Categories: ಲೇಖನ

ಅಕ್ಷರ ಸಾಹಿತ್ಯ, ಅನುಭವ ಸಾಹಿತ್ಯ, ಅನುಭಾವ ಸಾಹಿತ್ಯ…..

ಅಕ್ಷರ ಸಾಹಿತ್ಯ……

ಅಕ್ಷರಗಳನ್ನು ಕಲಿತಿರುವ ಕಾರಣದಿಂದ ಏನಾದರೂ ಬರೆಯಬೇಕು ಎಂಬ ಹಂಬಲದಿಂದ ಬರೆಯುತ್ತಾ ಹೋಗುವುದು ಅಕ್ಷರ ಸಾಹಿತ್ಯ. ಇಲ್ಲಿ ಅಕ್ಷರಗಳದೇ ಪ್ರಾಬಲ್ಯ. ಅಕ್ಷರಗಳಿಂದಲೇ ಭಾವನೆಗಳನ್ನು, ಕಲ್ಪನೆಗಳನ್ನು, ಅನುಭವಗಳನ್ನು, ಮಾಹಿತಿಗಳನ್ನು ಇತ್ಯಾದಿ ಎಲ್ಲಾ ಪ್ರಕಾರದ ಬರಹಗಳನ್ನು ಮೂಡಿಸುತ್ತಾ ಹೋಗುವುದು. ತನಗೆ ತಿಳಿದಿರುವ ಅಥವಾ ತನ್ನ ಜ್ಞಾನದ ಮಿತಿಯಲ್ಲಿ ಬರೆಯುವುದು. ಇದರಲ್ಲಿ ಅಕ್ಷರದ ಅಥವಾ ಪದಗಳ ಲಾಲಿತ್ಯವೇ ಮೇಲುಗೈ ಪಡೆದಿರುತ್ತದೆ ಜೊತೆಗೆ ತನ್ನ ಬುದ್ದಿಯ ಪ್ರದರ್ಶನವೂ ಸೇರಿರುತ್ತದೆ. ನನ್ನ ವೈಯಕ್ತಿಕ ಅನಿಸಿಕೆಯ ಪ್ರಕಾರ ಇದರಲ್ಲಿ ಹೆಚ್ಚು ಜೀವ ಇರುವುದಿಲ್ಲ. ಒಣ ಅಥವಾ ಶುಷ್ಕ ವಾತಾವರಣದ ರೀತಿಯಲ್ಲಿ ಈ ಬರಹಗಳು ಇರುತ್ತವೆ. ಇದರಲ್ಲಿ ಹೆಚ್ಚು ಆಳವಾದ ಅಥವಾ ಅಧ್ಯಯನದ ಒಳ ಅರ್ಥಗಳು ಗೋಚರಿಸುವ ಸಾಧ್ಯತೆ ಕಡಿಮೆ. ನಿರೂಪಣೆಯೇ ಇಲ್ಲಿ ಹೆಚ್ಚು ಪ್ರಾಮುಖ್ಯತೆ ಪಡೆಯುತ್ತದೆ.

ಅನುಭವ ಸಾಹಿತ್ಯ……

ಅಕ್ಷರ ಜ್ಞಾನದ ಜೊತೆಗೆ ಬದುಕಿನ ಅನುಭವದ ಆಧಾರದ ಮೇಲೆ ಬರೆಯುವ ಪ್ರಕಾರ. ಅಂದರೆ ಇಲ್ಲಿ ಅನುಭವಗಳಿಗೆ ಅಕ್ಷರದ ರೂಪ ನೀಡುವುದು. ಒಂದಷ್ಟು ಅಧ್ಯಯನ ಚಿಂತನೆಗಳು ಇಲ್ಲಿ ಅಡಕವಾಗಿರುವ ಸಾಧ್ಯತೆ ಇರುತ್ತದೆ. ಬರೆಯುವ ತುಡಿತ ಹೆಚ್ಚಾಗಿರುತ್ತದೆ. ಆ ಅಕ್ಷರಗಳಲ್ಲಿ ಜೀವಂತಿಕೆಯ ಲಕ್ಷಣಗಳನ್ನು ಗುರುತಿಸಬಹುದು.

ಅಕ್ಷರಗಳಿಂದ ಅನುಭವದ ರೂಪ ಕೊಡುವುದಕ್ಕಿಂತ ಅನುಭವವನ್ನು ಅಕ್ಷರಗಳಲ್ಲಿ ಹಿಡಿದಿಡುವುದು ಸಾಹಿತ್ಯಿಕವಾಗಿ ಉತ್ತಮ ಗುಣಮಟ್ಟವನ್ನು ಮುಟ್ಟಲು ಸಾಧ್ಯವಾಗುತ್ತದೆ.

ಅನುಭಾವ ಸಾಹಿತ್ಯ…

” ರವಿ ಕಾಣದ್ದನ್ನು ಕವಿ ಕಂಡ ” ಎಂಬ ನಾಣ್ಣುಡಿಯನ್ನು ಇದು ನೆನಪಿಸುತ್ತದೆ. ಅಕ್ಷರ ಜ್ಞಾನದ ಜೊತೆಗೆ ಅನುಭವವೂ ಸೇರಿ ಅದರಿಂದ ಮೇಲೇರಿ ಇನ್ನಷ್ಟು ಆಳವನ್ನು ಹುಡುಕುತ್ತಾ ಒಳನೋಟಗಳನ್ನು, ವಿವಿಧ ಮುಖಗಳನ್ನು ಗ್ರಹಿಸುತ್ತ, ಬರೆಯುತ್ತಾ ಹೋಗುವುದು ಅನುಭಾವ ಸಾಹಿತ್ಯ ತುಂಬಾ ಸೂಕ್ಷ್ಮ ಮತ್ತು ದೂರ ದೃಷ್ಟಿ ಇದರಲ್ಲಿ ಸಿಗುತ್ತದೆ. ಅಧ್ಯಯನ ಮತ್ತು ಚಿಂತನೆಯೂ ಇಲ್ಲಿ ಅಡಕವಾಗಿರುತ್ತದೆ. ಇದರಲ್ಲಿ ಜೀವ ಮೈತುಂಬಿ ಹರಿಯುತ್ತದೆ..

ಬರಹಗಳಲ್ಲಿ ಸಹ ಗುಣಮಟ್ಟವನ್ನು ಅಳೆಯಬಹುದು. ಅನೇಕ ಬರಹಗಳು ಕಾಲದ ಅಗ್ನಿ ಪರೀಕ್ಷೆಯಲ್ಲಿ ಗೆದ್ದು ಈಗಲೂ ಪ್ರಸ್ತುತವಾಗಿ ಉಳಿದಿರುವುದಕ್ಕೆ ಕಾರಣ ಅವುಗಳ ಆಳದಲ್ಲಿ ಇರುವ ಅನುಭಾವ.

ಸಾಮಾಜಿಕ ಜಾಲತಾಣಗಳ ಬೆಳವಣಿಗೆಯೊಂದಿಗೆ ಅನೇಕ ಬರಹಗಾರರು ಸೃಷ್ಟಿಯಾಗಿದ್ದಾರೆ. ಸಾಹಿತ್ಯ ರಚಿಸಲು ಜನಸಾಮಾನ್ಯರಿಗೆ ಒಂದು ಅತ್ಯುತ್ತಮ ವೇದಿಕೆ ದೊರೆತಿದೆ.
ಆದರೆ ಅದು ಅಕ್ಷರ ಸಾಹಿತ್ಯ ದಾಟಿ ಅನುಭವ ‌ಸಾಹಿತ್ಯ ಮೀರಿ ಅನುಭಾವ ಸಾಹಿತ್ಯವಾಗಲಿ ಎಂಬುದು ಒಂದು ಆಶಯ.

ನಿಜವಾದ ಸಾಹಿತ್ಯ ಮಾನವೀಯತೆಯ ವಿಕಾಸವಾದದ ಕುರುಹುಗಳಾಗಿ ಉಳಿಯಬೇಕೇ ಹೊರತು ಶಿಕ್ಷಣ ಆಧಾರಿತ ಮಾನವೀಯ ಮೌಲ್ಯಗಳ ವಿನಾಶದ ಮಾರ್ಗವಾಗಬಾರದು………….
ಇದೊಂದು ಸರಳ ನಿರೂಪಣೆ. ಸಾಹಿತ್ಯದ‌ ಆಳ ಅಗಲಗಳು ಅನಂತ……..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಕೃಷಿ ಚಟುವಟಿಕೆಯಲ್ಲಿ ರೈತರು ಡಿಎಪಿ ಬದಲಿಗೆ ಸಂಯುಕ್ತ ರಸಗೊಬ್ಬರ ಬಳಕೆಗೆ ಕೃಷಿ ಇಲಾಖೆ ಸಲಹೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೃಷಿಚಟುವಟಿಕೆಗಳು ಬಿರುಸುಗೊಂಡಿದ್ದು, ರೈತರು ಡಿಎಪಿ ರಸಗೊಬ್ಬರ ಬದಲಿಗೆ ಸಂಯುಕ್ತ ರಸಗೊಬ್ಬರ ಬಳಕೆ ಮಾಡಲು ಕೃಷಿ ಇಲಾಖೆ…

34 minutes ago

KSRTC ಬಸ್-ಕಂಟೇನರ್ ಲಾರಿ ನಡುವೆ ಅಪಘಾತ; ಕೆಲವರಿಗೆ ಗಾಯ

ಹೊಸಕೋಟೆ: ಕೋಲಾರ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ KSRTC ಬಸ್ ಹಾಗೂ ಕಂಟೇನರ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ಹೊಸಕೋಟೆ ಸಮೀಪದ…

6 hours ago

ರಾಜ್ಯಸಭೆ, ಪರಿಷತ್ ಚುನಾವಣೆ: ಬಿಜೆಪಿ ಅಚ್ಚರಿ ನಿರ್ಧಾರ, ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ನಿರಾಕರಣೆ

ಬೆಂಗಳೂರು: 2026ರ ರಾಜ್ಯಸಭೆ ಹಾಗೂ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಪ್ರಕಟಿಸಿದ್ದು, ಕರ್ನಾಟಕದಿಂದ ರಾಜ್ಯಸಭೆಗೆ…

8 hours ago

ಅಳಬೇಡಿ ಸ್ವಾಮಿ ಅಳಬೇಡಿ, ದಯವಿಟ್ಟು ಅಳಬೇಡಿ, ಸ್ವಲ್ಪ ನಕ್ಕು ಬಿಡಿ…..

ನಾನು ವಿದ್ಯಾವಂತನಾಗಿರಲಿಲ್ಲ, ಅದರಿಂದಾಗಿ ಯಶಸ್ವಿಯಾಗಲಿಲ್ಲ. ನಾನು ಬುದ್ದಿವಂತನಾಗಿರಲಿಲ್ಲ, ಅದರಿಂದಾಗಿ ಜನಪ್ರಿಯನಾಗಲಿಲ್ಲ. ನಾನು ಪ್ರತಿಭಾವಂತನಾಗಿರಲಿಲ್ಲ, ಅದರಿಂದಾಗಿ ಪ್ರಖ್ಯಾತನಾಗಲಿಲ್ಲ. ನಾನು ಶ್ರೀಮಂತನಾಗಿರಲಿಲ್ಲ, ಅದರಿಂದಾಗಿ…

11 hours ago

ದೊಡ್ಡಬಳ್ಳಾಪುರ ಯೋಗಾ ಪ್ರತಿಭೆ, ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಪುರಸ್ಕೃತೆ ಜಾಹ್ನವಿ ಎಂ.ಆರ್ ಗೆ ಸನ್ಮಾನ

ಕರ್ನಾಟಕ ಸ್ಟೇಟ್ ಅಮೆಚೂರು ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಜೂ.6, 7ರಂದು ನಡೆದ ರಾಜ್ಯಮಟ್ಟದ…

23 hours ago

ತಡರಾತ್ರಿ ರೌಡಿ ಶೀಟರ್‌ ಬರ್ಬರ ಹತ್ಯೆ: ಸೂಲಿಬೆಲೆಯಲ್ಲಿ ಭೀಕರ ಘಟನೆ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ತಡರಾತ್ರಿ ರೌಡಿ ಶೀಟರ್‌ನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ…

1 day ago