ಅಗಲಿದ ಹಿರಿಯ ಸಾಹಿತಿ ನಾಡೋಜ ಸಾರಾ ಅಬೂಬಕ್ಕರ್‌ ಅವರಿಗೆ ನುಡಿ ನಮನ

ಕೇರಳದ ಕಾಸರಗೋಡು ಜಿಲ್ಲೆಯವರಾದ ಸಾರಾ ಅಬೂಬಕ್ಕರ್ ಚಂದ್ರಗಿರಿ ತೀರದಲ್ಲಿ ಪುಸ್ತಕವನ್ನು ಬರೆದಿದ್ದಾರೆ. ಇವರು ತಮ್ಮ ಬರಹಗಳಲ್ಲಿ ಮುಸ್ಲಿಂನ ಕೆಲವು ಅರ್ಥಹೀನ ಸಂಪ್ರದಾಯಗಳನ್ನು ಕಟುವಾಗಿ ಟೀಕಿಸುತ್ತಿದ್ದರು ಎಂದು ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಎಂ ಚಿಕ್ಕಣ್ಣ ಹೇಳಿದರು.

ಶ್ರೀ ದೇವರಾಜ ಅರಸು ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ ಹಾಗೂ ಶ್ರೀ ದೇವರಾಜ ಅರಸ್ ಪ್ರಥಮ ದರ್ಜೆ ಸಂಜೆ ಕಾಲೇಜಿನ ಸಹಯೋಗದಲ್ಲಿ ಹಿರಿಯ ಸಾಹಿತಿ ನಾಡೋಜ ಸಾರಾ ಅಬೂಬಕ್ಕರ್‌ ಅವರಿಗೆ ನುಡಿ ನಮನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಾರಾ ಅಬೂಬಕ್ಕರ್ ಹಲವಾರು ಕೃತಿಗಳನ್ನು ರಚಿಸಿದ್ದಾರೆ ಅವುಗಳಲ್ಲಿ ಸಹನಾ, ವಜ್ರಗಳು, ಕದನವಿರಾಮ, ಸುಳಿಯಲ್ಲಿ ಸಿಕ್ಕವರು, ಪ್ರವಾಹ-ಸುಳಿ, ತಳ ಒಡೆದ ದೋಣಿ, ಪಂಜರ ಪ್ರಮುಖವು, ಕಥಾ ಸಂಕಲನಗಳಾದ ಚಪ್ಪಲಿಗಳು, ಪಯಣ ಮತ್ತು ಇತರ ಕಥೆಗಳು, ಅರ್ಧರಾತ್ರಿಯಲ್ಲಿ ಹುಟ್ಟಿದ ಕೂಸು, ಖೆಡ್ಡ ಸಹ ಜನರ ಹೃದಯ ಗೆದ್ದಿವೆ ಎನ್ನಬಹುದು.

ಕನ್ನಡದ ಖ್ಯಾತ ಲೇಖಕಿ ಸಾರಾ ಅಬೂಬಕ್ಕರ್‌
ಮಹಿಳಾ ಸಮಾನತೆ, ಮಹಿಳಾ ಸಬಲೀಕರಣದ ಚಿಂತನೆ ಹೊಂದಿದ್ದರು, ಹೆಣ್ಣು ಮಕ್ಕಳಿಗೆ ಶಿಕ್ಷಣ ದೊರಕಬೇಕೆಂದು ಸಾರಾ ಅಬೂಬಕ್ಕರ್ ನಿರಂತರವಾಗಿ ಪ್ರತಿಪಾದಿಸುತ್ತಿದ್ದರು.

ಓದಿನಲ್ಲಿ ನಿರಂತರ ಆಸಕ್ತರಾಗಿದ್ದ ಅವರು ಶಿವರಾಮ ಕಾರಂತರು, ಇನಾಂದಾರ್, ಭೈರಪ್ಪ, ಅನಂತಮೂರ್ತಿ ಇವರೆಲ್ಲರ ಬರವಣಿಗೆಗೆ ಮಾರು ಹೋಗಿ ಸದಾ ಓದಿನಲ್ಲಿ ಮಗ್ನರಾಗಿದ್ದರು. ಮನೋವಿಜ್ಞಾನದ ಬಗ್ಗೆ ತ್ರಿವೇಣಿಯವರು ಬರೆದ ಕಾದಂಬರಿಗಳು ಸಾರಾ ಅವರಲ್ಲಿ ಆಕರ್ಷಣೆ ಹುಟ್ಟಿಸಿದವು.

ಸಾರಾ ಅವರಿಗೆ ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಹಂಪಿ ವಿಶ್ವವಿದ್ಯಾಲಯದ ನಾಡೋಜ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ, ನೃಪತುಂಗ ಪ್ರಶಸ್ತಿ ಮುಂತಾದ ಹಲವಾರು ಪ್ರಮುಖ ಪ್ರಶಸ್ತಿ ಗೌರವಗಳು ಸಂದಿವೆ ಎಂದರು.

ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲರಾದ ಕೆ. ದಕ್ಷಿಣಾಮೂರ್ತಿ, ಐ.ಕ್ಯೂ.ಎ.ಸಿ ಯ ಸಂಯೋಜಕರಾದ ಆರ್. ಉಮೇಶ್, ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ಸಿ.ಪಿ.ಪ್ರಕಾಶ್ ಎನ್.ಎಸ್.ಎಸ್ ಅಧಿಕಾರಿಗಳಾದ ಲಕ್ಷ್ಮೀಶ, ಸಾಂಸ್ಕೃತಿಕ ಸಮಿತಿಯ ಸಂಚಾಲಕರಾದ ಪಿ.ಚೈತ್ರ, ರಾಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ನಾರಾಯಣಸ್ವಾಮಿ, ನಂದನ, ಕಚೇರಿಯ ಅಧೀಕ್ಷಕರಾದ ಶ್ರೀನಿವಾಸ್, ಗ್ರಂಥಪಾಲಕರಾದ ಪ್ರೇಮ, ಮತ್ತಿತರರು ಹಾಜರಿದ್ದರು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

7 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

11 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

11 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

14 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

1 day ago