Categories: ಕೋಲಾರ

ಅಖಂಡ ಭಾರತ ವಿನಾಯಕ ಮಹಾಸಭಾ ವತಿಯಿಂದ ನಗರದಲ್ಲಿ 11ನೇ ವರ್ಷದ ಅದ್ಧೂರಿ ಗಣೇಶೋತ್ಸವಕ್ಕೆ ಸಿದ್ಧತೆ

ಕೋಲಾರ: ನಗರದ ಎಸ್ಸೆನ್ನಾರ್ ಆಸ್ಪತ್ರೆ ಮುಂಭಾಗ ಅಖಂಡ ಭಾರತ ವಿನಾಯಕ ಮಹಾಸಭಾ ವತಿಯಿಂದ ಶಾಶ್ವತ ಮತ್ತು ಶುದ್ಧ ನೀರಿಗಾಗಿ ಆಗ್ರಹಿಸಿ 11ನೇ ವರ್ಷದ ಅದ್ದೂರಿ ಗಣೇಶೋತ್ಸವವನ್ನು ಸಂಭ್ರಮದಿಂದ ಆಚರಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.

ನಗರದಲ್ಲಿರುವ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಓಂಶಕ್ತಿ ಚಲಪತಿ ಅವರ ಕಛೇರಿಯಲ್ಲಿ ಸಭೆ ಸೇರಿ ತೀರ್ಮಾನಿಸಿದ ಸಮಿತಿ ಮುಖಂಡರು ಪ್ರತಿ ವರ್ಷದಂತೆ ಈ ಬಾರಿಯೂ 9 ದಿನಗಳ ಕಾಲ ಅದ್ದೂರಿಯಾಗಿ ಆಚರಣೆ ನಡೆಸಬೇಕು ಇದಕ್ಕೆ ಮಹಾಸಭಾದ ಸದಸ್ಯರ ಸಹಕಾರ ಮುಖ್ಯವಾಗಿದೆ ಕಾರ್ಯಕ್ರಮವನ್ನು ಹೇಗೆ ಆಚರಣೆ ಮಾಡಬೇಕು ಎಂಬುದರ ಕುರಿತು ರೂಪರೇಷೆಗಳನ್ನು ಸಭೆಯಲ್ಲಿ ಚರ್ಚಿಸಲಾಯಿತು.

ಸಭೆಯ ನಂತರ ಸಮಿತಿಯ ಮುಖಂಡ ಓಂಶಕ್ತಿ ಚಲಪತಿ ಮಾಹಿತಿ ನೀಡಿ ಅಖಂಡ ಭಾರತ ವಿನಾಯಕ ಮಹಾಸಭಾ ವತಿಯಿಂದ ಗಣೇಶೋತ್ಸವದಲ್ಲಿ ವಿವಿಧ ಕಾರ್ಯಕ್ರಮವನ್ನು ಪ್ರತಿ ವರ್ಷದಂತೆ ಈ ಬಾರಿಯೂ ಆಚರಣೆಗೆ ಸಮಿತಿ ತೀರ್ಮಾನಿಸಲಾಗಿದೆ 9 ದಿನಗಳ ಕಾಲ ನಡೆಯುವ ಗಣೇಶೋತ್ಸವದಲ್ಲಿ ಪ್ರಖ್ಯಾತ ಚಲನಚಿತ್ರ ನಟ ನಟಿಯರಿಂದ ಸಾಂಸ್ಕೃತಿಕ, ಸಂಗೀತೋತ್ಸವ, ನಗೆ ಹಬ್ಬದಂತಹ ಕಾರ್ಯಕ್ರಮಗಳು ಸೇರಿದಂತೆ ಕ್ರೀಡೆಯನ್ನು ಉತ್ತೇಜಿಸುವ ಸಲುವಾಗಿ ಕ್ರೀಡಾ ಚಟುವಟಿಕೆಗಳು ರಂಗೋಲಿ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗುತ್ತದೆ ಕೊನೆಯ ದಿನ ಆಂಧ್ರಪ್ರದೇಶ, ತಮಿಳುನಾಡು, ಕೇರಳ ಸೇರಿದಂತೆ ರಾಜ್ಯದಿಂದ ಜಾನಪದ ಕಲಾವಿದರಿಂದ ಚಂಡಿವಾಧ್ಯ, ತಮಟೆ, ನೃತ್ಯ ಕೀಲುಕುದುರೆಯೊಂದಿಗೆ ಅದ್ದೂರಿ ಮೆರವಣೆಗೆ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ವಿವರಿಸಿದರು.

ಸಭೆಯಲ್ಲಿ ಅಖಂಡ ಭಾರತ ವಿನಾಯಕ ಮಹಾಸಭಾ ಮುಖಂಡರಾದ ಸಾ.ಮಾ ಅನಿಲ್ ಬಾಬು, ನಾಮಲ್ ಮಂಜು, ಬಾಬು, ನಾಗ, ಎಬಿವಿಪಿ ಹರೀಷ್, ಸಂದೀಪ್, ಅಪ್ಪಿನಾರಾಯಣಸ್ವಾಮಿ, ಗಂಗಮ್ಮನಪಾಳ್ಯ ಚಂದ್ರನ್ ನವೀನ್, ಶಶಿಕುಮಾರ್, ಆಚಾರಿ ಕೇಶವ, ರವಿಕುಮಾರ್, ವಿನಯ್ ಮುಂತಾದವರು ಇದ್ದರು.

Ramesh Babu

Journalist

Recent Posts

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

2 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

9 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

22 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

23 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

1 day ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

1 day ago