ಕರ್ನಾಟಕ ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023ರ ಸಂಬಂಧ ಚುನಾವಣಾ ಆಯೋಗದ ನಿರ್ದೇಶನದಂತೆ ಅಗತ್ಯ ಸೇವೆಗಳಲ್ಲಿ ಚುನಾವಣಾ ದಿನದಂದು ಕಾರ್ಯ ನಿರ್ವಹಿಸುತ್ತಿರುವ ಗೈರು ಹಾಜರಿ ಮತದಾರರಿಗೆ ಮೇ 02, ಮೇ 03 ಹಾಗೂ ಮೇ 04 ರಂದು ನಡೆದ ಅಂಚೆ ಮತದಾನದಲ್ಲಿ ಶೇಕಡಾ 100 ರಷ್ಟು ಅಂಚೆ ಮತದಾನವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ತಿಳಿಸಿದ್ದಾರೆ.
ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಮೇ 02 ರಂದು 36 ಮಂದಿ ಗೈರು ಹಾಜರಿ ಮತದಾರರು, ಮೇ 03 ರಂದು 10 ಮಂದಿ ಗೈರು ಹಾಜರಿ ಮತದಾರರು ಒಟ್ಟಾರೆ 46(ಶೇ. 100) ಮಂದಿ ಗೈರು ಹಾಜರಿ ಮತದಾರರು ಅಂಚೆ ಮತದಾನ ಮಾಡಿದ್ದಾರೆ.
ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಮೇ 02 ರಂದು 14 ಮಂದಿ ಗೈರು ಹಾಜರಿ ಮತದಾರರು, ಮೇ 03 ರಂದು 05 ಮಂದಿ ಗೈರು ಹಾಜರಿ ಮತದಾರರು ಒಟ್ಟಾರೆ 19(ಶೇ. 100) ಮಂದಿ ಗೈರು ಹಾಜರಿ ಮತದಾರರು ಅಂಚೆ ಮತದಾನ ಮಾಡಿದ್ದಾರೆ.
ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಮೇ 02 ರಂದು 07 ಮಂದಿ ಗೈರು ಹಾಜರಿ ಮತದಾರರು, ಮೇ 03 ರಂದು ಒಬ್ಬರು ಗೈರು ಹಾಜರಿ ಮತದಾರರು ಹಾಗೂ ಮೇ 04 ರಂದು ಒಬ್ಬರು ಗೈರು ಹಾಜರಿ ಮತದಾರರು ಒಟ್ಟಾರೆ 09(ಶೇ. 100) ಮಂದಿ ಗೈರು ಹಾಜರಿ ಮತದಾರರು ಅಂಚೆ ಮತದಾನ ಮಾಡಿದ್ದಾರೆ.
ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಗೈರು ಹಾಜರಿ ಮತದಾರರು ಇಲ್ಲದ ಕಾರಣ ಅಂಚೆ ಮತದಾನ ನಡೆದಿರುವುದಿಲ್ಲ.
ಅಗತ್ಯ ಸೇವೆಗಳಲ್ಲಿ ಚುನಾವಣಾ ದಿನದಂದು ಕಾರ್ಯ ನಿರ್ವಹಿಸುತ್ತಿರುವ ಒಟ್ಟು 74 ಗೈರು ಹಾಜರಿ ಮತದಾರರಲ್ಲಿ 74 ಮಂದಿಯೂ ಅಂಚೆ ಮತದಾನ ಮಾಡುವ ಮೂಲಕ ಶೇಕಡ 100 ರಷ್ಟು ಅಂಚೆ ಮತದಾನವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಅವರು ತಿಳಿಸಿದ್ದಾರೆ.
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…