ಅಕ್ಷರ ಸಾಹಿತ್ಯ……
ಅಕ್ಷರಗಳನ್ನು ಕಲಿತಿರುವ ಕಾರಣದಿಂದ ಏನಾದರೂ ಬರೆಯಬೇಕು ಎಂಬ ಹಂಬಲದಿಂದ ಬರೆಯುತ್ತಾ ಹೋಗುವುದು ಅಕ್ಷರ ಸಾಹಿತ್ಯ. ಇಲ್ಲಿ ಅಕ್ಷರಗಳದೇ ಪ್ರಾಬಲ್ಯ. ಅಕ್ಷರಗಳಿಂದಲೇ ಭಾವನೆಗಳನ್ನು, ಕಲ್ಪನೆಗಳನ್ನು, ಅನುಭವಗಳನ್ನು, ಮಾಹಿತಿಗಳನ್ನು ಇತ್ಯಾದಿ ಎಲ್ಲಾ ಪ್ರಕಾರದ ಬರಹಗಳನ್ನು ಮೂಡಿಸುತ್ತಾ ಹೋಗುವುದು. ತನಗೆ ತಿಳಿದಿರುವ ಅಥವಾ ತನ್ನ ಜ್ಞಾನದ ಮಿತಿಯಲ್ಲಿ ಬರೆಯುವುದು. ಇದರಲ್ಲಿ ಅಕ್ಷರದ ಅಥವಾ ಪದಗಳ ಲಾಲಿತ್ಯವೇ ಮೇಲುಗೈ ಪಡೆದಿರುತ್ತದೆ ಜೊತೆಗೆ ತನ್ನ ಬುದ್ದಿಯ ಪ್ರದರ್ಶನವೂ ಸೇರಿರುತ್ತದೆ. ನನ್ನ ವೈಯಕ್ತಿಕ ಅನಿಸಿಕೆಯ ಪ್ರಕಾರ ಇದರಲ್ಲಿ ಹೆಚ್ಚು ಜೀವ ಇರುವುದಿಲ್ಲ. ಒಣ ಅಥವಾ ಶುಷ್ಕ ವಾತಾವರಣದ ರೀತಿಯಲ್ಲಿ ಈ ಬರಹಗಳು ಇರುತ್ತವೆ. ಇದರಲ್ಲಿ ಹೆಚ್ಚು ಆಳವಾದ ಅಥವಾ ಅಧ್ಯಯನದ ಒಳ ಅರ್ಥಗಳು ಗೋಚರಿಸುವ ಸಾಧ್ಯತೆ ಕಡಿಮೆ. ನಿರೂಪಣೆಯೇ ಇಲ್ಲಿ ಹೆಚ್ಚು ಪ್ರಾಮುಖ್ಯತೆ ಪಡೆಯುತ್ತದೆ.
ಅನುಭವ ಸಾಹಿತ್ಯ……
ಅಕ್ಷರ ಜ್ಞಾನದ ಜೊತೆಗೆ ಬದುಕಿನ ಅನುಭವದ ಆಧಾರದ ಮೇಲೆ ಬರೆಯುವ ಪ್ರಕಾರ. ಅಂದರೆ ಇಲ್ಲಿ ಅನುಭವಗಳಿಗೆ ಅಕ್ಷರದ ರೂಪ ನೀಡುವುದು. ಒಂದಷ್ಟು ಅಧ್ಯಯನ ಚಿಂತನೆಗಳು ಇಲ್ಲಿ ಅಡಕವಾಗಿರುವ ಸಾಧ್ಯತೆ ಇರುತ್ತದೆ. ಬರೆಯುವ ತುಡಿತ ಹೆಚ್ಚಾಗಿರುತ್ತದೆ. ಆ ಅಕ್ಷರಗಳಲ್ಲಿ ಜೀವಂತಿಕೆಯ ಲಕ್ಷಣಗಳನ್ನು ಗುರುತಿಸಬಹುದು.
ಅಕ್ಷರಗಳಿಂದ ಅನುಭವದ ರೂಪ ಕೊಡುವುದಕ್ಕಿಂತ ಅನುಭವವನ್ನು ಅಕ್ಷರಗಳಲ್ಲಿ ಹಿಡಿದಿಡುವುದು ಸಾಹಿತ್ಯಿಕವಾಗಿ ಉತ್ತಮ ಗುಣಮಟ್ಟವನ್ನು ಮುಟ್ಟಲು ಸಾಧ್ಯವಾಗುತ್ತದೆ.
ಅನುಭಾವ ಸಾಹಿತ್ಯ…
” ರವಿ ಕಾಣದ್ದನ್ನು ಕವಿ ಕಂಡ ” ಎಂಬ ನಾಣ್ಣುಡಿಯನ್ನು ಇದು ನೆನಪಿಸುತ್ತದೆ. ಅಕ್ಷರ ಜ್ಞಾನದ ಜೊತೆಗೆ ಅನುಭವವೂ ಸೇರಿ ಅದರಿಂದ ಮೇಲೇರಿ ಇನ್ನಷ್ಟು ಆಳವನ್ನು ಹುಡುಕುತ್ತಾ ಒಳನೋಟಗಳನ್ನು, ವಿವಿಧ ಮುಖಗಳನ್ನು ಗ್ರಹಿಸುತ್ತ, ಬರೆಯುತ್ತಾ ಹೋಗುವುದು ಅನುಭಾವ ಸಾಹಿತ್ಯ ತುಂಬಾ ಸೂಕ್ಷ್ಮ ಮತ್ತು ದೂರ ದೃಷ್ಟಿ ಇದರಲ್ಲಿ ಸಿಗುತ್ತದೆ. ಅಧ್ಯಯನ ಮತ್ತು ಚಿಂತನೆಯೂ ಇಲ್ಲಿ ಅಡಕವಾಗಿರುತ್ತದೆ. ಇದರಲ್ಲಿ ಜೀವ ಮೈತುಂಬಿ ಹರಿಯುತ್ತದೆ..
ಬರಹಗಳಲ್ಲಿ ಸಹ ಗುಣಮಟ್ಟವನ್ನು ಅಳೆಯಬಹುದು. ಅನೇಕ ಬರಹಗಳು ಕಾಲದ ಅಗ್ನಿ ಪರೀಕ್ಷೆಯಲ್ಲಿ ಗೆದ್ದು ಈಗಲೂ ಪ್ರಸ್ತುತವಾಗಿ ಉಳಿದಿರುವುದಕ್ಕೆ ಕಾರಣ ಅವುಗಳ ಆಳದಲ್ಲಿ ಇರುವ ಅನುಭಾವ.
ಸಾಮಾಜಿಕ ಜಾಲತಾಣಗಳ ಬೆಳವಣಿಗೆಯೊಂದಿಗೆ ಅನೇಕ ಬರಹಗಾರರು ಸೃಷ್ಟಿಯಾಗಿದ್ದಾರೆ. ಸಾಹಿತ್ಯ ರಚಿಸಲು ಜನಸಾಮಾನ್ಯರಿಗೆ ಒಂದು ಅತ್ಯುತ್ತಮ ವೇದಿಕೆ ದೊರೆತಿದೆ.
ಆದರೆ ಅದು ಅಕ್ಷರ ಸಾಹಿತ್ಯ ದಾಟಿ ಅನುಭವ ಸಾಹಿತ್ಯ ಮೀರಿ ಅನುಭಾವ ಸಾಹಿತ್ಯವಾಗಲಿ ಎಂಬುದು ಒಂದು ಆಶಯ.
ನಿಜವಾದ ಸಾಹಿತ್ಯ ಮಾನವೀಯತೆಯ ವಿಕಾಸವಾದದ ಕುರುಹುಗಳಾಗಿ ಉಳಿಯಬೇಕೇ ಹೊರತು ಶಿಕ್ಷಣ ಆಧಾರಿತ ಮಾನವೀಯ ಮೌಲ್ಯಗಳ ವಿನಾಶದ ಮಾರ್ಗವಾಗಬಾರದು………….
ಇದೊಂದು ಸರಳ ನಿರೂಪಣೆ. ಸಾಹಿತ್ಯದ ಆಳ ಅಗಲಗಳು ಅನಂತ……..
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ
ಲೇಖಕ-ವಿವೇಕಾನಂದ. ಎಚ್. ಕೆ
ಫೆ.26ರಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ದ ಚಿಕ್ಕಮಧುರೆ ಶ್ರೀ ಶನಿಮಹಾತ್ಮಸ್ವಾಮಿಯ 71ನೇ ಬ್ರಹ್ಮರಥೋತ್ಸವವು ವಿಜೃಂಭಣೆಯಿಂದ ನೆರವೇರಲಿದೆ ಎಂದು ದೇವಾಲಯದ ಪ್ರಧಾನ ಅರ್ಚಕ…
ನೆಲಮಂಗಲದ ಜಿಂದಾಲ್ ಸಮೀಪ ನಡೆದ ಭೀಕರ ಅಪಘಾತದಲ್ಲಿ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ದುರ್ಮರಣಕ್ಕೀಡಾಗಿದ್ದಾರೆ. ಕಳೆದ ರಾತ್ರಿ 11 ಗಂಟೆಯ ಸುಮಾರಿಗೆ…
ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಶನಿವಾರದಂದು ನಡೆದ ಸೈನ್ಸ್ ಫೆಸ್ಟ್ ನಂತರ ಮಕ್ಕಳಿಗೆ ಮತ್ತು ಪೋಷಕರಿಗೆ ಮನರಂಜನೆ ಉಣಬಡಿಸುವ ಪ್ರಯುಕ್ತ ಮಧ್ಯಾಹ್ನ…
ನೆಲಮಂಗಲದ ಜಿಂದಾಲ್ ಸಮೀಪ ನಡೆದ ಭೀಕರ ಅಪಘಾತದಲ್ಲಿ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ದುರ್ಮರಣಕ್ಕೀಡಾಗಿದ್ದಾರೆ. ಕಳೆದ ರಾತ್ರಿ 12 ಗಂಟೆಯ ಸುಮಾರಿಗೆ…
ದೊಡ್ಡಬಳ್ಳಾಪುರ: ಶಿವರಾತ್ರಿ ಹಬ್ಬಕ್ಕೆಂದು ಮನೆಯ ಮುಂದೆ ರಂಗೋಲಿ ಬಿಡಿಸುತ್ತಿದ್ದ ಮಹಿಳೆಯ ಚಿನ್ನದ ಮಾಂಗಲ್ಯ ಸರ ಕಿತ್ತುಕೊಂಡು, ಸರ ಕಳ್ಳರು ಎಸ್ಕೇಪ್…
ಕೇಂದ್ರ ಟಿಬಿ ಡಿವಿಷನ್, ದೆಹಲಿಯಿಂದ ನಿಕ್ಷಯ ಮಿತ್ರ ಕಾರ್ಯಕ್ರಮದ ಪ್ರಗತಿ ವೀಕ್ಷಣೆಗಾಗಿ ತಾಂತ್ರಿಕ ಸಹಾಯ ತಂಡವು ದೊಡ್ಡಬಳ್ಳಾಪುರಕ್ಕೆ ಆಗಮಿಸಿ, ನಿಕ್ಷಯ…