ಅಗತ್ಯ ಸೇವೆಯಲ್ಲಿರುವ ಗೈರು ಹಾಜರಿ ಮತದಾರರಿಂದ ಶೇ. 100 ರಷ್ಟು ಅಂಚೆ ಮತದಾನ

ಕರ್ನಾಟಕ ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023ರ ಸಂಬಂಧ ಚುನಾವಣಾ ಆಯೋಗದ ನಿರ್ದೇಶನದಂತೆ ಅಗತ್ಯ ಸೇವೆಗಳಲ್ಲಿ ಚುನಾವಣಾ ದಿನದಂದು ಕಾರ್ಯ ನಿರ್ವಹಿಸುತ್ತಿರುವ ಗೈರು ಹಾಜರಿ ಮತದಾರರಿಗೆ ಮೇ 02, ಮೇ 03 ಹಾಗೂ ಮೇ 04 ರಂದು ನಡೆದ ಅಂಚೆ ಮತದಾನದಲ್ಲಿ ಶೇಕಡಾ 100 ರಷ್ಟು ಅಂಚೆ ಮತದಾನವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ತಿಳಿಸಿದ್ದಾರೆ.

ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಮೇ 02 ರಂದು 36 ಮಂದಿ ಗೈರು ಹಾಜರಿ ಮತದಾರರು, ಮೇ 03 ರಂದು 10 ಮಂದಿ ಗೈರು ಹಾಜರಿ ಮತದಾರರು ಒಟ್ಟಾರೆ 46(ಶೇ. 100) ಮಂದಿ ಗೈರು ಹಾಜರಿ ಮತದಾರರು ಅಂಚೆ ಮತದಾನ ಮಾಡಿದ್ದಾರೆ.

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಮೇ 02 ರಂದು 14 ಮಂದಿ ಗೈರು ಹಾಜರಿ ಮತದಾರರು, ಮೇ 03 ರಂದು 05 ಮಂದಿ ಗೈರು ಹಾಜರಿ ಮತದಾರರು ಒಟ್ಟಾರೆ 19(ಶೇ. 100) ಮಂದಿ ಗೈರು ಹಾಜರಿ ಮತದಾರರು ಅಂಚೆ ಮತದಾನ ಮಾಡಿದ್ದಾರೆ.

ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಮೇ 02 ರಂದು 07 ಮಂದಿ ಗೈರು ಹಾಜರಿ ಮತದಾರರು, ಮೇ 03 ರಂದು ಒಬ್ಬರು ಗೈರು ಹಾಜರಿ ಮತದಾರರು ಹಾಗೂ ಮೇ 04 ರಂದು ಒಬ್ಬರು ಗೈರು ಹಾಜರಿ ಮತದಾರರು ಒಟ್ಟಾರೆ 09(ಶೇ. 100) ಮಂದಿ ಗೈರು ಹಾಜರಿ ಮತದಾರರು ಅಂಚೆ ಮತದಾನ ಮಾಡಿದ್ದಾರೆ.

ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಗೈರು ಹಾಜರಿ ಮತದಾರರು ಇಲ್ಲದ ಕಾರಣ ಅಂಚೆ ಮತದಾನ ನಡೆದಿರುವುದಿಲ್ಲ.

ಅಗತ್ಯ ಸೇವೆಗಳಲ್ಲಿ ಚುನಾವಣಾ ದಿನದಂದು ಕಾರ್ಯ ನಿರ್ವಹಿಸುತ್ತಿರುವ ಒಟ್ಟು 74 ಗೈರು ಹಾಜರಿ ಮತದಾರರಲ್ಲಿ 74 ಮಂದಿಯೂ ಅಂಚೆ ಮತದಾನ ಮಾಡುವ ಮೂಲಕ ಶೇಕಡ 100 ರಷ್ಟು ಅಂಚೆ ಮತದಾನವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಅವರು ತಿಳಿಸಿದ್ದಾರೆ.

Ramesh Babu

Journalist

Recent Posts

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

37 minutes ago

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

6 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

18 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

18 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

19 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

22 hours ago