ಅಕ್ಷರಾಭ್ಯಾಸ ಮೂಲಕ ಪ್ರಾಥಮಿಕ ಶಿಕ್ಷಣ ಆರಂಭಿಸಿದ ಪುಟಾಣಿಗಳು

ದೊಡ್ಡಬಳ್ಳಾಪುರ ತಾಲೂಕು ತೂಬಗೆರೆ ಹೋಬಳಿ ದುರ್ಗೆನಹಳ್ಳಿ ಬಳಿ ಇರುವ ನಂದಿ ಹಿಲ್ ವ್ಯೂ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಪ್ರಾಥಮಿಕ ಶಿಕ್ಷಣಕ್ಕೆ ದಾಖಲಾದ ವಿದ್ಯಾರ್ಥಿಗಳಿಗೆ ಅಕ್ಷರಾಭ್ಯಾಸ ಮಾಡಿಸಲಾಯಿತು.

ಕಾರ್ಯಕ್ರಮದಲ್ಲಿ ಗಣಪತಿ ಹೋಮ, ಶಾರದ ಪೂಜೆ ನಡೆಸಿ ಸಾಂಪ್ರದಾಯದಂತೆ ಮಕ್ಕಳಿಗೆ ಪೋಷಕರಿಂದ ಅಕ್ಷರಭ್ಯಾಸ ಮಾಡಿಸಲಾಯಿತು.

ಈ ವೇಳೆ ಶಾಲೆಯ ಕಾರ್ಯದರ್ಶಿ ಧನಂಜಯ ಮಾತನಾಡಿ, ಸಮಾಜದಲ್ಲಿ ಅಕ್ಷರಾಭ್ಯಾಸ ಕೆಲವೇ ವರ್ಗಗಳಿಗೆ ಸೀಮಿತವಾಗಿದ್ದು, ಶೃಂಗೇರಿ ಮಠ, ವಾರಣಾಸಿ, ವೈಷ್ಣೋದೇವಿ ದೇವಾಲಯಗಳಲ್ಲಿ ಮಾತ್ರ ಅಕ್ಷರಾಭ್ಯಾಸ ಮಾಡಲಾಗುತ್ತಿತ್ತು, ಕೆಲ ಪೋಷಕರು ಅಲ್ಲಿಗೆ ಹೋಗಿ ಅಕ್ಷರಾಭ್ಯಾಸ ಮಾಡಿಸುವುದು ಕಷ್ಟವಾಗಿತ್ತು, ಇದನ್ನು ಮನಗೊಂಡ ಅಧ್ಯಕ್ಷರು ಮತ್ತು ಕಾರ್ಯದರ್ಶಿ ಅವರು ಸಾಂಪ್ರದಾಯಬದ್ಧವಾಗಿ ಅಕ್ಷರಾಭ್ಯಾಸ ಮಾಡಿಸಲಾಗಿದೆ. ಇದಕ್ಕೆ ಪೋಷಕರು ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.

ನಂತರ ಶಾಲೆಯ ಅಧ್ಯಕ್ಷ ವರಲಕ್ಷಿ ಮಾತನಾಡಿ, ಶಾಲಾ ಹಂತದಲ್ಲಿ ಸಂಸ್ಕಾರ, ಸಂಸ್ಕೃತಿ ಹಾಗೂ ಮಾನವೀಯ ಮೌಲ್ಯಗಳು ರೂಢಿಸಿಕೊಳ್ಳುವುದು ಕೂಡ ಅಕ್ಷರಾಭ್ಯಾಸದ ಮೂಲ ಉದ್ದೇಶವಾಗಿದೆ. ಶಾಲೆಯಲ್ಲಿ ಗುರುಗಳ ಪಾಠ ಪ್ರವನಚನಗಳಿಂದ ಮಕ್ಕಳ ಅಭ್ಯುದಯವಾಗಲಿ ಎಂದು ಆಶಿಸಿದರು,

ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಭಾವನಾ, ಬಾಬು, ಶಿಕ್ಷಕ ವೃಂದದವರು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.

Ramesh Babu

Journalist

Recent Posts

ಯುವಕರು ನೈತಿಕ ಮೌಲ್ಯಗಳನ್ನು ರೂಢಿಸಿಕೊಳ್ಳಬೇಕು- ವಕೀಲ ಬಿ. ಸುರೇಶ್ ಗೌಡ

ಯುವಕರು ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ವೈಯಕ್ತಿಕ ಬೆಳವಣಿಗೆಗೆ ಮಾತ್ರವಲ್ಲದೆ, ಆರೋಗ್ಯಕರ ಮತ್ತು ಸಮೃದ್ಧ ಸಮಾಜದ ನಿರ್ಮಾಣಕ್ಕೂ ಅತ್ಯಗತ್ಯವಾಗಿದೆ ಎಂದು ಹೈಕೋರ್ಟ್…

3 hours ago

ಕದನ ವಿರಾಮ…., ಕೊನೆಗೆ ಗೆಲ್ಲುವುದು ಹಿಂಸೆಯಲ್ಲ ಅಹಿಂಸೆ

ಕದನ ವಿರಾಮ...... ಯುದ್ಧ ವಿರಾಮ ಘೋಷಣೆಯಾಗಿದೆ. ಸಾವಿರಾರು ಜನರ ಹತ್ಯೆಗಳ ನಂತರ, ಅಪಾರ ಪ್ರಮಾಣದ ಭೂಪ್ರದೇಶ, ನೈಸರ್ಗಿಕ ಸಂಪನ್ಮೂಲಗಳು, ತೈಲ…

3 hours ago

ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ಕ್ರಮ – ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ

ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜಿನಲ್ಲಿ ಯಾವ ಲೋಪಗಳು ಉಂಟಾಗದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳುವ ಸಲುವಾಗಿ ರಾಜ್ಯದ ಎಲ್ಲ…

13 hours ago

14 ರಿಂದ 15 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ತಪ್ಪದೇ ಎಚ್.ಪಿ.ವಿ ಲಸಿಕೆ ಹಾಕಿಸಿ- ಡಿಸಿ ಅನುರಾಧ

ಗರ್ಭಕಂಠ ಕ್ಯಾನ್ಸರ್ ಬಾರದಂತೆ ತಡೆಯುವಲ್ಲಿ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್.ಪಿ.ವಿ) ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿದ್ದು 14 ರಿಂದ 15 ವರ್ಷದೊಳಗಿನ…

13 hours ago

ಕೃಷಿ ಹೊಂಡದಲ್ಲಿ ಈಜಲು ಹೋಗಿ 34 ವರ್ಷದ ವ್ಯಕ್ತಿ ಸಾವು

ಕೃಷಿ ಹೊಂಡದಲ್ಲಿ ಈಜಲು ಹೋಗಿ 34ವರ್ಷದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಲಿಂಗಾಪುರ ಗ್ರಾಮದಲ್ಲಿ ಇಂದು…

14 hours ago

ನಾಳೆ (ಏ.9ಕ್ಕೆ) ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಮಾ.9ರ ಗುರುವಾರ ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ…

17 hours ago