ಕರ್ನಾಟಕ ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023ರ ಸಂಬಂಧ ಚುನಾವಣಾ ಆಯೋಗದ ನಿರ್ದೇಶನದಂತೆ ಅಗತ್ಯ ಸೇವೆಗಳಲ್ಲಿ ಚುನಾವಣಾ ದಿನದಂದು ಕಾರ್ಯ ನಿರ್ವಹಿಸುತ್ತಿರುವ ಗೈರು ಹಾಜರಿ ಮತದಾರರಿಗೆ ಮೇ 02, ಮೇ 03 ಹಾಗೂ ಮೇ 04 ರಂದು ನಡೆದ ಅಂಚೆ ಮತದಾನದಲ್ಲಿ ಶೇಕಡಾ 100 ರಷ್ಟು ಅಂಚೆ ಮತದಾನವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ತಿಳಿಸಿದ್ದಾರೆ.
ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಮೇ 02 ರಂದು 36 ಮಂದಿ ಗೈರು ಹಾಜರಿ ಮತದಾರರು, ಮೇ 03 ರಂದು 10 ಮಂದಿ ಗೈರು ಹಾಜರಿ ಮತದಾರರು ಒಟ್ಟಾರೆ 46(ಶೇ. 100) ಮಂದಿ ಗೈರು ಹಾಜರಿ ಮತದಾರರು ಅಂಚೆ ಮತದಾನ ಮಾಡಿದ್ದಾರೆ.
ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಮೇ 02 ರಂದು 14 ಮಂದಿ ಗೈರು ಹಾಜರಿ ಮತದಾರರು, ಮೇ 03 ರಂದು 05 ಮಂದಿ ಗೈರು ಹಾಜರಿ ಮತದಾರರು ಒಟ್ಟಾರೆ 19(ಶೇ. 100) ಮಂದಿ ಗೈರು ಹಾಜರಿ ಮತದಾರರು ಅಂಚೆ ಮತದಾನ ಮಾಡಿದ್ದಾರೆ.
ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಮೇ 02 ರಂದು 07 ಮಂದಿ ಗೈರು ಹಾಜರಿ ಮತದಾರರು, ಮೇ 03 ರಂದು ಒಬ್ಬರು ಗೈರು ಹಾಜರಿ ಮತದಾರರು ಹಾಗೂ ಮೇ 04 ರಂದು ಒಬ್ಬರು ಗೈರು ಹಾಜರಿ ಮತದಾರರು ಒಟ್ಟಾರೆ 09(ಶೇ. 100) ಮಂದಿ ಗೈರು ಹಾಜರಿ ಮತದಾರರು ಅಂಚೆ ಮತದಾನ ಮಾಡಿದ್ದಾರೆ.
ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಗೈರು ಹಾಜರಿ ಮತದಾರರು ಇಲ್ಲದ ಕಾರಣ ಅಂಚೆ ಮತದಾನ ನಡೆದಿರುವುದಿಲ್ಲ.
ಅಗತ್ಯ ಸೇವೆಗಳಲ್ಲಿ ಚುನಾವಣಾ ದಿನದಂದು ಕಾರ್ಯ ನಿರ್ವಹಿಸುತ್ತಿರುವ ಒಟ್ಟು 74 ಗೈರು ಹಾಜರಿ ಮತದಾರರಲ್ಲಿ 74 ಮಂದಿಯೂ ಅಂಚೆ ಮತದಾನ ಮಾಡುವ ಮೂಲಕ ಶೇಕಡ 100 ರಷ್ಟು ಅಂಚೆ ಮತದಾನವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಅವರು ತಿಳಿಸಿದ್ದಾರೆ.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…