Categories: ರಾಜ್ಯ

ಅಚ್ಚರಿ: ಕೋಳಿ ಮರಿಗೆ ನಾಲ್ಕು ಕಾಲು: ಆ

ರಾಮನಗರ: ಸಾಮಾನ್ಯವಾಗಿ ಕೋಳಿಗೆ ಎರಡು ಕಾಲು ಇರುತ್ತದೆ ಆದರೆ ಇಲ್ಲೊಂದು ನಾಲ್ಕು ಕಾಲಿನ ವಿಲಕ್ಷಣ ಕೋಳಿ ಮರಿಯೊಂದು ಮೊಟ್ಟೆಯಿಂದ ಹೊರ ಬಂದಿದ್ದು, ಗ್ರಾಮಸ್ಥರ ಅಚ್ಚರಿಗೆ ಕಾರಣವಾಗಿದೆ.

ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ಮರಳವಾಡಿ ಹೋಬಳಿಯ ಮಲ್ಲೇನಹಳ್ಳಿ ಗ್ರಾಮದ ಮುನಿರಾಜು ಎಂಬುವರ ಮನೆಯಲ್ಲಿ ನಾಲ್ಕು ಕಾಲು ಇರುವ ಕೋಳಿ ಮರಿ ಜನನ ವಾಗಿರುವುದು ಎಲ್ಲರ ಅಚ್ಚರಿಗೆ ಕಾರಣವಾಗಿದೆ.

ಮಲ್ಲೇನಹಳ್ಳಿ ಮುನಿರಾಜು ರೈತರಾಗಿದ್ದು ಉಪಕಸುಬಾಗಿ ಕೋಳಿ ಸಾಕಾಣಿಕೆಯನ್ನು ಮಾಡುತ್ತಿದ್ದಾರೆ. ಇತ್ತೀಚಿಗೆ ಕೋಳಿ ಒಂದು ಇಟ್ಟಿದ್ದ 15ಕ್ಕೂ ಹೆಚ್ಚು ಮೊಟ್ಟೆಗಳಿಗೆ ಮರಿ ಮಾಡಲು ಕಳೆದ 20 ದಿನಗಳಿಂದ ಕಾವು ಕೊಟ್ಟಿತ್ತು.

ಶುಕ್ರವಾರ ಮೊಟ್ಟೆಗಳು ಒಡೆದು ಮರಿಗಳು ಜನನವಾಗಿತ್ತು. ಅದರಲ್ಲಿ ನಾಲ್ಕು ಕಾಲುವುಳ್ಳ ಕೋಳಿ ಮರಿ ಜನನ ವಾಗಿರುವುದನ್ನು ಕಂಡು ಮುನಿರಾಜು ಅಚ್ಚರಿಗೊಂಡಿದ್ದರು.

ವಿಷಯ ತಿಳಿಯುತ್ತಿದ್ದಂತೆ ಅಕ್ಕ ಪಕ್ಕದ ಗ್ರಾಮಸ್ಥರು ಮುಗಿಬಿದ್ದು ಕೋಳಿಮರಿಯನ್ನು ವೀಕ್ಷಣೆ ಮಾಡುತ್ತಿದ್ದಾರೆ. ಸಾಮಾನ್ಯವಾಗಿ ಕೋಳಿ ಇರುವ ಎರಡು ಕಾಲುಗಳ ಪಕ್ಕದಲ್ಲಿ ಮತ್ತೆರಡು ಚಿಕ್ಕ ಕಾಲುಗಳು ಹುಟ್ಟಿವೆ ಇದೊಂದು ಅಪರೂಪದ ಕೋಳಿಮರಿ ನಾಲ್ಕು ಕಾಲುಗಳಲ್ಲಿ ಚಲನವಲನ ಸಾರ್ವಜನಿಕರು ಕುತೂಹಲದಿಂದ ಮೂಡಿಸಿದೆ.

Ramesh Babu

Journalist

Recent Posts

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

14 hours ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

20 hours ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

24 hours ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

1 day ago

ಉಪೇಂದ್ರ ಮತ್ತು ಪ್ರಜಾಕೀಯ……..

ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…

2 days ago

ಗಾನಕೋಗಿಲೆ ಎಸ್. ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…

3 days ago