Categories: ಕೋಲಾರ

ಅಖಂಡ ಭಾರತ ವಿನಾಯಕ ಮಹಾಸಭಾ ವತಿಯಿಂದ ನಗರದಲ್ಲಿ 11ನೇ ವರ್ಷದ ಅದ್ಧೂರಿ ಗಣೇಶೋತ್ಸವಕ್ಕೆ ಸಿದ್ಧತೆ

ಕೋಲಾರ: ನಗರದ ಎಸ್ಸೆನ್ನಾರ್ ಆಸ್ಪತ್ರೆ ಮುಂಭಾಗ ಅಖಂಡ ಭಾರತ ವಿನಾಯಕ ಮಹಾಸಭಾ ವತಿಯಿಂದ ಶಾಶ್ವತ ಮತ್ತು ಶುದ್ಧ ನೀರಿಗಾಗಿ ಆಗ್ರಹಿಸಿ 11ನೇ ವರ್ಷದ ಅದ್ದೂರಿ ಗಣೇಶೋತ್ಸವವನ್ನು ಸಂಭ್ರಮದಿಂದ ಆಚರಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.

ನಗರದಲ್ಲಿರುವ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಓಂಶಕ್ತಿ ಚಲಪತಿ ಅವರ ಕಛೇರಿಯಲ್ಲಿ ಸಭೆ ಸೇರಿ ತೀರ್ಮಾನಿಸಿದ ಸಮಿತಿ ಮುಖಂಡರು ಪ್ರತಿ ವರ್ಷದಂತೆ ಈ ಬಾರಿಯೂ 9 ದಿನಗಳ ಕಾಲ ಅದ್ದೂರಿಯಾಗಿ ಆಚರಣೆ ನಡೆಸಬೇಕು ಇದಕ್ಕೆ ಮಹಾಸಭಾದ ಸದಸ್ಯರ ಸಹಕಾರ ಮುಖ್ಯವಾಗಿದೆ ಕಾರ್ಯಕ್ರಮವನ್ನು ಹೇಗೆ ಆಚರಣೆ ಮಾಡಬೇಕು ಎಂಬುದರ ಕುರಿತು ರೂಪರೇಷೆಗಳನ್ನು ಸಭೆಯಲ್ಲಿ ಚರ್ಚಿಸಲಾಯಿತು.

ಸಭೆಯ ನಂತರ ಸಮಿತಿಯ ಮುಖಂಡ ಓಂಶಕ್ತಿ ಚಲಪತಿ ಮಾಹಿತಿ ನೀಡಿ ಅಖಂಡ ಭಾರತ ವಿನಾಯಕ ಮಹಾಸಭಾ ವತಿಯಿಂದ ಗಣೇಶೋತ್ಸವದಲ್ಲಿ ವಿವಿಧ ಕಾರ್ಯಕ್ರಮವನ್ನು ಪ್ರತಿ ವರ್ಷದಂತೆ ಈ ಬಾರಿಯೂ ಆಚರಣೆಗೆ ಸಮಿತಿ ತೀರ್ಮಾನಿಸಲಾಗಿದೆ 9 ದಿನಗಳ ಕಾಲ ನಡೆಯುವ ಗಣೇಶೋತ್ಸವದಲ್ಲಿ ಪ್ರಖ್ಯಾತ ಚಲನಚಿತ್ರ ನಟ ನಟಿಯರಿಂದ ಸಾಂಸ್ಕೃತಿಕ, ಸಂಗೀತೋತ್ಸವ, ನಗೆ ಹಬ್ಬದಂತಹ ಕಾರ್ಯಕ್ರಮಗಳು ಸೇರಿದಂತೆ ಕ್ರೀಡೆಯನ್ನು ಉತ್ತೇಜಿಸುವ ಸಲುವಾಗಿ ಕ್ರೀಡಾ ಚಟುವಟಿಕೆಗಳು ರಂಗೋಲಿ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗುತ್ತದೆ ಕೊನೆಯ ದಿನ ಆಂಧ್ರಪ್ರದೇಶ, ತಮಿಳುನಾಡು, ಕೇರಳ ಸೇರಿದಂತೆ ರಾಜ್ಯದಿಂದ ಜಾನಪದ ಕಲಾವಿದರಿಂದ ಚಂಡಿವಾಧ್ಯ, ತಮಟೆ, ನೃತ್ಯ ಕೀಲುಕುದುರೆಯೊಂದಿಗೆ ಅದ್ದೂರಿ ಮೆರವಣೆಗೆ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ವಿವರಿಸಿದರು.

ಸಭೆಯಲ್ಲಿ ಅಖಂಡ ಭಾರತ ವಿನಾಯಕ ಮಹಾಸಭಾ ಮುಖಂಡರಾದ ಸಾ.ಮಾ ಅನಿಲ್ ಬಾಬು, ನಾಮಲ್ ಮಂಜು, ಬಾಬು, ನಾಗ, ಎಬಿವಿಪಿ ಹರೀಷ್, ಸಂದೀಪ್, ಅಪ್ಪಿನಾರಾಯಣಸ್ವಾಮಿ, ಗಂಗಮ್ಮನಪಾಳ್ಯ ಚಂದ್ರನ್ ನವೀನ್, ಶಶಿಕುಮಾರ್, ಆಚಾರಿ ಕೇಶವ, ರವಿಕುಮಾರ್, ವಿನಯ್ ಮುಂತಾದವರು ಇದ್ದರು.

Ramesh Babu

Journalist

Recent Posts

56,432 ಹುದ್ದೆಗಳ ನೇರ ನೇಮಕಾತಿಗಾಗಿ ತುರ್ತು ಕ್ರಮ- ಸಿಎಂ ಸಿದ್ದರಾಮಯ್ಯ

ಪರಿಶಿಷ್ಟ ಜಾತಿಗಳಿಗೆ ಒಳಮೀಸಲು ನೀಡುವ ವಿಚಾರದಲ್ಲಿ ನಮ್ಮ ಸರ್ಕಾರವು ಕೈಗೊಂಡಿರುವ ಮಹತ್ವದ ನಿರ್ಧಾರದ ಅನ್ವಯ ಮಾನ್ಯ ಉಚ್ಚ ನ್ಯಾಯಾಲಯದ ಆದೇಶಕ್ಕೆ…

1 hour ago

ಫ್ಯಾಶನ್ ಡಿಸೈನಿಂಗ್ ಉಚಿತ ತರಬೇತಿ

ಪರಿಶಿಷ್ಟ ಪಂಗಡದ ಮಹಿಳಾ ಅಭ್ಯರ್ಥಿಗಳಿಗೆ ನಾಲ್ಕು ವಾರಗಳ ಫ್ಯಾಷನ್ ಡಿಸೈನ್/ಬ್ಯೂಟಿಷಿಯನ್ ಕೌಶಲ್ಯ ಆಧಾರಿತ ಉದ್ಯಮಶೀಲತಾ ಕಾರ್ಯಕ್ರಮವನ್ನು ಮೇ ತಿಂಗಳ ಮೊದಲನೇ…

2 hours ago

ಡಿಕ್ರಾಸ್-ಹಳೇ ಬಸ್ ನಿಲ್ದಾಣ ರಸ್ತೆಯಲ್ಲಿ ಬೈಕ್ ಅಪಘಾತದಲ್ಲಿ ಸವಾರ ದುರ್ಮರಣ ಪ್ರಕರಣ: ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಏ.27ರಂದು ದೊಡ್ಡಬಳ್ಳಾಪುರ…

12 hours ago

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ: ಹೆಲ್ಮೆಟ್ ಧರಿಸದ ಕಾರಣ ಬೈಕ್ ಸವಾರ ದುರ್ಮರಣ

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…

1 day ago

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರ ಸಾವು ಪ್ರಕರಣ: ಕತ್ತಲಲ್ಲಿ ಪ್ರಯಾಣಿಸುತ್ತಿದ್ದವರ ಬದುಕಲ್ಲಿ ಶಾಶ್ವತ ಕತ್ತಲು ಮೂಡಿಸಿದ ಜವರಾಯ: ಎಚ್ಚೆತ್ತ ನಗರಸಭೆ ಬೀದಿ ದೀಪ ಅಳವಡಿಕೆ

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…

1 day ago

ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ…….

ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…

2 days ago