Categories: ಲೇಖನ

ಅಕ್ಷರ ಸಾಹಿತ್ಯ, ಅನುಭವ ಸಾಹಿತ್ಯ, ಅನುಭಾವ ಸಾಹಿತ್ಯ…..

ಅಕ್ಷರ ಸಾಹಿತ್ಯ……

ಅಕ್ಷರಗಳನ್ನು ಕಲಿತಿರುವ ಕಾರಣದಿಂದ ಏನಾದರೂ ಬರೆಯಬೇಕು ಎಂಬ ಹಂಬಲದಿಂದ ಬರೆಯುತ್ತಾ ಹೋಗುವುದು ಅಕ್ಷರ ಸಾಹಿತ್ಯ. ಇಲ್ಲಿ ಅಕ್ಷರಗಳದೇ ಪ್ರಾಬಲ್ಯ. ಅಕ್ಷರಗಳಿಂದಲೇ ಭಾವನೆಗಳನ್ನು, ಕಲ್ಪನೆಗಳನ್ನು, ಅನುಭವಗಳನ್ನು, ಮಾಹಿತಿಗಳನ್ನು ಇತ್ಯಾದಿ ಎಲ್ಲಾ ಪ್ರಕಾರದ ಬರಹಗಳನ್ನು ಮೂಡಿಸುತ್ತಾ ಹೋಗುವುದು. ತನಗೆ ತಿಳಿದಿರುವ ಅಥವಾ ತನ್ನ ಜ್ಞಾನದ ಮಿತಿಯಲ್ಲಿ ಬರೆಯುವುದು. ಇದರಲ್ಲಿ ಅಕ್ಷರದ ಅಥವಾ ಪದಗಳ ಲಾಲಿತ್ಯವೇ ಮೇಲುಗೈ ಪಡೆದಿರುತ್ತದೆ ಜೊತೆಗೆ ತನ್ನ ಬುದ್ದಿಯ ಪ್ರದರ್ಶನವೂ ಸೇರಿರುತ್ತದೆ. ನನ್ನ ವೈಯಕ್ತಿಕ ಅನಿಸಿಕೆಯ ಪ್ರಕಾರ ಇದರಲ್ಲಿ ಹೆಚ್ಚು ಜೀವ ಇರುವುದಿಲ್ಲ. ಒಣ ಅಥವಾ ಶುಷ್ಕ ವಾತಾವರಣದ ರೀತಿಯಲ್ಲಿ ಈ ಬರಹಗಳು ಇರುತ್ತವೆ. ಇದರಲ್ಲಿ ಹೆಚ್ಚು ಆಳವಾದ ಅಥವಾ ಅಧ್ಯಯನದ ಒಳ ಅರ್ಥಗಳು ಗೋಚರಿಸುವ ಸಾಧ್ಯತೆ ಕಡಿಮೆ. ನಿರೂಪಣೆಯೇ ಇಲ್ಲಿ ಹೆಚ್ಚು ಪ್ರಾಮುಖ್ಯತೆ ಪಡೆಯುತ್ತದೆ.

ಅನುಭವ ಸಾಹಿತ್ಯ……

ಅಕ್ಷರ ಜ್ಞಾನದ ಜೊತೆಗೆ ಬದುಕಿನ ಅನುಭವದ ಆಧಾರದ ಮೇಲೆ ಬರೆಯುವ ಪ್ರಕಾರ. ಅಂದರೆ ಇಲ್ಲಿ ಅನುಭವಗಳಿಗೆ ಅಕ್ಷರದ ರೂಪ ನೀಡುವುದು. ಒಂದಷ್ಟು ಅಧ್ಯಯನ ಚಿಂತನೆಗಳು ಇಲ್ಲಿ ಅಡಕವಾಗಿರುವ ಸಾಧ್ಯತೆ ಇರುತ್ತದೆ. ಬರೆಯುವ ತುಡಿತ ಹೆಚ್ಚಾಗಿರುತ್ತದೆ. ಆ ಅಕ್ಷರಗಳಲ್ಲಿ ಜೀವಂತಿಕೆಯ ಲಕ್ಷಣಗಳನ್ನು ಗುರುತಿಸಬಹುದು.

ಅಕ್ಷರಗಳಿಂದ ಅನುಭವದ ರೂಪ ಕೊಡುವುದಕ್ಕಿಂತ ಅನುಭವವನ್ನು ಅಕ್ಷರಗಳಲ್ಲಿ ಹಿಡಿದಿಡುವುದು ಸಾಹಿತ್ಯಿಕವಾಗಿ ಉತ್ತಮ ಗುಣಮಟ್ಟವನ್ನು ಮುಟ್ಟಲು ಸಾಧ್ಯವಾಗುತ್ತದೆ.

ಅನುಭಾವ ಸಾಹಿತ್ಯ…

” ರವಿ ಕಾಣದ್ದನ್ನು ಕವಿ ಕಂಡ ” ಎಂಬ ನಾಣ್ಣುಡಿಯನ್ನು ಇದು ನೆನಪಿಸುತ್ತದೆ. ಅಕ್ಷರ ಜ್ಞಾನದ ಜೊತೆಗೆ ಅನುಭವವೂ ಸೇರಿ ಅದರಿಂದ ಮೇಲೇರಿ ಇನ್ನಷ್ಟು ಆಳವನ್ನು ಹುಡುಕುತ್ತಾ ಒಳನೋಟಗಳನ್ನು, ವಿವಿಧ ಮುಖಗಳನ್ನು ಗ್ರಹಿಸುತ್ತ, ಬರೆಯುತ್ತಾ ಹೋಗುವುದು ಅನುಭಾವ ಸಾಹಿತ್ಯ ತುಂಬಾ ಸೂಕ್ಷ್ಮ ಮತ್ತು ದೂರ ದೃಷ್ಟಿ ಇದರಲ್ಲಿ ಸಿಗುತ್ತದೆ. ಅಧ್ಯಯನ ಮತ್ತು ಚಿಂತನೆಯೂ ಇಲ್ಲಿ ಅಡಕವಾಗಿರುತ್ತದೆ. ಇದರಲ್ಲಿ ಜೀವ ಮೈತುಂಬಿ ಹರಿಯುತ್ತದೆ..

ಬರಹಗಳಲ್ಲಿ ಸಹ ಗುಣಮಟ್ಟವನ್ನು ಅಳೆಯಬಹುದು. ಅನೇಕ ಬರಹಗಳು ಕಾಲದ ಅಗ್ನಿ ಪರೀಕ್ಷೆಯಲ್ಲಿ ಗೆದ್ದು ಈಗಲೂ ಪ್ರಸ್ತುತವಾಗಿ ಉಳಿದಿರುವುದಕ್ಕೆ ಕಾರಣ ಅವುಗಳ ಆಳದಲ್ಲಿ ಇರುವ ಅನುಭಾವ.

ಸಾಮಾಜಿಕ ಜಾಲತಾಣಗಳ ಬೆಳವಣಿಗೆಯೊಂದಿಗೆ ಅನೇಕ ಬರಹಗಾರರು ಸೃಷ್ಟಿಯಾಗಿದ್ದಾರೆ. ಸಾಹಿತ್ಯ ರಚಿಸಲು ಜನಸಾಮಾನ್ಯರಿಗೆ ಒಂದು ಅತ್ಯುತ್ತಮ ವೇದಿಕೆ ದೊರೆತಿದೆ.
ಆದರೆ ಅದು ಅಕ್ಷರ ಸಾಹಿತ್ಯ ದಾಟಿ ಅನುಭವ ‌ಸಾಹಿತ್ಯ ಮೀರಿ ಅನುಭಾವ ಸಾಹಿತ್ಯವಾಗಲಿ ಎಂಬುದು ಒಂದು ಆಶಯ.

ನಿಜವಾದ ಸಾಹಿತ್ಯ ಮಾನವೀಯತೆಯ ವಿಕಾಸವಾದದ ಕುರುಹುಗಳಾಗಿ ಉಳಿಯಬೇಕೇ ಹೊರತು ಶಿಕ್ಷಣ ಆಧಾರಿತ ಮಾನವೀಯ ಮೌಲ್ಯಗಳ ವಿನಾಶದ ಮಾರ್ಗವಾಗಬಾರದು………….
ಇದೊಂದು ಸರಳ ನಿರೂಪಣೆ. ಸಾಹಿತ್ಯದ‌ ಆಳ ಅಗಲಗಳು ಅನಂತ……..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

3 hours ago

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

4 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

6 hours ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

15 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

16 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

18 hours ago