ಅಕ್ಷರಾಭ್ಯಾಸ ಮೂಲಕ ಪ್ರಾಥಮಿಕ ಶಿಕ್ಷಣ ಆರಂಭಿಸಿದ ಪುಟಾಣಿಗಳು

ದೊಡ್ಡಬಳ್ಳಾಪುರ ತಾಲೂಕು ತೂಬಗೆರೆ ಹೋಬಳಿ ದುರ್ಗೆನಹಳ್ಳಿ ಬಳಿ ಇರುವ ನಂದಿ ಹಿಲ್ ವ್ಯೂ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಪ್ರಾಥಮಿಕ ಶಿಕ್ಷಣಕ್ಕೆ ದಾಖಲಾದ ವಿದ್ಯಾರ್ಥಿಗಳಿಗೆ ಅಕ್ಷರಾಭ್ಯಾಸ ಮಾಡಿಸಲಾಯಿತು.

ಕಾರ್ಯಕ್ರಮದಲ್ಲಿ ಗಣಪತಿ ಹೋಮ, ಶಾರದ ಪೂಜೆ ನಡೆಸಿ ಸಾಂಪ್ರದಾಯದಂತೆ ಮಕ್ಕಳಿಗೆ ಪೋಷಕರಿಂದ ಅಕ್ಷರಭ್ಯಾಸ ಮಾಡಿಸಲಾಯಿತು.

ಈ ವೇಳೆ ಶಾಲೆಯ ಕಾರ್ಯದರ್ಶಿ ಧನಂಜಯ ಮಾತನಾಡಿ, ಸಮಾಜದಲ್ಲಿ ಅಕ್ಷರಾಭ್ಯಾಸ ಕೆಲವೇ ವರ್ಗಗಳಿಗೆ ಸೀಮಿತವಾಗಿದ್ದು, ಶೃಂಗೇರಿ ಮಠ, ವಾರಣಾಸಿ, ವೈಷ್ಣೋದೇವಿ ದೇವಾಲಯಗಳಲ್ಲಿ ಮಾತ್ರ ಅಕ್ಷರಾಭ್ಯಾಸ ಮಾಡಲಾಗುತ್ತಿತ್ತು, ಕೆಲ ಪೋಷಕರು ಅಲ್ಲಿಗೆ ಹೋಗಿ ಅಕ್ಷರಾಭ್ಯಾಸ ಮಾಡಿಸುವುದು ಕಷ್ಟವಾಗಿತ್ತು, ಇದನ್ನು ಮನಗೊಂಡ ಅಧ್ಯಕ್ಷರು ಮತ್ತು ಕಾರ್ಯದರ್ಶಿ ಅವರು ಸಾಂಪ್ರದಾಯಬದ್ಧವಾಗಿ ಅಕ್ಷರಾಭ್ಯಾಸ ಮಾಡಿಸಲಾಗಿದೆ. ಇದಕ್ಕೆ ಪೋಷಕರು ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.

ನಂತರ ಶಾಲೆಯ ಅಧ್ಯಕ್ಷ ವರಲಕ್ಷಿ ಮಾತನಾಡಿ, ಶಾಲಾ ಹಂತದಲ್ಲಿ ಸಂಸ್ಕಾರ, ಸಂಸ್ಕೃತಿ ಹಾಗೂ ಮಾನವೀಯ ಮೌಲ್ಯಗಳು ರೂಢಿಸಿಕೊಳ್ಳುವುದು ಕೂಡ ಅಕ್ಷರಾಭ್ಯಾಸದ ಮೂಲ ಉದ್ದೇಶವಾಗಿದೆ. ಶಾಲೆಯಲ್ಲಿ ಗುರುಗಳ ಪಾಠ ಪ್ರವನಚನಗಳಿಂದ ಮಕ್ಕಳ ಅಭ್ಯುದಯವಾಗಲಿ ಎಂದು ಆಶಿಸಿದರು,

ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಭಾವನಾ, ಬಾಬು, ಶಿಕ್ಷಕ ವೃಂದದವರು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.

Ramesh Babu

Journalist

Recent Posts

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

1 hour ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

8 hours ago

ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಕಾಮಕಾಂಡ ಬಯಲು: ದೂರು ನೀಡಲು ಬಂದ ಮಹಿಳೆಯನ್ನೇ ಲೈಂಗಿಕವಾಗಿ ಬಳಸಿಕೊಳ್ಳಲು ಸಂಚು: ಸಂತ್ರಸ್ತೆಯ ಅಪ್ರಾಪ್ತ ಮಗಳಿಗೂ ಇನ್ಸ್‌ಪೆಕ್ಟರ್ ಬೆದರಿಕೆ ಆರೋಪ

ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…

9 hours ago

ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಮುಗಿಲು ಮುಟ್ಟಿದ ಕುಟುಂಬಸ್ಥರ ಅಳಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…

9 hours ago

ನೈತಿಕತೆ, ಸಾಹಿತ್ಯ ಮತ್ತು ಜ್ಞಾನಪೀಠ ಪ್ರಶಸ್ತಿ…

ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…

10 hours ago

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

22 hours ago