ಹೊಸಕೋಟೆ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದ್ದು, ಬಸ್ಸುಗಳಲ್ಲಿ ಜನರ ಗಮನ ಬೇರೆಡೆ ಸೆಳೆದು ಕಳ್ಳತನ ಮಾಡುತ್ತಿದ್ದ ಕುಪ್ಪಂ ಗ್ಯಾಂಗ್ ನ್ನು ಅರೆಸ್ಟ್ ಮಾಡಲಾಗಿದೆ.
ಬಂಧಿತರಿಂದ ಸುಮಾರು 12 ಲಕ್ಷ ಮೌಲ್ಯದ ಚಿನ್ನಾಭರಣ, 3.50 ಲಕ್ಷ ನಗದು ವಶಕ್ಕೆ ಪಡೆಯಲಾಗಿದೆ..
ಈ ಖತರ್ನಾಕ್ ಕುಪ್ಪಂ ಗ್ಯಾಂಗ್ ಕಳ್ಳತನಕ್ಕೆ ಮಕ್ಕಳನ್ನ ಬಳಕೆ ಮಾಡುತ್ತಿದ್ದರು. ಬಸ್ಸಿನಲ್ಲಿ ಪ್ರಯಾಣ ಮಾಡುವ ವೇಳೆ ಮಕ್ಕಳಿಗೆ ವಾಂತಿ ಬರುವ ನಾಟಕ ಮಾಡಿ, ಪ್ರಯಾಣಿಕ ಗಮನ ಬೇರೆಡೆ ಸೆಳೆದು ಆಭರಣಗಳನ್ನ ಕದಿಯುತ್ತಿದ್ದರು.
ಇದೇ ರೀತಿ ಬಸ್ಸಿನಲ್ಲಿ ಪ್ರಯಾಣ ಬೆಳೆಸಿದ್ದ ವೃದ್ಧೆಯ ಗಮನ ಬೇರೆಡೆ ಸೆಳೆದು ಕಳ್ಳತನ ಮಾಡಲಾಗಿತ್ತು. ವೃದ್ದೆ ಧರಿಸಿದ್ಧ 74ಗ್ರಾಂ ಚಿನ್ನದ ಮಾಂಗಲ್ಯ ಸರ ಕದ್ದು ಎಸ್ಕೇಪ್ ಆಗಿದ್ದರು. ಈ ಕುರಿತು ದೂರು ದಾಖಲಿಸಿಕೊಂಡು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಸದ್ಯ ಬಂಧನ ಮಾಡಲಾಗಿದೆ.
ಸದ್ಯ ಎ1 ದಿವಾಕರ್ ಬಂಧಿಸಿದ್ದು, ಉಳಿದ ಎ2 ಮೋನಿಷಾ, ಎ3 ಗಾಯಿತ್ರಿ, ಎ4 ಇಂದ್ರಾ ಆರೋಪಿಗಳಿಗೆ ಶೋಧ ಕಾರ್ಯ ನಡೆಯುತ್ತಿದೆ.
ಪ್ರಕರಣ ಭೇದಿಸಿರುವ ಡಿವೈಎಸ್ಪಿ ಮಲ್ಲೇಶ್, ಇನ್ಸ್ಪೆಕ್ಟರ್ ಗೋವಿಂದ್ ಅವರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಸ್ಪಿ ಚಂದ್ರಕಾಂತ್ ಅವರಿಂದ ಪ್ರಶಂಸೆ ವ್ಯಕ್ತವಾಗಿದೆ..
ಇಂದು ಸಂಜೆ 4:05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ…
ಬಿಜೆಪಿ ನಾಯಕರಿಗೆ ಈಗ ಏಕಾಏಕಿ ದಲಿತ ಮತ್ತು ಹಿಂದುಳಿದ ಸಮುದಾಯಗಳ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ಕಾಳಜಿ ಬಂದುಬಿಟ್ಟಿದೆ. ಕಾಲ, ಸಂದರ್ಭ…
ಇಂದು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ, ನಿಯೋಜಿತ ಸಿಎಂ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯ…
ನಡೆ ನುಡಿ - ಮಾತು ಕೃತಿಯ ನಡುವೆ ದೊಡ್ಡ ಕಂದರ ಸೃಷ್ಠಿಯಾಗಿರುವ ಸನ್ನಿವೇಶದಲ್ಲಿ ಪ್ರಮಾಣ ವಚನ ಒಂದು ಅಧೀಕೃತ ಮತ್ತು…
ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…
ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…