Categories: ಲೇಖನ

ಅಕ್ಷರ ಸಾಹಿತ್ಯ, ಅನುಭವ ಸಾಹಿತ್ಯ, ಅನುಭಾವ ಸಾಹಿತ್ಯ…..

ಅಕ್ಷರ ಸಾಹಿತ್ಯ……

ಅಕ್ಷರಗಳನ್ನು ಕಲಿತಿರುವ ಕಾರಣದಿಂದ ಏನಾದರೂ ಬರೆಯಬೇಕು ಎಂಬ ಹಂಬಲದಿಂದ ಬರೆಯುತ್ತಾ ಹೋಗುವುದು ಅಕ್ಷರ ಸಾಹಿತ್ಯ. ಇಲ್ಲಿ ಅಕ್ಷರಗಳದೇ ಪ್ರಾಬಲ್ಯ. ಅಕ್ಷರಗಳಿಂದಲೇ ಭಾವನೆಗಳನ್ನು, ಕಲ್ಪನೆಗಳನ್ನು, ಅನುಭವಗಳನ್ನು, ಮಾಹಿತಿಗಳನ್ನು ಇತ್ಯಾದಿ ಎಲ್ಲಾ ಪ್ರಕಾರದ ಬರಹಗಳನ್ನು ಮೂಡಿಸುತ್ತಾ ಹೋಗುವುದು. ತನಗೆ ತಿಳಿದಿರುವ ಅಥವಾ ತನ್ನ ಜ್ಞಾನದ ಮಿತಿಯಲ್ಲಿ ಬರೆಯುವುದು. ಇದರಲ್ಲಿ ಅಕ್ಷರದ ಅಥವಾ ಪದಗಳ ಲಾಲಿತ್ಯವೇ ಮೇಲುಗೈ ಪಡೆದಿರುತ್ತದೆ ಜೊತೆಗೆ ತನ್ನ ಬುದ್ದಿಯ ಪ್ರದರ್ಶನವೂ ಸೇರಿರುತ್ತದೆ. ನನ್ನ ವೈಯಕ್ತಿಕ ಅನಿಸಿಕೆಯ ಪ್ರಕಾರ ಇದರಲ್ಲಿ ಹೆಚ್ಚು ಜೀವ ಇರುವುದಿಲ್ಲ. ಒಣ ಅಥವಾ ಶುಷ್ಕ ವಾತಾವರಣದ ರೀತಿಯಲ್ಲಿ ಈ ಬರಹಗಳು ಇರುತ್ತವೆ. ಇದರಲ್ಲಿ ಹೆಚ್ಚು ಆಳವಾದ ಅಥವಾ ಅಧ್ಯಯನದ ಒಳ ಅರ್ಥಗಳು ಗೋಚರಿಸುವ ಸಾಧ್ಯತೆ ಕಡಿಮೆ. ನಿರೂಪಣೆಯೇ ಇಲ್ಲಿ ಹೆಚ್ಚು ಪ್ರಾಮುಖ್ಯತೆ ಪಡೆಯುತ್ತದೆ.

ಅನುಭವ ಸಾಹಿತ್ಯ……

ಅಕ್ಷರ ಜ್ಞಾನದ ಜೊತೆಗೆ ಬದುಕಿನ ಅನುಭವದ ಆಧಾರದ ಮೇಲೆ ಬರೆಯುವ ಪ್ರಕಾರ. ಅಂದರೆ ಇಲ್ಲಿ ಅನುಭವಗಳಿಗೆ ಅಕ್ಷರದ ರೂಪ ನೀಡುವುದು. ಒಂದಷ್ಟು ಅಧ್ಯಯನ ಚಿಂತನೆಗಳು ಇಲ್ಲಿ ಅಡಕವಾಗಿರುವ ಸಾಧ್ಯತೆ ಇರುತ್ತದೆ. ಬರೆಯುವ ತುಡಿತ ಹೆಚ್ಚಾಗಿರುತ್ತದೆ. ಆ ಅಕ್ಷರಗಳಲ್ಲಿ ಜೀವಂತಿಕೆಯ ಲಕ್ಷಣಗಳನ್ನು ಗುರುತಿಸಬಹುದು.

ಅಕ್ಷರಗಳಿಂದ ಅನುಭವದ ರೂಪ ಕೊಡುವುದಕ್ಕಿಂತ ಅನುಭವವನ್ನು ಅಕ್ಷರಗಳಲ್ಲಿ ಹಿಡಿದಿಡುವುದು ಸಾಹಿತ್ಯಿಕವಾಗಿ ಉತ್ತಮ ಗುಣಮಟ್ಟವನ್ನು ಮುಟ್ಟಲು ಸಾಧ್ಯವಾಗುತ್ತದೆ.

ಅನುಭಾವ ಸಾಹಿತ್ಯ…

” ರವಿ ಕಾಣದ್ದನ್ನು ಕವಿ ಕಂಡ ” ಎಂಬ ನಾಣ್ಣುಡಿಯನ್ನು ಇದು ನೆನಪಿಸುತ್ತದೆ. ಅಕ್ಷರ ಜ್ಞಾನದ ಜೊತೆಗೆ ಅನುಭವವೂ ಸೇರಿ ಅದರಿಂದ ಮೇಲೇರಿ ಇನ್ನಷ್ಟು ಆಳವನ್ನು ಹುಡುಕುತ್ತಾ ಒಳನೋಟಗಳನ್ನು, ವಿವಿಧ ಮುಖಗಳನ್ನು ಗ್ರಹಿಸುತ್ತ, ಬರೆಯುತ್ತಾ ಹೋಗುವುದು ಅನುಭಾವ ಸಾಹಿತ್ಯ ತುಂಬಾ ಸೂಕ್ಷ್ಮ ಮತ್ತು ದೂರ ದೃಷ್ಟಿ ಇದರಲ್ಲಿ ಸಿಗುತ್ತದೆ. ಅಧ್ಯಯನ ಮತ್ತು ಚಿಂತನೆಯೂ ಇಲ್ಲಿ ಅಡಕವಾಗಿರುತ್ತದೆ. ಇದರಲ್ಲಿ ಜೀವ ಮೈತುಂಬಿ ಹರಿಯುತ್ತದೆ..

ಬರಹಗಳಲ್ಲಿ ಸಹ ಗುಣಮಟ್ಟವನ್ನು ಅಳೆಯಬಹುದು. ಅನೇಕ ಬರಹಗಳು ಕಾಲದ ಅಗ್ನಿ ಪರೀಕ್ಷೆಯಲ್ಲಿ ಗೆದ್ದು ಈಗಲೂ ಪ್ರಸ್ತುತವಾಗಿ ಉಳಿದಿರುವುದಕ್ಕೆ ಕಾರಣ ಅವುಗಳ ಆಳದಲ್ಲಿ ಇರುವ ಅನುಭಾವ.

ಸಾಮಾಜಿಕ ಜಾಲತಾಣಗಳ ಬೆಳವಣಿಗೆಯೊಂದಿಗೆ ಅನೇಕ ಬರಹಗಾರರು ಸೃಷ್ಟಿಯಾಗಿದ್ದಾರೆ. ಸಾಹಿತ್ಯ ರಚಿಸಲು ಜನಸಾಮಾನ್ಯರಿಗೆ ಒಂದು ಅತ್ಯುತ್ತಮ ವೇದಿಕೆ ದೊರೆತಿದೆ.
ಆದರೆ ಅದು ಅಕ್ಷರ ಸಾಹಿತ್ಯ ದಾಟಿ ಅನುಭವ ‌ಸಾಹಿತ್ಯ ಮೀರಿ ಅನುಭಾವ ಸಾಹಿತ್ಯವಾಗಲಿ ಎಂಬುದು ಒಂದು ಆಶಯ.

ನಿಜವಾದ ಸಾಹಿತ್ಯ ಮಾನವೀಯತೆಯ ವಿಕಾಸವಾದದ ಕುರುಹುಗಳಾಗಿ ಉಳಿಯಬೇಕೇ ಹೊರತು ಶಿಕ್ಷಣ ಆಧಾರಿತ ಮಾನವೀಯ ಮೌಲ್ಯಗಳ ವಿನಾಶದ ಮಾರ್ಗವಾಗಬಾರದು………….
ಇದೊಂದು ಸರಳ ನಿರೂಪಣೆ. ಸಾಹಿತ್ಯದ‌ ಆಳ ಅಗಲಗಳು ಅನಂತ……..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ: ಹೆಲ್ಮೆಟ್ ಧರಿಸದ ಕಾರಣ ಬೈಕ್ ಸವಾರ ದುರ್ಮರಣ

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…

13 hours ago

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರ ಸಾವು ಪ್ರಕರಣ: ಕತ್ತಲಲ್ಲಿ ಪ್ರಯಾಣಿಸುತ್ತಿದ್ದವರ ಬದುಕಲ್ಲಿ ಶಾಶ್ವತ ಕತ್ತಲು ಮೂಡಿಸಿದ ಜವರಾಯ: ಎಚ್ಚೆತ್ತ ನಗರಸಭೆ ಬೀದಿ ದೀಪ ಅಳವಡಿಕೆ

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…

14 hours ago

ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ…….

ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…

19 hours ago

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

2 days ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

2 days ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…

2 days ago