ಬೆಂಗಳೂರಿನ ಅಜೀಂ ಪ್ರೇಮ್ ಜಿ ವಿಶ್ವವಿದ್ಯಾನಿಲಯದ ಆಡಳಿತ ಮಂಡಳಿ ವಿರುದ್ಧ ಹೋರಾಟ ನಡೆಸುತ್ತಿದ್ದಾಗ ಉಪವಾಸ ಸತ್ಯಾಗ್ರಹ ನಿರತ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆಯನ್ನು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಖಂಡಿಸಿದ್ದು, ಸಾವನ್ನಪ್ಪಿರುವ ವಿದ್ಯಾರ್ಥಿಯ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ದೊಡ್ಡಬಳ್ಳಾಪುರ ತಾಲ್ಲೂಕು ಸಮಿತಿ ಆಗ್ರಹಿಸಿದೆ.
ಎಸ್ಎಫ್ಐ ದೊಡ್ಡಬಳ್ಳಾಪುರ ತಾಲ್ಲೂಕು ಅಧ್ಯಕ್ಷ ನಟರಾಜು ಮಾಹಿತಿ ನೀಡಿ, ವಿವಿಧ ಬೇಡಿಕೆಗಳ ಈಡೇರಿಕೆಗಾಗಿ 12 ದಿನಗಳಿಂದ ಕ್ಯಾಂಪಸ್ ಒಳಗೆ ಹೋರಾಟ ನಡೆಸುತ್ತಿದ್ದರು. ಈ ಹೋರಾಟಕ್ಕೆ ಅಜೀಂ ಪ್ರೇಮ್ ಜಿ ಯುನಿವರ್ಸಿಟಿ ಆಡಳಿತ ಮಂಡಳಿ ಸೂಕ್ತವಾಗಿ ಸ್ಪಂದಿಸದ ಕಾರಣ ವಿದ್ಯಾರ್ಥಿಗಳ ಹೋರಾಟ ಸಮಿತಿ ಮೂರು ದಿನಗಳಿಂದ ಉಪವಾಸ ಸತ್ಯಾಗ್ರಹ ಹೋರಾಟವನ್ನು ನಡೆಸಿದ್ದರು.
ಈ ಘಟನೆಯನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡು ಸಮಗ್ರ ತನಿಖೆಯನ್ನು ನಡೆಸಿ ಅಜೀಂ ಪ್ರೇಮ್ ಜಿ ಯೂನಿವರ್ಸಿಟಿಯ ಆಡಳಿತ ಮಂಡಳಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಆಗ್ರಹಿಸಲಾಗಿದೆ ಎಂದರು.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…