ಅಗಲಿದ ಹಿರಿಯ ಸಾಹಿತಿ ನಾಡೋಜ ಸಾರಾ ಅಬೂಬಕ್ಕರ್‌ ಅವರಿಗೆ ನುಡಿ ನಮನ

ಕೇರಳದ ಕಾಸರಗೋಡು ಜಿಲ್ಲೆಯವರಾದ ಸಾರಾ ಅಬೂಬಕ್ಕರ್ ಚಂದ್ರಗಿರಿ ತೀರದಲ್ಲಿ ಪುಸ್ತಕವನ್ನು ಬರೆದಿದ್ದಾರೆ. ಇವರು ತಮ್ಮ ಬರಹಗಳಲ್ಲಿ ಮುಸ್ಲಿಂನ ಕೆಲವು ಅರ್ಥಹೀನ ಸಂಪ್ರದಾಯಗಳನ್ನು ಕಟುವಾಗಿ ಟೀಕಿಸುತ್ತಿದ್ದರು ಎಂದು ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಎಂ ಚಿಕ್ಕಣ್ಣ ಹೇಳಿದರು.

ಶ್ರೀ ದೇವರಾಜ ಅರಸು ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ ಹಾಗೂ ಶ್ರೀ ದೇವರಾಜ ಅರಸ್ ಪ್ರಥಮ ದರ್ಜೆ ಸಂಜೆ ಕಾಲೇಜಿನ ಸಹಯೋಗದಲ್ಲಿ ಹಿರಿಯ ಸಾಹಿತಿ ನಾಡೋಜ ಸಾರಾ ಅಬೂಬಕ್ಕರ್‌ ಅವರಿಗೆ ನುಡಿ ನಮನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಾರಾ ಅಬೂಬಕ್ಕರ್ ಹಲವಾರು ಕೃತಿಗಳನ್ನು ರಚಿಸಿದ್ದಾರೆ ಅವುಗಳಲ್ಲಿ ಸಹನಾ, ವಜ್ರಗಳು, ಕದನವಿರಾಮ, ಸುಳಿಯಲ್ಲಿ ಸಿಕ್ಕವರು, ಪ್ರವಾಹ-ಸುಳಿ, ತಳ ಒಡೆದ ದೋಣಿ, ಪಂಜರ ಪ್ರಮುಖವು, ಕಥಾ ಸಂಕಲನಗಳಾದ ಚಪ್ಪಲಿಗಳು, ಪಯಣ ಮತ್ತು ಇತರ ಕಥೆಗಳು, ಅರ್ಧರಾತ್ರಿಯಲ್ಲಿ ಹುಟ್ಟಿದ ಕೂಸು, ಖೆಡ್ಡ ಸಹ ಜನರ ಹೃದಯ ಗೆದ್ದಿವೆ ಎನ್ನಬಹುದು.

ಕನ್ನಡದ ಖ್ಯಾತ ಲೇಖಕಿ ಸಾರಾ ಅಬೂಬಕ್ಕರ್‌
ಮಹಿಳಾ ಸಮಾನತೆ, ಮಹಿಳಾ ಸಬಲೀಕರಣದ ಚಿಂತನೆ ಹೊಂದಿದ್ದರು, ಹೆಣ್ಣು ಮಕ್ಕಳಿಗೆ ಶಿಕ್ಷಣ ದೊರಕಬೇಕೆಂದು ಸಾರಾ ಅಬೂಬಕ್ಕರ್ ನಿರಂತರವಾಗಿ ಪ್ರತಿಪಾದಿಸುತ್ತಿದ್ದರು.

ಓದಿನಲ್ಲಿ ನಿರಂತರ ಆಸಕ್ತರಾಗಿದ್ದ ಅವರು ಶಿವರಾಮ ಕಾರಂತರು, ಇನಾಂದಾರ್, ಭೈರಪ್ಪ, ಅನಂತಮೂರ್ತಿ ಇವರೆಲ್ಲರ ಬರವಣಿಗೆಗೆ ಮಾರು ಹೋಗಿ ಸದಾ ಓದಿನಲ್ಲಿ ಮಗ್ನರಾಗಿದ್ದರು. ಮನೋವಿಜ್ಞಾನದ ಬಗ್ಗೆ ತ್ರಿವೇಣಿಯವರು ಬರೆದ ಕಾದಂಬರಿಗಳು ಸಾರಾ ಅವರಲ್ಲಿ ಆಕರ್ಷಣೆ ಹುಟ್ಟಿಸಿದವು.

ಸಾರಾ ಅವರಿಗೆ ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಹಂಪಿ ವಿಶ್ವವಿದ್ಯಾಲಯದ ನಾಡೋಜ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ, ನೃಪತುಂಗ ಪ್ರಶಸ್ತಿ ಮುಂತಾದ ಹಲವಾರು ಪ್ರಮುಖ ಪ್ರಶಸ್ತಿ ಗೌರವಗಳು ಸಂದಿವೆ ಎಂದರು.

ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲರಾದ ಕೆ. ದಕ್ಷಿಣಾಮೂರ್ತಿ, ಐ.ಕ್ಯೂ.ಎ.ಸಿ ಯ ಸಂಯೋಜಕರಾದ ಆರ್. ಉಮೇಶ್, ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ಸಿ.ಪಿ.ಪ್ರಕಾಶ್ ಎನ್.ಎಸ್.ಎಸ್ ಅಧಿಕಾರಿಗಳಾದ ಲಕ್ಷ್ಮೀಶ, ಸಾಂಸ್ಕೃತಿಕ ಸಮಿತಿಯ ಸಂಚಾಲಕರಾದ ಪಿ.ಚೈತ್ರ, ರಾಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ನಾರಾಯಣಸ್ವಾಮಿ, ನಂದನ, ಕಚೇರಿಯ ಅಧೀಕ್ಷಕರಾದ ಶ್ರೀನಿವಾಸ್, ಗ್ರಂಥಪಾಲಕರಾದ ಪ್ರೇಮ, ಮತ್ತಿತರರು ಹಾಜರಿದ್ದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

4 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

11 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

12 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago