Categories: ಕೋಲಾರ

ಅಖಂಡ ಭಾರತ ವಿನಾಯಕ ಮಹಾಸಭಾ ವತಿಯಿಂದ ನಗರದಲ್ಲಿ 11ನೇ ವರ್ಷದ ಅದ್ಧೂರಿ ಗಣೇಶೋತ್ಸವಕ್ಕೆ ಸಿದ್ಧತೆ

ಕೋಲಾರ: ನಗರದ ಎಸ್ಸೆನ್ನಾರ್ ಆಸ್ಪತ್ರೆ ಮುಂಭಾಗ ಅಖಂಡ ಭಾರತ ವಿನಾಯಕ ಮಹಾಸಭಾ ವತಿಯಿಂದ ಶಾಶ್ವತ ಮತ್ತು ಶುದ್ಧ ನೀರಿಗಾಗಿ ಆಗ್ರಹಿಸಿ 11ನೇ ವರ್ಷದ ಅದ್ದೂರಿ ಗಣೇಶೋತ್ಸವವನ್ನು ಸಂಭ್ರಮದಿಂದ ಆಚರಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.

ನಗರದಲ್ಲಿರುವ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಓಂಶಕ್ತಿ ಚಲಪತಿ ಅವರ ಕಛೇರಿಯಲ್ಲಿ ಸಭೆ ಸೇರಿ ತೀರ್ಮಾನಿಸಿದ ಸಮಿತಿ ಮುಖಂಡರು ಪ್ರತಿ ವರ್ಷದಂತೆ ಈ ಬಾರಿಯೂ 9 ದಿನಗಳ ಕಾಲ ಅದ್ದೂರಿಯಾಗಿ ಆಚರಣೆ ನಡೆಸಬೇಕು ಇದಕ್ಕೆ ಮಹಾಸಭಾದ ಸದಸ್ಯರ ಸಹಕಾರ ಮುಖ್ಯವಾಗಿದೆ ಕಾರ್ಯಕ್ರಮವನ್ನು ಹೇಗೆ ಆಚರಣೆ ಮಾಡಬೇಕು ಎಂಬುದರ ಕುರಿತು ರೂಪರೇಷೆಗಳನ್ನು ಸಭೆಯಲ್ಲಿ ಚರ್ಚಿಸಲಾಯಿತು.

ಸಭೆಯ ನಂತರ ಸಮಿತಿಯ ಮುಖಂಡ ಓಂಶಕ್ತಿ ಚಲಪತಿ ಮಾಹಿತಿ ನೀಡಿ ಅಖಂಡ ಭಾರತ ವಿನಾಯಕ ಮಹಾಸಭಾ ವತಿಯಿಂದ ಗಣೇಶೋತ್ಸವದಲ್ಲಿ ವಿವಿಧ ಕಾರ್ಯಕ್ರಮವನ್ನು ಪ್ರತಿ ವರ್ಷದಂತೆ ಈ ಬಾರಿಯೂ ಆಚರಣೆಗೆ ಸಮಿತಿ ತೀರ್ಮಾನಿಸಲಾಗಿದೆ 9 ದಿನಗಳ ಕಾಲ ನಡೆಯುವ ಗಣೇಶೋತ್ಸವದಲ್ಲಿ ಪ್ರಖ್ಯಾತ ಚಲನಚಿತ್ರ ನಟ ನಟಿಯರಿಂದ ಸಾಂಸ್ಕೃತಿಕ, ಸಂಗೀತೋತ್ಸವ, ನಗೆ ಹಬ್ಬದಂತಹ ಕಾರ್ಯಕ್ರಮಗಳು ಸೇರಿದಂತೆ ಕ್ರೀಡೆಯನ್ನು ಉತ್ತೇಜಿಸುವ ಸಲುವಾಗಿ ಕ್ರೀಡಾ ಚಟುವಟಿಕೆಗಳು ರಂಗೋಲಿ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗುತ್ತದೆ ಕೊನೆಯ ದಿನ ಆಂಧ್ರಪ್ರದೇಶ, ತಮಿಳುನಾಡು, ಕೇರಳ ಸೇರಿದಂತೆ ರಾಜ್ಯದಿಂದ ಜಾನಪದ ಕಲಾವಿದರಿಂದ ಚಂಡಿವಾಧ್ಯ, ತಮಟೆ, ನೃತ್ಯ ಕೀಲುಕುದುರೆಯೊಂದಿಗೆ ಅದ್ದೂರಿ ಮೆರವಣೆಗೆ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ವಿವರಿಸಿದರು.

ಸಭೆಯಲ್ಲಿ ಅಖಂಡ ಭಾರತ ವಿನಾಯಕ ಮಹಾಸಭಾ ಮುಖಂಡರಾದ ಸಾ.ಮಾ ಅನಿಲ್ ಬಾಬು, ನಾಮಲ್ ಮಂಜು, ಬಾಬು, ನಾಗ, ಎಬಿವಿಪಿ ಹರೀಷ್, ಸಂದೀಪ್, ಅಪ್ಪಿನಾರಾಯಣಸ್ವಾಮಿ, ಗಂಗಮ್ಮನಪಾಳ್ಯ ಚಂದ್ರನ್ ನವೀನ್, ಶಶಿಕುಮಾರ್, ಆಚಾರಿ ಕೇಶವ, ರವಿಕುಮಾರ್, ವಿನಯ್ ಮುಂತಾದವರು ಇದ್ದರು.

Ramesh Babu

Journalist

Recent Posts

ಕುಟುಂಬಗಳ ಆಕ್ರಂದನ ಮುಗಿಲು ಮುಟ್ಟಿಸಿದ ಶನಿವಾರ: ಜಿಲ್ಲೆಯನ್ನ ಬೆಚ್ಚಿಬೀಳಿಸಿದ ಸರಣಿ ದುರಂತಗಳು: ಒಂದೇ ದಿನ 7 ಮಂದಿ ಮೃತ್ಯು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…

7 hours ago

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ದಾರುಣ ಸಾವು

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ‌…

10 hours ago

ಕೆಲಸದ ಕನಸು ಹೊತ್ತು ಹೊರಟ ಯುವತಿ ಲಾರಿ ಅಪಘಾತಕ್ಕೆ ಬಲಿ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…

15 hours ago

ಮದ್ಯ ಖರೀದಿ, ಸೇವನೆಗೆ 21 ವರ್ಷ ಕಡ್ಡಾಯ; ಯುವಜನರ ರಕ್ಷಣೆಗಾಗಿ ಕಟ್ಟುನಿಟ್ಟಿನ ಮದ್ಯ ನಿಯಮ ಜಾರಿ

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…

16 hours ago

ಡ್ಯೂಕ್ ಬೈಕ್–ಕಂಟೈನರ್ ಲಾರಿ ಅಪಘಾತ – ಯುವಕ ಸ್ಥಳದಲ್ಲೇ ಸಾವು

ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…

16 hours ago

ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಯುವತಿ ಸ್ಥಳದಲ್ಲೇ ಸಾವು

ಹೊಸಕೋಟೆ: ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…

18 hours ago