Categories: ರಾಜ್ಯ

ಅಚ್ಚರಿ: ಕೋಳಿ ಮರಿಗೆ ನಾಲ್ಕು ಕಾಲು: ಆ

ರಾಮನಗರ: ಸಾಮಾನ್ಯವಾಗಿ ಕೋಳಿಗೆ ಎರಡು ಕಾಲು ಇರುತ್ತದೆ ಆದರೆ ಇಲ್ಲೊಂದು ನಾಲ್ಕು ಕಾಲಿನ ವಿಲಕ್ಷಣ ಕೋಳಿ ಮರಿಯೊಂದು ಮೊಟ್ಟೆಯಿಂದ ಹೊರ ಬಂದಿದ್ದು, ಗ್ರಾಮಸ್ಥರ ಅಚ್ಚರಿಗೆ ಕಾರಣವಾಗಿದೆ.

ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ಮರಳವಾಡಿ ಹೋಬಳಿಯ ಮಲ್ಲೇನಹಳ್ಳಿ ಗ್ರಾಮದ ಮುನಿರಾಜು ಎಂಬುವರ ಮನೆಯಲ್ಲಿ ನಾಲ್ಕು ಕಾಲು ಇರುವ ಕೋಳಿ ಮರಿ ಜನನ ವಾಗಿರುವುದು ಎಲ್ಲರ ಅಚ್ಚರಿಗೆ ಕಾರಣವಾಗಿದೆ.

ಮಲ್ಲೇನಹಳ್ಳಿ ಮುನಿರಾಜು ರೈತರಾಗಿದ್ದು ಉಪಕಸುಬಾಗಿ ಕೋಳಿ ಸಾಕಾಣಿಕೆಯನ್ನು ಮಾಡುತ್ತಿದ್ದಾರೆ. ಇತ್ತೀಚಿಗೆ ಕೋಳಿ ಒಂದು ಇಟ್ಟಿದ್ದ 15ಕ್ಕೂ ಹೆಚ್ಚು ಮೊಟ್ಟೆಗಳಿಗೆ ಮರಿ ಮಾಡಲು ಕಳೆದ 20 ದಿನಗಳಿಂದ ಕಾವು ಕೊಟ್ಟಿತ್ತು.

ಶುಕ್ರವಾರ ಮೊಟ್ಟೆಗಳು ಒಡೆದು ಮರಿಗಳು ಜನನವಾಗಿತ್ತು. ಅದರಲ್ಲಿ ನಾಲ್ಕು ಕಾಲುವುಳ್ಳ ಕೋಳಿ ಮರಿ ಜನನ ವಾಗಿರುವುದನ್ನು ಕಂಡು ಮುನಿರಾಜು ಅಚ್ಚರಿಗೊಂಡಿದ್ದರು.

ವಿಷಯ ತಿಳಿಯುತ್ತಿದ್ದಂತೆ ಅಕ್ಕ ಪಕ್ಕದ ಗ್ರಾಮಸ್ಥರು ಮುಗಿಬಿದ್ದು ಕೋಳಿಮರಿಯನ್ನು ವೀಕ್ಷಣೆ ಮಾಡುತ್ತಿದ್ದಾರೆ. ಸಾಮಾನ್ಯವಾಗಿ ಕೋಳಿ ಇರುವ ಎರಡು ಕಾಲುಗಳ ಪಕ್ಕದಲ್ಲಿ ಮತ್ತೆರಡು ಚಿಕ್ಕ ಕಾಲುಗಳು ಹುಟ್ಟಿವೆ ಇದೊಂದು ಅಪರೂಪದ ಕೋಳಿಮರಿ ನಾಲ್ಕು ಕಾಲುಗಳಲ್ಲಿ ಚಲನವಲನ ಸಾರ್ವಜನಿಕರು ಕುತೂಹಲದಿಂದ ಮೂಡಿಸಿದೆ.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

6 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

10 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

17 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

18 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago