Categories: ಲೇಖನ

ಅಕ್ಷರ ಸಾಹಿತ್ಯ, ಅನುಭವ ಸಾಹಿತ್ಯ, ಅನುಭಾವ ಸಾಹಿತ್ಯ…..

ಅಕ್ಷರ ಸಾಹಿತ್ಯ……

ಅಕ್ಷರಗಳನ್ನು ಕಲಿತಿರುವ ಕಾರಣದಿಂದ ಏನಾದರೂ ಬರೆಯಬೇಕು ಎಂಬ ಹಂಬಲದಿಂದ ಬರೆಯುತ್ತಾ ಹೋಗುವುದು ಅಕ್ಷರ ಸಾಹಿತ್ಯ. ಇಲ್ಲಿ ಅಕ್ಷರಗಳದೇ ಪ್ರಾಬಲ್ಯ. ಅಕ್ಷರಗಳಿಂದಲೇ ಭಾವನೆಗಳನ್ನು, ಕಲ್ಪನೆಗಳನ್ನು, ಅನುಭವಗಳನ್ನು, ಮಾಹಿತಿಗಳನ್ನು ಇತ್ಯಾದಿ ಎಲ್ಲಾ ಪ್ರಕಾರದ ಬರಹಗಳನ್ನು ಮೂಡಿಸುತ್ತಾ ಹೋಗುವುದು. ತನಗೆ ತಿಳಿದಿರುವ ಅಥವಾ ತನ್ನ ಜ್ಞಾನದ ಮಿತಿಯಲ್ಲಿ ಬರೆಯುವುದು. ಇದರಲ್ಲಿ ಅಕ್ಷರದ ಅಥವಾ ಪದಗಳ ಲಾಲಿತ್ಯವೇ ಮೇಲುಗೈ ಪಡೆದಿರುತ್ತದೆ ಜೊತೆಗೆ ತನ್ನ ಬುದ್ದಿಯ ಪ್ರದರ್ಶನವೂ ಸೇರಿರುತ್ತದೆ. ನನ್ನ ವೈಯಕ್ತಿಕ ಅನಿಸಿಕೆಯ ಪ್ರಕಾರ ಇದರಲ್ಲಿ ಹೆಚ್ಚು ಜೀವ ಇರುವುದಿಲ್ಲ. ಒಣ ಅಥವಾ ಶುಷ್ಕ ವಾತಾವರಣದ ರೀತಿಯಲ್ಲಿ ಈ ಬರಹಗಳು ಇರುತ್ತವೆ. ಇದರಲ್ಲಿ ಹೆಚ್ಚು ಆಳವಾದ ಅಥವಾ ಅಧ್ಯಯನದ ಒಳ ಅರ್ಥಗಳು ಗೋಚರಿಸುವ ಸಾಧ್ಯತೆ ಕಡಿಮೆ. ನಿರೂಪಣೆಯೇ ಇಲ್ಲಿ ಹೆಚ್ಚು ಪ್ರಾಮುಖ್ಯತೆ ಪಡೆಯುತ್ತದೆ.

ಅನುಭವ ಸಾಹಿತ್ಯ……

ಅಕ್ಷರ ಜ್ಞಾನದ ಜೊತೆಗೆ ಬದುಕಿನ ಅನುಭವದ ಆಧಾರದ ಮೇಲೆ ಬರೆಯುವ ಪ್ರಕಾರ. ಅಂದರೆ ಇಲ್ಲಿ ಅನುಭವಗಳಿಗೆ ಅಕ್ಷರದ ರೂಪ ನೀಡುವುದು. ಒಂದಷ್ಟು ಅಧ್ಯಯನ ಚಿಂತನೆಗಳು ಇಲ್ಲಿ ಅಡಕವಾಗಿರುವ ಸಾಧ್ಯತೆ ಇರುತ್ತದೆ. ಬರೆಯುವ ತುಡಿತ ಹೆಚ್ಚಾಗಿರುತ್ತದೆ. ಆ ಅಕ್ಷರಗಳಲ್ಲಿ ಜೀವಂತಿಕೆಯ ಲಕ್ಷಣಗಳನ್ನು ಗುರುತಿಸಬಹುದು.

ಅಕ್ಷರಗಳಿಂದ ಅನುಭವದ ರೂಪ ಕೊಡುವುದಕ್ಕಿಂತ ಅನುಭವವನ್ನು ಅಕ್ಷರಗಳಲ್ಲಿ ಹಿಡಿದಿಡುವುದು ಸಾಹಿತ್ಯಿಕವಾಗಿ ಉತ್ತಮ ಗುಣಮಟ್ಟವನ್ನು ಮುಟ್ಟಲು ಸಾಧ್ಯವಾಗುತ್ತದೆ.

ಅನುಭಾವ ಸಾಹಿತ್ಯ…

” ರವಿ ಕಾಣದ್ದನ್ನು ಕವಿ ಕಂಡ ” ಎಂಬ ನಾಣ್ಣುಡಿಯನ್ನು ಇದು ನೆನಪಿಸುತ್ತದೆ. ಅಕ್ಷರ ಜ್ಞಾನದ ಜೊತೆಗೆ ಅನುಭವವೂ ಸೇರಿ ಅದರಿಂದ ಮೇಲೇರಿ ಇನ್ನಷ್ಟು ಆಳವನ್ನು ಹುಡುಕುತ್ತಾ ಒಳನೋಟಗಳನ್ನು, ವಿವಿಧ ಮುಖಗಳನ್ನು ಗ್ರಹಿಸುತ್ತ, ಬರೆಯುತ್ತಾ ಹೋಗುವುದು ಅನುಭಾವ ಸಾಹಿತ್ಯ ತುಂಬಾ ಸೂಕ್ಷ್ಮ ಮತ್ತು ದೂರ ದೃಷ್ಟಿ ಇದರಲ್ಲಿ ಸಿಗುತ್ತದೆ. ಅಧ್ಯಯನ ಮತ್ತು ಚಿಂತನೆಯೂ ಇಲ್ಲಿ ಅಡಕವಾಗಿರುತ್ತದೆ. ಇದರಲ್ಲಿ ಜೀವ ಮೈತುಂಬಿ ಹರಿಯುತ್ತದೆ..

ಬರಹಗಳಲ್ಲಿ ಸಹ ಗುಣಮಟ್ಟವನ್ನು ಅಳೆಯಬಹುದು. ಅನೇಕ ಬರಹಗಳು ಕಾಲದ ಅಗ್ನಿ ಪರೀಕ್ಷೆಯಲ್ಲಿ ಗೆದ್ದು ಈಗಲೂ ಪ್ರಸ್ತುತವಾಗಿ ಉಳಿದಿರುವುದಕ್ಕೆ ಕಾರಣ ಅವುಗಳ ಆಳದಲ್ಲಿ ಇರುವ ಅನುಭಾವ.

ಸಾಮಾಜಿಕ ಜಾಲತಾಣಗಳ ಬೆಳವಣಿಗೆಯೊಂದಿಗೆ ಅನೇಕ ಬರಹಗಾರರು ಸೃಷ್ಟಿಯಾಗಿದ್ದಾರೆ. ಸಾಹಿತ್ಯ ರಚಿಸಲು ಜನಸಾಮಾನ್ಯರಿಗೆ ಒಂದು ಅತ್ಯುತ್ತಮ ವೇದಿಕೆ ದೊರೆತಿದೆ.
ಆದರೆ ಅದು ಅಕ್ಷರ ಸಾಹಿತ್ಯ ದಾಟಿ ಅನುಭವ ‌ಸಾಹಿತ್ಯ ಮೀರಿ ಅನುಭಾವ ಸಾಹಿತ್ಯವಾಗಲಿ ಎಂಬುದು ಒಂದು ಆಶಯ.

ನಿಜವಾದ ಸಾಹಿತ್ಯ ಮಾನವೀಯತೆಯ ವಿಕಾಸವಾದದ ಕುರುಹುಗಳಾಗಿ ಉಳಿಯಬೇಕೇ ಹೊರತು ಶಿಕ್ಷಣ ಆಧಾರಿತ ಮಾನವೀಯ ಮೌಲ್ಯಗಳ ವಿನಾಶದ ಮಾರ್ಗವಾಗಬಾರದು………….
ಇದೊಂದು ಸರಳ ನಿರೂಪಣೆ. ಸಾಹಿತ್ಯದ‌ ಆಳ ಅಗಲಗಳು ಅನಂತ……..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ನಾಳೆ (ಜು.29) ರಂದು ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬ: ಭಕ್ತರಿಗೆ ವಿಶೇಷ ಆಹ್ವಾನ: ವಿಶೇಷ ಪೂಜೆ, ಭಕ್ತರಿಗೆ ಭೋಜನೆ ವ್ಯವಸ್ಥೆ

ನಾಳೆ (ಜು.29) ರಂದು ದೊಡ್ಡಬಳ್ಳಾಪುರ ತಾಲೂಕಿನ ಪವಿತ್ರ ಹಾಗೂ ಪುಣ್ಯ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು…

5 hours ago

“ಉತ್ತರ ಕರ್ನಾಟಕದ ಗ್ರಾಮೀಣ ನಾಗರ ಪಂಚಮಿ: ಹೆಣ್ಮಕ್ಕಳ ಜೋಕಾಲಿ ಸಂಭ್ರಮ”

ಭಾರತೀಯರು ಹಬ್ಬ-ಹರಿದಿನಗಳ ಪ್ರಿಯರು ಒಂದೋದು ಹಬ್ಬಕ್ಕೆ ತನ್ನದೇಯಾದ ವೈಶಿಷ್ಟತೆಯನ್ನು ನೀಡುತ್ತಾ, ಭಕ್ತಿ-ಭಾವದಿಂದ ನೂರಾರು ತಲೆಮಾರುಗಳಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಅದರಲ್ಲಿ ಉತ್ತರ…

5 hours ago

ಗ್ರಾಪಂ ನೌಕರರ ಬೇಡಿಕೆಗಳ ಈಡೇರಿಕೆಗೆ ಜಿಪಂ ಮುಂದೆ ಪ್ರತಿಭಟನೆ

ಕೋಲಾರ: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಐಟಿಯು ನೇತೃತ್ವದ ಗ್ರಾಮ…

6 hours ago

RCB ಕಾಲ್ತುಳಿತ ಪ್ರಕರಣ: ಪೊಲಿಸ್ ಅಧಿಕಾರಿಗಳ ಅಮಾನತು ಆದೇಶ ಹಿಂಪಡೆದ ರಾಜ್ಯ ಸರ್ಕಾರ: ಅಚ್ಚರಿ ಹಾಗೂ ಚರ್ಚೆಗೆ ಗ್ರಾಸವಾದ ಸರ್ಕಾರದ ನಡೆ

ಜೂನ್ 4 ರಂದು ಐಪಿಎಲ್ ಟ್ರೋಫಿ ಗೆದ್ದ ಆರ್‌ಸಿಬಿ ತಂಡವನ್ನು ಅಭಿನಂದಿಸಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ವೇಳೆ ಕಾಲ್ತುಳಿತ…

6 hours ago

ದೇವಸ್ಥಾನದಲ್ಲಿ ಕಳ್ಳನ ಕೈಚಳಕ: ಬೈಕ್ ಸಮೇತ ಕಳ್ಳನ ಬಂಧನ

ಭಟ್ಕಳದ ಹೆಬಳೆ ತೆಂಗಿನಗುಂಡಿಯಲ್ಲಿರುವ ಶ್ರೀ ಬ್ರಹ್ಮಲಿಂಗೇಶ್ವರ ನಾಗದೇವತಾ ಪ್ರಸನ್ನ ದೇವಸ್ಥಾನದಲ್ಲಿ ಭಾನುವಾರ ಹಾಡುಹಗಲೇ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಭಟ್ಕಳ…

9 hours ago

ನೊಂದವರ ನೋವಾ ನೋಯದವರೆತ್ತ ಬಲ್ಲರೋ……

ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…

17 hours ago