ಕೋಲಾರ: ಜಿಲ್ಲೆಗೆ ಶಾಶ್ವತವಾದ ಶುದ್ದ ಕುಡಿಯುವ ನೀರಿಗಾಗಿ ಅಗ್ರಹಿಸಿ ಅಖಂಡ ಭಾರತ ವಿನಾಯಕ ಮಹಾಸಭಾ ವತಿಯಿಂದ 11ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮವು ಸೆ 7 ರಿಂದ 15 ರವರಗೆ 9 ದಿನಗಳ ಕಾಲ ವಿವಿಧ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಲಿದೆ ಎಂದು ಮಹಾಸಭಾದ ಸಂಸ್ಥಾಪಕ ಅಧ್ಯಕ್ಷ
ಓಂಶಕ್ತಿ ಚಲಪತಿ ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನಗರದ ಜಿಲ್ಲಾ ಆಸ್ಪತ್ರೆಯ ಮುಂಭಾಗದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸುಮಾರು 20 ಅಡಿ ಎತ್ತರ 15 ಅಡಿ ಅಗಲದ ವಿಶೇಷವಾದ ಗಣೇಶೋತ್ಸವನ್ನು ಪ್ರತಿಷ್ಠಾಪನೆ ಮಾಡಲಾಗುತ್ತದೆ ಶನಿವಾರದಂದು ಪ್ರಾರಂಭವಾಗಿ ಸೆ.15 ರಂದು ವಿಸರ್ಜನೆ ಮೂಲಕ ಕೊನೆಗೊಳ್ಳುತ್ತದೆ 9 ದಿನಗಳು ವಿವಿಧ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಕಾರ್ಯಕ್ರಮಗಳು ಗಣೇಶೋತ್ಸವ ಭಾಗವಾಗಿ ಸಮಿತಿಯ ಸದಸ್ಯರು ನಡೆಸಿಕೊಡಲಿದ್ದಾರೆ ಎಂದರು.
ಗಣೇಶೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಾಮಿಡಿಯನ್ ಮಿಮಿಕ್ರಿ ಗೋಪಿ ಸೇರಿದಂತೆ ಮಜಾಭಾರತ ತಂಡ, ಗಾಯಕ ರಾಜೇಶ್ ಕೃಷ್ಣನ್, ಅಥವಾ ಹೇಮಂತ್ ಕುಮಾರ್ ಅವರು ಭಾಗವಹಹಿಸಲಿದ್ದಾರೆ ಬಂಗಾರಪೇಟೆ ವೃತ್ತದಿಂದ ಡೂಂಲೈಟ್ ವೃತ್ತದ ವರೆಗೂ ರಂಗೋಲಿ ಸ್ಪರ್ಧೆ ನಡೆಲಿದೆ ಕೊನೆಯ ದಿನ ನಗರದ ಎಂಜಿ ರಸ್ತೆ, ದೊಡ್ಡಪೇಟೆ, ಬ್ರಾಹ್ಮಣರ ಬೀದಿ ಹೊಸ ಬಸ್ ನಿಲ್ದಾಣ ಅಮ್ಮವಾರಿ ಪೇಟೆ ಕಾಲೇಜು ವೃತ್ತದ ಮಾರ್ಗವಾಗಿ ಕೋಲಾರಮ್ಮ ಕೆರೆಯಲ್ಲಿ ವಿಸರ್ಜನೆ ನಡೆಯಲಿದೆ ಮೆರವಣಿಗೆ ದಕ್ಷಿಣ ರಾಜ್ಯಗಳ ಕಲಾ ತಂಡಗಳು ಸೇರಿದಂತೆ ಸ್ಥಳೀಯ ಕಲಾ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.
ಕೋಲಾರ ಜಿಲ್ಲೆಯಲ್ಲಿ ಸಾಧನೆಯನ್ನು ಗುರುತಿಸಿ ಪೋತ್ಸಾಹಿಸುವ ಸಲುವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಗುತ್ತದೆ ಇದರಿಂದಾಗಿ ಬೇರೆಯವರು ಸಾಧನೆ ಮಾಡಲು ಪೇರಣೆಯಾಗುತ್ತದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು
ಈ ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಮುಖಂಡರಾದ ಪಲ್ಲವಿ ಮಣಿ, ನಾಮಲ್ ಮಂಜು, ಸಾ.ಮಾ.ಅನಿಲ್ ಬಾಬು, ಗಂಗಮ್ಮನಪಾಳ್ಯ ಚಂದ್ರನ್, ಹರೀಷ್, ಬಾಲು , ಚಂದ್ರಶೇಖರ್, ಶಶಿಧರ್, ಸಂತೋಷ್, ಮುರಳಿ, ವಿನಾಯಕ ಮುಂತಾದವರು ಇದ್ದರು
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…