ಕೋಲಾರ: ನಗರದ ಎಸ್ಸೆನ್ನಾರ್ ಆಸ್ಪತ್ರೆ ಮುಂಭಾಗ ಅಖಂಡ ಭಾರತ ವಿನಾಯಕ ಮಹಾಸಭಾ ವತಿಯಿಂದ ಶಾಶ್ವತ ಮತ್ತು ಶುದ್ಧ ನೀರಿಗಾಗಿ ಆಗ್ರಹಿಸಿ 11ನೇ ವರ್ಷದ ಅದ್ದೂರಿ ಗಣೇಶೋತ್ಸವವನ್ನು ಸಂಭ್ರಮದಿಂದ ಆಚರಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.
ನಗರದಲ್ಲಿರುವ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಓಂಶಕ್ತಿ ಚಲಪತಿ ಅವರ ಕಛೇರಿಯಲ್ಲಿ ಸಭೆ ಸೇರಿ ತೀರ್ಮಾನಿಸಿದ ಸಮಿತಿ ಮುಖಂಡರು ಪ್ರತಿ ವರ್ಷದಂತೆ ಈ ಬಾರಿಯೂ 9 ದಿನಗಳ ಕಾಲ ಅದ್ದೂರಿಯಾಗಿ ಆಚರಣೆ ನಡೆಸಬೇಕು ಇದಕ್ಕೆ ಮಹಾಸಭಾದ ಸದಸ್ಯರ ಸಹಕಾರ ಮುಖ್ಯವಾಗಿದೆ ಕಾರ್ಯಕ್ರಮವನ್ನು ಹೇಗೆ ಆಚರಣೆ ಮಾಡಬೇಕು ಎಂಬುದರ ಕುರಿತು ರೂಪರೇಷೆಗಳನ್ನು ಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯ ನಂತರ ಸಮಿತಿಯ ಮುಖಂಡ ಓಂಶಕ್ತಿ ಚಲಪತಿ ಮಾಹಿತಿ ನೀಡಿ ಅಖಂಡ ಭಾರತ ವಿನಾಯಕ ಮಹಾಸಭಾ ವತಿಯಿಂದ ಗಣೇಶೋತ್ಸವದಲ್ಲಿ ವಿವಿಧ ಕಾರ್ಯಕ್ರಮವನ್ನು ಪ್ರತಿ ವರ್ಷದಂತೆ ಈ ಬಾರಿಯೂ ಆಚರಣೆಗೆ ಸಮಿತಿ ತೀರ್ಮಾನಿಸಲಾಗಿದೆ 9 ದಿನಗಳ ಕಾಲ ನಡೆಯುವ ಗಣೇಶೋತ್ಸವದಲ್ಲಿ ಪ್ರಖ್ಯಾತ ಚಲನಚಿತ್ರ ನಟ ನಟಿಯರಿಂದ ಸಾಂಸ್ಕೃತಿಕ, ಸಂಗೀತೋತ್ಸವ, ನಗೆ ಹಬ್ಬದಂತಹ ಕಾರ್ಯಕ್ರಮಗಳು ಸೇರಿದಂತೆ ಕ್ರೀಡೆಯನ್ನು ಉತ್ತೇಜಿಸುವ ಸಲುವಾಗಿ ಕ್ರೀಡಾ ಚಟುವಟಿಕೆಗಳು ರಂಗೋಲಿ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗುತ್ತದೆ ಕೊನೆಯ ದಿನ ಆಂಧ್ರಪ್ರದೇಶ, ತಮಿಳುನಾಡು, ಕೇರಳ ಸೇರಿದಂತೆ ರಾಜ್ಯದಿಂದ ಜಾನಪದ ಕಲಾವಿದರಿಂದ ಚಂಡಿವಾಧ್ಯ, ತಮಟೆ, ನೃತ್ಯ ಕೀಲುಕುದುರೆಯೊಂದಿಗೆ ಅದ್ದೂರಿ ಮೆರವಣೆಗೆ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ವಿವರಿಸಿದರು.
ಸಭೆಯಲ್ಲಿ ಅಖಂಡ ಭಾರತ ವಿನಾಯಕ ಮಹಾಸಭಾ ಮುಖಂಡರಾದ ಸಾ.ಮಾ ಅನಿಲ್ ಬಾಬು, ನಾಮಲ್ ಮಂಜು, ಬಾಬು, ನಾಗ, ಎಬಿವಿಪಿ ಹರೀಷ್, ಸಂದೀಪ್, ಅಪ್ಪಿನಾರಾಯಣಸ್ವಾಮಿ, ಗಂಗಮ್ಮನಪಾಳ್ಯ ಚಂದ್ರನ್ ನವೀನ್, ಶಶಿಕುಮಾರ್, ಆಚಾರಿ ಕೇಶವ, ರವಿಕುಮಾರ್, ವಿನಯ್ ಮುಂತಾದವರು ಇದ್ದರು.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…