ಒಂಟಿ ವೃದ್ಧೆಯನ್ನು ಟಾರ್ಗೆಟ್ ಮಾಡಿಕೊಂಡ ಕಳ್ಳರು, ಅಜ್ಜಿ ಬಳಿ ಇದ್ದ ಒಡವೆ ಕದ್ದು ಪರಾರಿಯಾಗಿರುವ ಘಟನೆ ಇಂದು ಮಧ್ಯಾಹ್ನ ತಾಲೂಕಿನ ಕಂಟನಕುಂಟೆ ಹೊರವಲಯದಲ್ಲಿ ನಡೆದಿದೆ..
ಕಂಟನಕುಂಟೆ ಗ್ರಾಮದಿಂದ ಸುಮಾರು ಒಂದು ಕಿಲೋ ಮೀಟರ್ ದೂರದಲ್ಲಿರುವ ಹಿಂದೂಪುರ-ಯಲಹಂಕ ಹೆದ್ದಾರಿ ಪಕ್ಕದ ಜಮೀನಿನಲ್ಲಿ ವಡ್ಡರಹಳ್ಳಿ ಗ್ರಾಮದ ನಿವಾಸಿ ಚಂದ್ರಮ್ಮ (75), ಒಂಬ್ಬೊಂಟಿಯಾಗಿ ತನ್ನ ಪಾಡಿಗೆ ತಾನು ಹಸುಗಳನ್ನು ಮೇಯಿಸುತ್ತಿದ್ದರು.
ಇದನ್ನೇ ಬಂಡವಾಳ ಮಾಡಿಕೊಂಡು ಬೈಕ್ ನಲ್ಲಿ ಬಂದ ಮಹಿಳೆ ಹಾಗೂ ಒಬ್ಬ ಯುವಕ, ಹೆದ್ದಾರಿ ಪಕ್ಕದಲ್ಲಿ ಬೈಕ್ ನಿಲ್ಲಿಸಿ ವೃದ್ಧೆ ಬಳಿ ಬಂದು ಕೆಲಕಾಲ ಅಜ್ಜಿ ಜೊತೆ ಮಾತುಕತೆಗಿಳಿದು ಯಾಮಾರಿಸಿ, ಗಟ್ಟಿಯಾಗಿ ಹಿಡಿದುಕೊಂಡು ಮೈಮೇಲೆ ಇದ್ದ ಒಡವೆಗಳನ್ನು ಕದ್ದು ಬೈಕ್ ನಲ್ಲಿ ಪರಾರಿಯಾಗಿದ್ದಾರೆ ಎಂದು ವೃದ್ಧೆ ಚಂದ್ರಮ್ಮ ಮಾಹಿತಿ ನೀಡಿದ್ದಾರೆ.
ಮಾಹಿತಿ ತಿಳಿದ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ…
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…