವಿವಾಹ ಕಾಯ್ದೆಯ ಕುರಿತು ಅವರಿಗೆ ತಿಳಿಸಿ, ಅರಿವು ಮೂಡಿಸಬೇಕು.

ಎಲ್ಲಾ ವೃತ್ತದ ಮೇಲ್ವಿಚಾರಿಕಿಯವರಿಗೆ, ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಗೆ, ಆಯಾ ಗ್ರಾಮಗಳಲ್ಲಿ ಬಾಲ್ಯವಿವಾಹ ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

8 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

8 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

9 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

10 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

13 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

13 hours ago