Categories: ಕೋಲಾರ

ಅಖಂಡ ಭಾರತ ವಿನಾಯಕ ಮಹಾಸಭಾ ವತಿಯಿಂದ ನಗರದಲ್ಲಿ 11 ನೇ ವರ್ಷದ ಅದ್ಧೂರಿ ಗಣೇಶೋತ್ಸವ

ಕೋಲಾರ: ಜಿಲ್ಲೆಗೆ ಶಾಶ್ವತವಾದ ಶುದ್ದ ಕುಡಿಯುವ ನೀರಿಗಾಗಿ ಅಗ್ರಹಿಸಿ ಅಖಂಡ ಭಾರತ ವಿನಾಯಕ ಮಹಾಸಭಾ ವತಿಯಿಂದ 11ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮವು ಸೆ 7 ರಿಂದ 15 ರವರಗೆ 9 ದಿನಗಳ ಕಾಲ ವಿವಿಧ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಲಿದೆ ಎಂದು ಮಹಾಸಭಾದ ಸಂಸ್ಥಾಪಕ ಅಧ್ಯಕ್ಷ

ಓಂಶಕ್ತಿ ಚಲಪತಿ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನಗರದ ಜಿಲ್ಲಾ ಆಸ್ಪತ್ರೆಯ ಮುಂಭಾಗದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸುಮಾರು 20 ಅಡಿ ಎತ್ತರ 15 ಅಡಿ ಅಗಲದ ವಿಶೇಷವಾದ ಗಣೇಶೋತ್ಸವನ್ನು ಪ್ರತಿಷ್ಠಾಪನೆ ಮಾಡಲಾಗುತ್ತದೆ ಶನಿವಾರದಂದು ಪ್ರಾರಂಭವಾಗಿ ಸೆ.15 ರಂದು ವಿಸರ್ಜನೆ ಮೂಲಕ ಕೊನೆಗೊಳ್ಳುತ್ತದೆ 9 ದಿನಗಳು ವಿವಿಧ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಕಾರ್ಯಕ್ರಮಗಳು ಗಣೇಶೋತ್ಸವ ಭಾಗವಾಗಿ ಸಮಿತಿಯ ಸದಸ್ಯರು ನಡೆಸಿಕೊಡಲಿದ್ದಾರೆ ಎಂದರು.

ಗಣೇಶೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಾಮಿಡಿಯನ್ ಮಿಮಿಕ್ರಿ ಗೋಪಿ ಸೇರಿದಂತೆ ಮಜಾಭಾರತ ತಂಡ, ಗಾಯಕ ರಾಜೇಶ್ ಕೃಷ್ಣನ್, ಅಥವಾ ಹೇಮಂತ್ ಕುಮಾರ್ ಅವರು ಭಾಗವಹಹಿಸಲಿದ್ದಾರೆ ಬಂಗಾರಪೇಟೆ ವೃತ್ತದಿಂದ ಡೂಂಲೈಟ್ ವೃತ್ತದ ವರೆಗೂ ರಂಗೋಲಿ ಸ್ಪರ್ಧೆ ನಡೆಲಿದೆ ಕೊನೆಯ ದಿನ ನಗರದ ಎಂಜಿ ರಸ್ತೆ, ದೊಡ್ಡಪೇಟೆ, ಬ್ರಾಹ್ಮಣರ ಬೀದಿ ಹೊಸ ಬಸ್ ನಿಲ್ದಾಣ ಅಮ್ಮವಾರಿ ಪೇಟೆ ಕಾಲೇಜು ವೃತ್ತದ ಮಾರ್ಗವಾಗಿ ಕೋಲಾರಮ್ಮ ಕೆರೆಯಲ್ಲಿ ವಿಸರ್ಜನೆ ನಡೆಯಲಿದೆ ಮೆರವಣಿಗೆ ದಕ್ಷಿಣ ರಾಜ್ಯಗಳ ಕಲಾ ತಂಡಗಳು ಸೇರಿದಂತೆ ಸ್ಥಳೀಯ ಕಲಾ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.

ಕೋಲಾರ ಜಿಲ್ಲೆಯಲ್ಲಿ ಸಾಧನೆಯನ್ನು ಗುರುತಿಸಿ ಪೋತ್ಸಾಹಿಸುವ ಸಲುವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಗುತ್ತದೆ ಇದರಿಂದಾಗಿ ಬೇರೆಯವರು ಸಾಧನೆ ಮಾಡಲು ಪೇರಣೆಯಾಗುತ್ತದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು ‌

ಈ ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಮುಖಂಡರಾದ ಪಲ್ಲವಿ ಮಣಿ, ನಾಮಲ್ ಮಂಜು, ಸಾ.ಮಾ.ಅನಿಲ್‍ ಬಾಬು, ಗಂಗಮ್ಮನಪಾಳ್ಯ ಚಂದ್ರನ್, ಹರೀಷ್, ಬಾಲು , ಚಂದ್ರಶೇಖರ್, ಶಶಿಧರ್, ಸಂತೋಷ್, ಮುರಳಿ, ವಿನಾಯಕ ಮುಂತಾದವರು ಇದ್ದರು

Ramesh Babu

Journalist

Recent Posts

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

1 hour ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

7 hours ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

11 hours ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

14 hours ago

ಉಪೇಂದ್ರ ಮತ್ತು ಪ್ರಜಾಕೀಯ……..

ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…

1 day ago

ಗಾನಕೋಗಿಲೆ ಎಸ್. ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…

2 days ago