ಅಗತ್ಯ ಸೇವೆಯಲ್ಲಿರುವ ಗೈರು ಹಾಜರಿ ಮತದಾರರಿಂದ ಶೇ. 100 ರಷ್ಟು ಅಂಚೆ ಮತದಾನ

ಕರ್ನಾಟಕ ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023ರ ಸಂಬಂಧ ಚುನಾವಣಾ ಆಯೋಗದ ನಿರ್ದೇಶನದಂತೆ ಅಗತ್ಯ ಸೇವೆಗಳಲ್ಲಿ ಚುನಾವಣಾ ದಿನದಂದು ಕಾರ್ಯ ನಿರ್ವಹಿಸುತ್ತಿರುವ ಗೈರು ಹಾಜರಿ ಮತದಾರರಿಗೆ ಮೇ 02, ಮೇ 03 ಹಾಗೂ ಮೇ 04 ರಂದು ನಡೆದ ಅಂಚೆ ಮತದಾನದಲ್ಲಿ ಶೇಕಡಾ 100 ರಷ್ಟು ಅಂಚೆ ಮತದಾನವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ತಿಳಿಸಿದ್ದಾರೆ.

ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಮೇ 02 ರಂದು 36 ಮಂದಿ ಗೈರು ಹಾಜರಿ ಮತದಾರರು, ಮೇ 03 ರಂದು 10 ಮಂದಿ ಗೈರು ಹಾಜರಿ ಮತದಾರರು ಒಟ್ಟಾರೆ 46(ಶೇ. 100) ಮಂದಿ ಗೈರು ಹಾಜರಿ ಮತದಾರರು ಅಂಚೆ ಮತದಾನ ಮಾಡಿದ್ದಾರೆ.

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಮೇ 02 ರಂದು 14 ಮಂದಿ ಗೈರು ಹಾಜರಿ ಮತದಾರರು, ಮೇ 03 ರಂದು 05 ಮಂದಿ ಗೈರು ಹಾಜರಿ ಮತದಾರರು ಒಟ್ಟಾರೆ 19(ಶೇ. 100) ಮಂದಿ ಗೈರು ಹಾಜರಿ ಮತದಾರರು ಅಂಚೆ ಮತದಾನ ಮಾಡಿದ್ದಾರೆ.

ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಮೇ 02 ರಂದು 07 ಮಂದಿ ಗೈರು ಹಾಜರಿ ಮತದಾರರು, ಮೇ 03 ರಂದು ಒಬ್ಬರು ಗೈರು ಹಾಜರಿ ಮತದಾರರು ಹಾಗೂ ಮೇ 04 ರಂದು ಒಬ್ಬರು ಗೈರು ಹಾಜರಿ ಮತದಾರರು ಒಟ್ಟಾರೆ 09(ಶೇ. 100) ಮಂದಿ ಗೈರು ಹಾಜರಿ ಮತದಾರರು ಅಂಚೆ ಮತದಾನ ಮಾಡಿದ್ದಾರೆ.

ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಗೈರು ಹಾಜರಿ ಮತದಾರರು ಇಲ್ಲದ ಕಾರಣ ಅಂಚೆ ಮತದಾನ ನಡೆದಿರುವುದಿಲ್ಲ.

ಅಗತ್ಯ ಸೇವೆಗಳಲ್ಲಿ ಚುನಾವಣಾ ದಿನದಂದು ಕಾರ್ಯ ನಿರ್ವಹಿಸುತ್ತಿರುವ ಒಟ್ಟು 74 ಗೈರು ಹಾಜರಿ ಮತದಾರರಲ್ಲಿ 74 ಮಂದಿಯೂ ಅಂಚೆ ಮತದಾನ ಮಾಡುವ ಮೂಲಕ ಶೇಕಡ 100 ರಷ್ಟು ಅಂಚೆ ಮತದಾನವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಅವರು ತಿಳಿಸಿದ್ದಾರೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

3 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

15 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

19 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

19 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

23 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

2 days ago