Categories: ಕೋಲಾರ

ಅಖಂಡ ಭಾರತ ವಿನಾಯಕ ಮಹಾಸಭಾ ವತಿಯಿಂದ ನಗರದಲ್ಲಿ 11 ನೇ ವರ್ಷದ ಅದ್ಧೂರಿ ಗಣೇಶೋತ್ಸವ

ಕೋಲಾರ: ಜಿಲ್ಲೆಗೆ ಶಾಶ್ವತವಾದ ಶುದ್ದ ಕುಡಿಯುವ ನೀರಿಗಾಗಿ ಅಗ್ರಹಿಸಿ ಅಖಂಡ ಭಾರತ ವಿನಾಯಕ ಮಹಾಸಭಾ ವತಿಯಿಂದ 11ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮವು ಸೆ 7 ರಿಂದ 15 ರವರಗೆ 9 ದಿನಗಳ ಕಾಲ ವಿವಿಧ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಲಿದೆ ಎಂದು ಮಹಾಸಭಾದ ಸಂಸ್ಥಾಪಕ ಅಧ್ಯಕ್ಷ

ಓಂಶಕ್ತಿ ಚಲಪತಿ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನಗರದ ಜಿಲ್ಲಾ ಆಸ್ಪತ್ರೆಯ ಮುಂಭಾಗದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸುಮಾರು 20 ಅಡಿ ಎತ್ತರ 15 ಅಡಿ ಅಗಲದ ವಿಶೇಷವಾದ ಗಣೇಶೋತ್ಸವನ್ನು ಪ್ರತಿಷ್ಠಾಪನೆ ಮಾಡಲಾಗುತ್ತದೆ ಶನಿವಾರದಂದು ಪ್ರಾರಂಭವಾಗಿ ಸೆ.15 ರಂದು ವಿಸರ್ಜನೆ ಮೂಲಕ ಕೊನೆಗೊಳ್ಳುತ್ತದೆ 9 ದಿನಗಳು ವಿವಿಧ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಕಾರ್ಯಕ್ರಮಗಳು ಗಣೇಶೋತ್ಸವ ಭಾಗವಾಗಿ ಸಮಿತಿಯ ಸದಸ್ಯರು ನಡೆಸಿಕೊಡಲಿದ್ದಾರೆ ಎಂದರು.

ಗಣೇಶೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಾಮಿಡಿಯನ್ ಮಿಮಿಕ್ರಿ ಗೋಪಿ ಸೇರಿದಂತೆ ಮಜಾಭಾರತ ತಂಡ, ಗಾಯಕ ರಾಜೇಶ್ ಕೃಷ್ಣನ್, ಅಥವಾ ಹೇಮಂತ್ ಕುಮಾರ್ ಅವರು ಭಾಗವಹಹಿಸಲಿದ್ದಾರೆ ಬಂಗಾರಪೇಟೆ ವೃತ್ತದಿಂದ ಡೂಂಲೈಟ್ ವೃತ್ತದ ವರೆಗೂ ರಂಗೋಲಿ ಸ್ಪರ್ಧೆ ನಡೆಲಿದೆ ಕೊನೆಯ ದಿನ ನಗರದ ಎಂಜಿ ರಸ್ತೆ, ದೊಡ್ಡಪೇಟೆ, ಬ್ರಾಹ್ಮಣರ ಬೀದಿ ಹೊಸ ಬಸ್ ನಿಲ್ದಾಣ ಅಮ್ಮವಾರಿ ಪೇಟೆ ಕಾಲೇಜು ವೃತ್ತದ ಮಾರ್ಗವಾಗಿ ಕೋಲಾರಮ್ಮ ಕೆರೆಯಲ್ಲಿ ವಿಸರ್ಜನೆ ನಡೆಯಲಿದೆ ಮೆರವಣಿಗೆ ದಕ್ಷಿಣ ರಾಜ್ಯಗಳ ಕಲಾ ತಂಡಗಳು ಸೇರಿದಂತೆ ಸ್ಥಳೀಯ ಕಲಾ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.

ಕೋಲಾರ ಜಿಲ್ಲೆಯಲ್ಲಿ ಸಾಧನೆಯನ್ನು ಗುರುತಿಸಿ ಪೋತ್ಸಾಹಿಸುವ ಸಲುವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಗುತ್ತದೆ ಇದರಿಂದಾಗಿ ಬೇರೆಯವರು ಸಾಧನೆ ಮಾಡಲು ಪೇರಣೆಯಾಗುತ್ತದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು ‌

ಈ ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಮುಖಂಡರಾದ ಪಲ್ಲವಿ ಮಣಿ, ನಾಮಲ್ ಮಂಜು, ಸಾ.ಮಾ.ಅನಿಲ್‍ ಬಾಬು, ಗಂಗಮ್ಮನಪಾಳ್ಯ ಚಂದ್ರನ್, ಹರೀಷ್, ಬಾಲು , ಚಂದ್ರಶೇಖರ್, ಶಶಿಧರ್, ಸಂತೋಷ್, ಮುರಳಿ, ವಿನಾಯಕ ಮುಂತಾದವರು ಇದ್ದರು

Ramesh Babu

Journalist

Recent Posts

ಆಘಾತದಲ್ಲಿ ಮಡಿದ ಬೆಸ್ಕಾಂ ಸಿಬ್ಬಂದಿ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ ವಿತರಿಸಿದ ಇಂಧನ ಸಚಿವ ಜಾರ್ಜ್‌

ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್‌ ತಲಾ ಒಂದು ಕೋಟಿ ರೂ.…

3 hours ago

ಎಸ್ಮಾ ಜಾರಿ ಮಾಡಿದರೂ ಬಗ್ಗಲ್ಲ.. ಜಗ್ಗಲ್ಲ.. ಡಿಸಿಎಂ ಡಿಕೆಶಿಗೆ ಶಾಸಕ ಧೀರಜ್ ಮುನಿರಾಜು ಸವಾಲ್

ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ…

4 hours ago

ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ ಕಾಂಗ್ರೆಸ್ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್ ನಿಸಾರ್ ನೇಮಕ

ದೊಡ್ಡಬಳ್ಳಾಪುರ : ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ (ಇಂಟಕ್ ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್…

5 hours ago

ಅಂಗವಿಕಲ ಅಭ್ಯರ್ಥಿಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕಚೇರಿ, ಪೀಣ್ಯ, ಬೆಂಗಳೂರು 'ಅಧ್ಯಯನ ವೃತ್ತ' (ಸ್ಟಡಿ…

5 hours ago

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟ: 10 ಸಾವಿರ ಕಾಂಡೋಮ್ ಗಳು ಕೇವಲ 3 ದಿನದಲ್ಲಿ ಖಾಲಿ: ಇನ್ನೂ ಹೆಚ್ಚಿನ ಕಾಂಡೋಮ್ ಗಳು ಬೇಕು ಎಂಬ ಬೇಡಿಕೆ

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವವರಿಗಾಗಿ ಕ್ರೀಡಾಗ್ರಾಮದಲ್ಲಿ ಸರಬರಾಜು ಮಾಡಲಾಗಿದ್ದ ಬರೊಬ್ಬರಿ 10 ಸಾವಿರ ಕಾಂಡೋಮ್ ಗಳು ಕೇವಲ 3…

9 hours ago

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಬಿದ್ದು ಸಾ*ವು!

ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…

17 hours ago