ಕೋಲಾರ: ಜಿಲ್ಲೆಗೆ ಶಾಶ್ವತವಾದ ಶುದ್ದ ಕುಡಿಯುವ ನೀರಿಗಾಗಿ ಅಗ್ರಹಿಸಿ ಅಖಂಡ ಭಾರತ ವಿನಾಯಕ ಮಹಾಸಭಾ ವತಿಯಿಂದ 11ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮವು ಸೆ 7 ರಿಂದ 15 ರವರಗೆ 9 ದಿನಗಳ ಕಾಲ ವಿವಿಧ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಲಿದೆ ಎಂದು ಮಹಾಸಭಾದ ಸಂಸ್ಥಾಪಕ ಅಧ್ಯಕ್ಷ
ಓಂಶಕ್ತಿ ಚಲಪತಿ ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನಗರದ ಜಿಲ್ಲಾ ಆಸ್ಪತ್ರೆಯ ಮುಂಭಾಗದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸುಮಾರು 20 ಅಡಿ ಎತ್ತರ 15 ಅಡಿ ಅಗಲದ ವಿಶೇಷವಾದ ಗಣೇಶೋತ್ಸವನ್ನು ಪ್ರತಿಷ್ಠಾಪನೆ ಮಾಡಲಾಗುತ್ತದೆ ಶನಿವಾರದಂದು ಪ್ರಾರಂಭವಾಗಿ ಸೆ.15 ರಂದು ವಿಸರ್ಜನೆ ಮೂಲಕ ಕೊನೆಗೊಳ್ಳುತ್ತದೆ 9 ದಿನಗಳು ವಿವಿಧ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಕಾರ್ಯಕ್ರಮಗಳು ಗಣೇಶೋತ್ಸವ ಭಾಗವಾಗಿ ಸಮಿತಿಯ ಸದಸ್ಯರು ನಡೆಸಿಕೊಡಲಿದ್ದಾರೆ ಎಂದರು.
ಗಣೇಶೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಾಮಿಡಿಯನ್ ಮಿಮಿಕ್ರಿ ಗೋಪಿ ಸೇರಿದಂತೆ ಮಜಾಭಾರತ ತಂಡ, ಗಾಯಕ ರಾಜೇಶ್ ಕೃಷ್ಣನ್, ಅಥವಾ ಹೇಮಂತ್ ಕುಮಾರ್ ಅವರು ಭಾಗವಹಹಿಸಲಿದ್ದಾರೆ ಬಂಗಾರಪೇಟೆ ವೃತ್ತದಿಂದ ಡೂಂಲೈಟ್ ವೃತ್ತದ ವರೆಗೂ ರಂಗೋಲಿ ಸ್ಪರ್ಧೆ ನಡೆಲಿದೆ ಕೊನೆಯ ದಿನ ನಗರದ ಎಂಜಿ ರಸ್ತೆ, ದೊಡ್ಡಪೇಟೆ, ಬ್ರಾಹ್ಮಣರ ಬೀದಿ ಹೊಸ ಬಸ್ ನಿಲ್ದಾಣ ಅಮ್ಮವಾರಿ ಪೇಟೆ ಕಾಲೇಜು ವೃತ್ತದ ಮಾರ್ಗವಾಗಿ ಕೋಲಾರಮ್ಮ ಕೆರೆಯಲ್ಲಿ ವಿಸರ್ಜನೆ ನಡೆಯಲಿದೆ ಮೆರವಣಿಗೆ ದಕ್ಷಿಣ ರಾಜ್ಯಗಳ ಕಲಾ ತಂಡಗಳು ಸೇರಿದಂತೆ ಸ್ಥಳೀಯ ಕಲಾ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.
ಕೋಲಾರ ಜಿಲ್ಲೆಯಲ್ಲಿ ಸಾಧನೆಯನ್ನು ಗುರುತಿಸಿ ಪೋತ್ಸಾಹಿಸುವ ಸಲುವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಗುತ್ತದೆ ಇದರಿಂದಾಗಿ ಬೇರೆಯವರು ಸಾಧನೆ ಮಾಡಲು ಪೇರಣೆಯಾಗುತ್ತದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು
ಈ ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಮುಖಂಡರಾದ ಪಲ್ಲವಿ ಮಣಿ, ನಾಮಲ್ ಮಂಜು, ಸಾ.ಮಾ.ಅನಿಲ್ ಬಾಬು, ಗಂಗಮ್ಮನಪಾಳ್ಯ ಚಂದ್ರನ್, ಹರೀಷ್, ಬಾಲು , ಚಂದ್ರಶೇಖರ್, ಶಶಿಧರ್, ಸಂತೋಷ್, ಮುರಳಿ, ವಿನಾಯಕ ಮುಂತಾದವರು ಇದ್ದರು
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…
ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…
ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…
ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…