Categories: ಕೋಲಾರ

ಅಖಂಡ ಭಾರತ ವಿನಾಯಕ ಮಹಾಸಭಾ ವತಿಯಿಂದ ನಗರದಲ್ಲಿ 11 ನೇ ವರ್ಷದ ಅದ್ಧೂರಿ ಗಣೇಶೋತ್ಸವ

ಕೋಲಾರ: ಜಿಲ್ಲೆಗೆ ಶಾಶ್ವತವಾದ ಶುದ್ದ ಕುಡಿಯುವ ನೀರಿಗಾಗಿ ಅಗ್ರಹಿಸಿ ಅಖಂಡ ಭಾರತ ವಿನಾಯಕ ಮಹಾಸಭಾ ವತಿಯಿಂದ 11ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮವು ಸೆ 7 ರಿಂದ 15 ರವರಗೆ 9 ದಿನಗಳ ಕಾಲ ವಿವಿಧ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಲಿದೆ ಎಂದು ಮಹಾಸಭಾದ ಸಂಸ್ಥಾಪಕ ಅಧ್ಯಕ್ಷ

ಓಂಶಕ್ತಿ ಚಲಪತಿ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನಗರದ ಜಿಲ್ಲಾ ಆಸ್ಪತ್ರೆಯ ಮುಂಭಾಗದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸುಮಾರು 20 ಅಡಿ ಎತ್ತರ 15 ಅಡಿ ಅಗಲದ ವಿಶೇಷವಾದ ಗಣೇಶೋತ್ಸವನ್ನು ಪ್ರತಿಷ್ಠಾಪನೆ ಮಾಡಲಾಗುತ್ತದೆ ಶನಿವಾರದಂದು ಪ್ರಾರಂಭವಾಗಿ ಸೆ.15 ರಂದು ವಿಸರ್ಜನೆ ಮೂಲಕ ಕೊನೆಗೊಳ್ಳುತ್ತದೆ 9 ದಿನಗಳು ವಿವಿಧ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಕಾರ್ಯಕ್ರಮಗಳು ಗಣೇಶೋತ್ಸವ ಭಾಗವಾಗಿ ಸಮಿತಿಯ ಸದಸ್ಯರು ನಡೆಸಿಕೊಡಲಿದ್ದಾರೆ ಎಂದರು.

ಗಣೇಶೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಾಮಿಡಿಯನ್ ಮಿಮಿಕ್ರಿ ಗೋಪಿ ಸೇರಿದಂತೆ ಮಜಾಭಾರತ ತಂಡ, ಗಾಯಕ ರಾಜೇಶ್ ಕೃಷ್ಣನ್, ಅಥವಾ ಹೇಮಂತ್ ಕುಮಾರ್ ಅವರು ಭಾಗವಹಹಿಸಲಿದ್ದಾರೆ ಬಂಗಾರಪೇಟೆ ವೃತ್ತದಿಂದ ಡೂಂಲೈಟ್ ವೃತ್ತದ ವರೆಗೂ ರಂಗೋಲಿ ಸ್ಪರ್ಧೆ ನಡೆಲಿದೆ ಕೊನೆಯ ದಿನ ನಗರದ ಎಂಜಿ ರಸ್ತೆ, ದೊಡ್ಡಪೇಟೆ, ಬ್ರಾಹ್ಮಣರ ಬೀದಿ ಹೊಸ ಬಸ್ ನಿಲ್ದಾಣ ಅಮ್ಮವಾರಿ ಪೇಟೆ ಕಾಲೇಜು ವೃತ್ತದ ಮಾರ್ಗವಾಗಿ ಕೋಲಾರಮ್ಮ ಕೆರೆಯಲ್ಲಿ ವಿಸರ್ಜನೆ ನಡೆಯಲಿದೆ ಮೆರವಣಿಗೆ ದಕ್ಷಿಣ ರಾಜ್ಯಗಳ ಕಲಾ ತಂಡಗಳು ಸೇರಿದಂತೆ ಸ್ಥಳೀಯ ಕಲಾ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.

ಕೋಲಾರ ಜಿಲ್ಲೆಯಲ್ಲಿ ಸಾಧನೆಯನ್ನು ಗುರುತಿಸಿ ಪೋತ್ಸಾಹಿಸುವ ಸಲುವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಗುತ್ತದೆ ಇದರಿಂದಾಗಿ ಬೇರೆಯವರು ಸಾಧನೆ ಮಾಡಲು ಪೇರಣೆಯಾಗುತ್ತದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು ‌

ಈ ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಮುಖಂಡರಾದ ಪಲ್ಲವಿ ಮಣಿ, ನಾಮಲ್ ಮಂಜು, ಸಾ.ಮಾ.ಅನಿಲ್‍ ಬಾಬು, ಗಂಗಮ್ಮನಪಾಳ್ಯ ಚಂದ್ರನ್, ಹರೀಷ್, ಬಾಲು , ಚಂದ್ರಶೇಖರ್, ಶಶಿಧರ್, ಸಂತೋಷ್, ಮುರಳಿ, ವಿನಾಯಕ ಮುಂತಾದವರು ಇದ್ದರು

Ramesh Babu

Journalist

Recent Posts

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

4 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

10 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

11 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 days ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

2 days ago