ಒಂಟಿ ವೃದ್ಧೆಯನ್ನು ಟಾರ್ಗೆಟ್ ಮಾಡಿಕೊಂಡ ಕಳ್ಳರು, ಅಜ್ಜಿ ಬಳಿ ಇದ್ದ ಒಡವೆ ಕದ್ದು ಪರಾರಿಯಾಗಿರುವ ಘಟನೆ ಇಂದು ಮಧ್ಯಾಹ್ನ ತಾಲೂಕಿನ ಕಂಟನಕುಂಟೆ ಹೊರವಲಯದಲ್ಲಿ ನಡೆದಿದೆ..
ಕಂಟನಕುಂಟೆ ಗ್ರಾಮದಿಂದ ಸುಮಾರು ಒಂದು ಕಿಲೋ ಮೀಟರ್ ದೂರದಲ್ಲಿರುವ ಹಿಂದೂಪುರ-ಯಲಹಂಕ ಹೆದ್ದಾರಿ ಪಕ್ಕದ ಜಮೀನಿನಲ್ಲಿ ವಡ್ಡರಹಳ್ಳಿ ಗ್ರಾಮದ ನಿವಾಸಿ ಚಂದ್ರಮ್ಮ (75), ಒಂಬ್ಬೊಂಟಿಯಾಗಿ ತನ್ನ ಪಾಡಿಗೆ ತಾನು ಹಸುಗಳನ್ನು ಮೇಯಿಸುತ್ತಿದ್ದರು.
ಇದನ್ನೇ ಬಂಡವಾಳ ಮಾಡಿಕೊಂಡು ಬೈಕ್ ನಲ್ಲಿ ಬಂದ ಮಹಿಳೆ ಹಾಗೂ ಒಬ್ಬ ಯುವಕ, ಹೆದ್ದಾರಿ ಪಕ್ಕದಲ್ಲಿ ಬೈಕ್ ನಿಲ್ಲಿಸಿ ವೃದ್ಧೆ ಬಳಿ ಬಂದು ಕೆಲಕಾಲ ಅಜ್ಜಿ ಜೊತೆ ಮಾತುಕತೆಗಿಳಿದು ಯಾಮಾರಿಸಿ, ಗಟ್ಟಿಯಾಗಿ ಹಿಡಿದುಕೊಂಡು ಮೈಮೇಲೆ ಇದ್ದ ಒಡವೆಗಳನ್ನು ಕದ್ದು ಬೈಕ್ ನಲ್ಲಿ ಪರಾರಿಯಾಗಿದ್ದಾರೆ ಎಂದು ವೃದ್ಧೆ ಚಂದ್ರಮ್ಮ ಮಾಹಿತಿ ನೀಡಿದ್ದಾರೆ.
ಮಾಹಿತಿ ತಿಳಿದ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ…
ದೊಡ್ಡಬಳ್ಳಾಪುರ: ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು…
ದೊಡ್ಡಬಳ್ಳಾಪುರ: ಕ್ಷಯರೋಗ ಮುಕ್ತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಟಿಬಿ ಮುಕ್ತ ಭಾರತ್ ಅಭಿಯಾನ’ದ…
ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಎಕ್ಸ್ಪ್ರೆಸ್ ರೈಲು ಹರಿದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಒಂದು ಮಗು…
ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…
ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್ಸ್ಪೆಕ್ಟರ್…